ಗುಡ್ಮಾರ್ನಿಂಗ್ ನ್ಯೂಸ್: ಆತಂಕ ಸೃಷ್ಟಿಸಿದ್ದ ಪುಡಿ ರೌಡಿಗಳ ಬಂಧನ

Arrest of rowdies

ಬೆಂಗಳೂರು; ದೊಡ್ಡಬಳ್ಳಾಪುರ ಸೇರಿದಂತೆ ವಿವಿಧೆಡೆ ಚಾಲಕರ ಸುಲಿಗೆ ಮಾಡಿ, ಹಲ್ಲೆ ನಡೆಸಿದ್ದ ಪುಡಿ ರೌಡಿಗಳನ್ನ (Rowdies) ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮೂವರು ಅಪ್ರಾಪ್ತರು ಸೇರಿ ಬ್ಯಾಡರಹಳ್ಳಿಯ ರತ್ನನಗರ ನಿವಾಸಿ ಜಯಂತ್ (19 ವರ್ಷ), ಲಿಖಿತ್ (18 ವರ್ಷ), ಕಾಮಾಕ್ಷಿ ಪಾಳ್ಯದ ಗಗನ್ (23 ವರ್ಷ) ಎಂದು ಗುರುತಿಸಲಾಗಿದೆ.

ಗುರುವಾರ ಬೆಳಗ್ಗಿನ ಜಾವ ದೊಡ್ಡಬಳ್ಳಾಪುರ (Doddaballapura) ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಡಿ ರೌಡಿಗಳ (Rowdy) ಗುಂಪೊಂದು ಆಟೋದಲ್ಲಿ ಬಂದು ವಾಹನ ಚಾಲಕರನ್ನು ಹೆದರಿಸಿ, ಹಣ ದೋಚುವ ಕೆಲಸ ಮಾಡಿತ್ತು.

ಇದಕ್ಕೂ ಮುನ್ನ ಇದೇ ರೌಡಿಗಳ ಗುಂಪು ಬ್ಯಾಡರಹಳ್ಳಿಯ ವಾಲ್ಮೀಕಿನಗರ ಮತ್ತು ಎಪಿನಗರದ ಮುದ್ದಯ್ಯನಪಾಳ್ಯದಲ್ಲಿ ಕಾರ್ ಗ್ಲಾಸ್ ಒಡೆದಿದಿದ್ದು, ನಂತರ ಮಾದನಾಯಕನಹಳ್ಳಿಯ ಮಾಗಡಿ ರೋಡ್ ಲಿಮಿಟ್ಸ್‌ನಲ್ಲಿ ವಾಹನ ಚಾಲಕರಿಗೆ ಮಾರಕಾಸ್ತ್ರ ತೋರಿಸಿ, ಬೆದರಿಸಿ ಹಣ ದೋಚಿದ್ದಾರೆ. ಲಾರಿ ಗ್ಲಾಸ್ ಒಡೆದ ದುರುಳರು ಚಾಲಕ ಮಲಗಿರುವುದನ್ನು ಗಮನಿಸಿ, ಹಣಕ್ಕಾಗಿ ಬೆದರಿಕೆ ಹಾಕಿದ್ದರು.

ಚಾಲಕ ಹೆದರಿ ಅವರಿಗೆ ಹಣ ಕೊಡಲು ಮುಂದಾದರೂ ಲಾಂಗ್ ಬೀಸಿ ಗಾಯಗೊಳಿಸಿದ್ದಾರೆ. ಜೊತೆಗೆ ಗ್ಯಾಂಗ್ ಮೊಬೈಲ್ ಫೋನ್ ಹಾಗೂ 5 ಸಾವಿರ ರೂ. ಹಣವನ್ನು ದೋಚಿ ಪರಾರಿಯಾಗಿದ್ದರು.

ಸಿಕ್ಕ ಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್ ತೋರಿಸಿ, ಬೆದರಿಸಿ ಹಣ ವಸೂಲಿ ಮಾಡಿದೆ. ಕುಡಿದ ಮತ್ತಿನಲ್ಲಿ ಸುಮಾರು 20 ವಾಹನಗಳ ಗ್ಲಾಸ್‌ಗಳನ್ನು ಪುಡಿ ಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅನ್ನಪೂರ್ಣೇಶ್ವರಿ ನಗರದ ಮುದ್ದಿನಪಾಳ್ಯದ ಬಳಿ ಐದಾರು ವಾಹನಗಳ ಗ್ಲಾಸ್ ಗಳನ್ನು ಒಡೆದು ಹಾಕಿದ್ದರು.

ಗುರುವಾರ ಬೆಳಗ್ಗಿನ ಜಾವ ಮೂರು ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಆಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ಅಡ್ಡಗಟ್ಟಿರುವ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಚಾಲಕರು ಮತ್ತು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ಹಣ, ಮೊಬೈಲ್ ದೋಚಿ ಪರಾರಿಯಾಗಿತ್ತು.

ಆಟೋದಲ್ಲಿ ಬಂದಿರುವ 6 ಮಂದಿ ದುಷ್ಕರ್ಮಿಗಳು ಎರಡು ವಾಹನಗಳ ಮೇಲೆ ದಾಳಿ ನಡೆಸಿದ್ದರು.

ಘಟನೆಯಲ್ಲಿ ಕೋಲಾರ ಮೂಲದ ಮುನಿರಾಜು (33 ವರ್ಷ) ಎನ್ನುವವರು ಕ್ಯಾಂಟರ್‌ನಲ್ಲಿ ನೆಲಮಂಗಲದ ದಾಸರಯ್ಯನ ಪುರದ ಮಾರುಕಟ್ಟೆ ತರಕಾರಿ ಅನ್‌ಲೋಡ್ ಮಾಡಿ ಬರುವ ವೇಳೆ ಆಲಹಳ್ಳಿ ಬಳಿ ಎಕ್ಸಲೇಟರ್ ತೊಂದರೆ ಉಂಟಾಗಿ ರಸ್ತೆ ಬದಿ ನಿಲ್ಲಿಸಿ, ಕೆಳಗೆ ತೆರಳಿ ದುರಸ್ತಿಗೆ ಮುಂದಾಗಿದ್ದಾರೆ.

ಈ ವೇಳೆ ಆಟೋದಲ್ಲಿ ಬಂದ 6 ಮಂದಿ ದುಷ್ಕರ್ಮಿಗಳು ಏಕಾಏಕಿ ಕ್ಯಾಂಟರ್ ಗಾಜುಗಳನ್ನು ಲಾಂಗ್‌ನಿಂದ ಹೊಡೆದಿದ್ದಾರೆ, ಶಬ್ದ ಕೇಳಿ ಕ್ಯಾಂಟರ್ ಕೆಳಗೆ ರಿಪೇರಿ ಮಾಡುತ್ತಿದ್ದ ಮುನಿರಾಜು ಹೊರಗೆ ಬಂದಾಗ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಮುಂದಾಗಿದ್ದಾರೆ, ಈ ವೇಳೆ ತಪ್ಪಿಸಿಕೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡುವ ವೇಳೆ ಆಯ ತಪ್ಪಿ ಬಿದ್ದಿದ್ದು, ಬೆನ್ನತ್ತಿ ಬಂದ ದುಷ್ಕರ್ಮಿಗಳು ಚಾಕು, ಲಾಂಗ್‌ನಿಂದ ಗಂಭೀರವಾಗಿ ಹಲ್ಲೆ ನಡೆಸಿ, ಮೊಬೈಲ್ ಸೇರಿದಂತೆ 75 ಸಾವಿರ ಮೌಲ್ಯದ ಹಣ ದೋಚಿದ್ದರು.

ಈ ಘಟನೆ ಬೆನ್ನಲ್ಲೇ ಸ್ವಲ್ಪ ದೂರದಲ್ಲಿ ಮತ್ತೊಂದು ಗೂಡ್ಸ್ ವಾಹನವನ್ನು ಅಡ್ಡಗಟ್ಟಿರುವ ಇದೇ ದುಷ್ಕರ್ಮಿಗಳು ಚಾಲಕ ಸೇರಿದಂತೆ ಮೂವರ ಮೇಲೆ ದಾಳಿ ಮಾಡಿ ಹಣ, ಮೊಬೈಲ್ ದೋಚಿದ್ದರೆ ಮತ್ತೆ ಮದುರೆ ಬಳಿ ಕೂಡ ವಾಹನಗಳ ಅಡ್ಡಗಟ್ಟಿ ಲೂಟಿ ಮಾಡಿ ಪರಾರಿಯಾಗಿದ್ದರು.

ಘಟನೆ ಬಗ್ಗೆ ಎಪಿ ನಗರ, ಬ್ಯಾಡರಹಳ್ಳಿ, ಮಾದನಾಯಕನಹಳ್ಳಿ ಮತ್ತು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]