Isha Gramotsava; A grand welcome to the Heggadihalli team from Doddaballapura

ಈಶ ಗ್ರಾಮೋತ್ಸವ; ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ತಂಡಕ್ಕೆ ಸದ್ಗುರು ಸನ್ನಿಧಿಯಲ್ಲಿ ಭರ್ಜರಿ ಸ್ವಾಗತ

ಬೆಂಗಳೂರು: ಈಶ ಗ್ರಾಮೋತ್ಸವ 2025ರ (Isha Gramotsava) ಪುರುಷರ ವಾಲಿಬಾಲ್‌ನಲ್ಲಿ ರನ್ನರ್ ಅಪ್‌ ಪ್ರಶಸ್ತಿ ಪಡೆದ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ತಂಡಕ್ಕೆ ಇಂದು ಸದ್ಗುರು ಸನ್ನಿಧಿಯಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು.

ಸ್ವಯಂಸೇವಕರು ಮತ್ತು ಸ್ಥಳೀಯರು ಆಟಗಾರರನ್ನು ಹೂಮಾಲೆ, ಸಿಹಿತಿಂಡಿಗಳು ಮತ್ತು ಸಂಭ್ರಮಾಚರಣೆಗಳೊಂದಿಗೆ ಸ್ವಾಗತಿಸಿದರು. ತಂಡದವರು, ತಮ್ಮ ಕುಟುಂಬದವರೊಂದಿಗೆ ಜೊತೆಗೂಡಿ ಸದ್ಗುರು ಸನ್ನಿಧಿಯ ನಾಗ ಮಂಟಪ, ಯೋಗೇಶ್ವರ ಲಿಂಗ ಮತ್ತು ಆದಿಯೋಗಿಯ ದರ್ಶನವನ್ನು ಪಡೆದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿಯ ಬಿ.ರಂಜಿತ್ ನೇತೃತ್ವದ ತಂಡ ಈ ವರ್ಷ ಮೊದಲ ಬಾರಿಗೆ ಈಶ ಗ್ರಾಮೋತ್ಸವದಲ್ಲಿ ಭಾಗವಹಿಸಿತು.

6 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದಿಂದ 4,249ಕ್ಕೂ ಹೆಚ್ಚು ಪುರುಷರ ವಾಲಿಬಾಲ್ ತಂಡಗಳೊಂದಿಗೆ ಸ್ಪರ್ಧಿಸಿ, ಈ ತಂಡವು ಸೆಪ್ಟೆಂಬರ್ 21ರಂದು ಕೊಯಂಬತ್ತೂರಿನ ಈಶ ಯೋಗ ಕೇಂದ್ರದಲ್ಲಿ ನಡೆದ ರಾಷ್ಟ್ರ ಮಟ್ಟದ ಫೈನಲ್ಸ್ ಪಂದ್ಯಕ್ಕೆ ಮುನ್ನಡೆಯಿತು.

ಸದ್ಗುರುಗಳ ಸಾನ್ನಿಧ್ಯದಲ್ಲಿ ನಡೆದ ಫೈನಲ್ಸ್ ಪಂದ್ಯದಲ್ಲಿ, ಮುಖ್ಯ ಅತಿಥಿಗಳಾದ ಕೇಂದ್ರ ಕ್ರೀಡಾ ಸಚಿವರಾದ ಲ ಮನ್ಸುಖ್ ಮಂಡಾವಿಯಾ, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಚೆಸ್ಸ್ ಗ್ರ್ಯಾಂಡ್‌ಮಾಸ್ಟರ್ ವೈಶಾಲಿ ರಮೇಶ್‌ಬಾಬು ಮತ್ತು ಪ್ಯಾರಾಲಿಂಪಿಕ್ ಪದಕ ವಿಜೇತೆ ಭಾವಿನಾ ಪಟೇಲ್ ಅವರುಗಳು ವೇದಿಕೆಯನ್ನು ಅಲಂಕರಿಸಿದ್ದರು.

ಸದ್ಗುರುಗಳ ಉಪಸ್ಥಿತಿಯಲ್ಲಿ ನಡೆದ ಗ್ರಾಂಡ್ ಫಿನಾಲೆಯಲ್ಲಿ ಸೈನಾ ನೆಹ್ವಾಲ್ ಅವರಿಂದ ಆಟಗಾರರನ್ನು ಸನ್ಮಾನಿಸಲಾಯಿತು ಮತ್ತು ಆಟಗಾರರು ₹3 ಲಕ್ಷ ನಗದು ಬಹುಮಾನವನ್ನೂ ಸ್ವೀಕರಿಸಿದರು.

ವೃತ್ತಿಪರ ಸೌಲಭ್ಯಗಳಿಂದ ದೂರವಿದ್ದರೂ, ಹೆಗ್ಗಡಿಹಳ್ಳಿಯ ಯುವ ಕ್ರೀಡಾಪಟುಗಳು ತಮ್ಮ ಪ್ರಾಮಾಣಿಕ ಪ್ರಯತ್ನ ಮತ್ತು ಉತ್ಸಾಹದಿಂದ ಮುನ್ನಡೆದು, ಗ್ರಾಮೀಣ ಭಾರತದ ಅನೇಕ ಮಹತ್ವಾಕಾಂಕ್ಷೆಯ ಕ್ರೀಡಾಪಟುಗಳಿಗೆ ಮಾದರಿಯಾಗಿದ್ದಾರೆ.

ಪ್ರಸ್ತುತ ವರ್ಷದ ಈಶ ಗ್ರಾಮೋತ್ಸವದಲ್ಲಿ ಕರ್ನಾಟಕದ 18 ಜಿಲ್ಲೆಗಳಿಂದ 7,200ಕ್ಕೂ ಹೆಚ್ಚು ಗ್ರಾಮೀಣ ಸ್ಪರ್ಧಿಗಳು ದಾಖಲೆಯ ಮಟ್ಟದಲ್ಲಿ ಭಾಗವಹಿಸಿದ್ದು, ಇದು ರಾಜ್ಯದ ಗ್ರಾಮೀಣ ಕ್ರೀಡೆಗಳ ಅತಿದೊಡ್ಡ ಆಚರಣೆಗಳಲ್ಲಿ ಒಂದಾಗಿದೆ.

ರಾಷ್ಟ್ರೀಯ ಮಟ್ಟದಲ್ಲಿ, ಈಶ ಗ್ರಾಮೋತ್ಸವ 2025ರ ಆವೃತ್ತಿಯು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ, ತೆಲಂಗಾಣ ಮತ್ತು ಮೊದಲ ಬಾರಿಗೆ ಒಡಿಶಾ ಸೇರಿದಂತೆ ಆರು ರಾಜ್ಯಗಳಲ್ಲಿ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಿತು.

ಈ ಬಾರಿಯ ಉತ್ಸವವು 183 ಸ್ಥಳಗಳು, 5,472 ತಂಡಗಳು, 12,000 ಕ್ಕೂ ಹೆಚ್ಚು ಮಹಿಳೆಯರನ್ನು ಒಳಗೊಂಡಂತೆ ಒಟ್ಟು 63,220 ಸ್ಪರ್ಧಿಗಳು, ಮತ್ತು 35,000ಕ್ಕೂ ಹೆಚ್ಚು ಹಳ್ಳಿಗಳ ಪ್ರಾತಿನಿಧ್ಯಕ್ಕೆ ಸಾಕ್ಷಿಯಾಯಿತು.

2004ರಲ್ಲಿ ಸದ್ಗುರುಗಳು ಚಾಲನೆ ನೀಡಿದ ಈಶ ಗ್ರಾಮೋತ್ಸವದ ಉದ್ದೇಶವು ಗ್ರಾಮೀಣ ಜನರ ಜೀವನದಲ್ಲಿ ಕ್ರೀಡೆ ಮತ್ತು ಆಟದ ಚೈತನ್ಯವನ್ನು ತರುವುದಾಗಿದೆ.

ವಿಶಿಷ್ಟ ಸ್ವರೂಪದಲ್ಲಿ, ಈಶ ಗ್ರಾಮೋತ್ಸವವು ವೃತ್ತಿಪರ ಆಟಗಾರರಿಗಲ್ಲದೆ, ದಿನಗೂಲಿ ಕಾರ್ಮಿಕರು, ಮೀನುಗಾರರು ಮತ್ತು ಗೃಹಿಣಿಯರಂತಹ ಗ್ರಾಮೀಣ ಜನಸಾಮಾನ್ಯರಿಗೆ ತಮ್ಮ ದೈನಂದಿನ ಜೀವನದಿಂದ ಬಿಡುವು ಪಡೆದು ಕ್ರೀಡೆಯ ಸಂಭ್ರಮ ಮತ್ತು ಐಕ್ಯತೆಯ ಶಕ್ತಿಯನ್ನು ಆನಂದಿಸಲು ವೇದಿಕೆ ಮಾಡಿಕೊಟ್ಟಿದೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!