Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

Astrology: ಸೋಮವಾರ, ಸೆಪ್ಟೆಂಬರ್ 29, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ನಿಮ್ಮ ಜೀವನದಲ್ಲಿ ನಡೆಯುವ ಸನ್ನಿವೇಶಗಳು ನಿಮಗೆ ಅನುಕೂಲವಾಗಿದ್ದರೂ ನೀವು ಬೇರೆಯವರ ಮೇಲೆ ಅವಲಂಬಿತ ರಾಗಿದ್ದರೆ ಸಮಸ್ಯೆಗಳು ಎದುರಾಗಬಹುದು. ಜಾಗೃತರಾಗಿರಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ವೃಷಭ ರಾಶಿ: ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ ಹೆಚ್ಚು ಜಾಗೃತರಾಗುತ್ತೀರಿ. ಇತರರನ್ನು ಹೆಚ್ಚು ಗೌರವದಿಂದ ನೋಡುತ್ತೀರಿ. ನಿಮ್ಮ ನಿರ್ಧಾರಗಳು ನಿಮಗೆ ತೃಪ್ತಿ ನೀಡಲಿದೆ.(ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ದಿನದ ಆರಂಭದಲ್ಲಿ ನಿಮ್ಮ ಆತ್ಮವಿಶ್ವಾಸ ಕುಗ್ಗಿದರೆ ಚಿಂತಿಸಬೇಡಿ, ಕಾಲ ಕಳೆದಂತೆ ಪರಿಸ್ಥಿತಿ ಉತ್ತಮವಾಗಲಿದೆ. ಮಧ್ಯಾಹ್ನದ ವೇಳೆಗೆ ಉತ್ಸಾಹ ದಿಂದಿರಲಿದ್ದೀರಿ. ದೇಹ ವಿಶ್ರಾಂತಿ ಬಯಸಿದರೆ, ವಿಶ್ರಾಂತಿ ಪಡೆದುಕೊಳ್ಳಿ. ಅತಿಯಾದ ಒತ್ತಡಕ್ಕೆ ಸಿಲುಕದಿರಿ.(ಭಕ್ತಿಯಿಂದ ಶ್ರೀ ಶಕ್ತಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಮನೆಯಲ್ಲಿ ಶುಭ ಸಮಾ ರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿದೆ.ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ.ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರು ತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆಯಿಂದ ಬಳಸಿ. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಸಿಂಹ ರಾಶಿ: ಈವರೆಗೆ ಹಣಕಾಸಿನ ತೊಂದರೆ ಎದುರಾಗಿದ್ದರೂ ಮುಂದಿನ ದಿನಗಳಲ್ಲಿ ಉತ್ತಮ ಫಲಿತಾಂಶಗಳನ್ನು ನಿರೀಕ್ಷಿಸಬಹುದು.ನೀವು ಎರಡು ಅಂಶಗಳ ಬಗ್ಗೆ ಗಮನವಿಟ್ಟುಕೊಳ್ಳ ಬೇಕು. ಒಂದು ತಾಳ್ಮೆ ಮತ್ತೊಂದು ಸಹನೆ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಎಲ್ಲಾ ಅಡೆತಡೆಗಳನ್ನು ಎದುರಿಸಿದ್ದೀರಿ.ಇತರರು ನಿಮ್ಮ ಆಜ್ಞೆ ಮತ್ತು ಸಲಹೆಗಳನ್ನು ನಿರಾಕರಿಸಿದರೆ ಒತ್ತಾಯಿಸಬೇಡಿ. ಬದಲಾಗಿ ಅವರೇ ಒಪ್ಪಿಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭ ವಾಗುವುದು.)

ತುಲಾ ರಾಶಿ: ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ,ನೀವು ಅಸಾಧಾರಣವಾಗಿ ಹೆಚ್ಚಿನ ಲಾಭವನ್ನು ಗಳಿಸಬಹುದು. ನೀವು ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಗೆ ಬಡ್ತಿ ಪಡೆಯುವ ಸಾಧ್ಯತೆಯಿದೆ. ಇಂದು ಹಣದ ಬಗ್ಗೆ ನಿಮ್ಮ ಚಿಂತೆ ಹೆಚ್ಚಾಗುತ್ತದೆ. ಜೊತೆಗೆ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ನೀವು ಹೆಚ್ಚು ಶ್ರಮಿಸಬೇಕು. ಕೆಲಸದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವ್ಯವಹಾರಗಳಲ್ಲಿ ಉತ್ತಮ ಅವಕಾಶಗಳು ಬರುವ ನಿರೀಕ್ಷೆಗಳಿವೆ. ಅದರಿಂದ ವಂಚಿತರಾಗದಿರಿ. ಮನಸ್ಸಿ ನಿಂದ ಆಲೋಚಿಸಬೇಡಿ.ಉದ್ವಿಗ್ನತೆಗೆ ಒಳಗಾಗದಿರಿ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸಲಹೆಗಳಿಂದ ಬರುವ ಒತ್ತಡಗಳಿಂದ ಹೊರಬನ್ನಿ. ನಿಮ್ಮ ನಿರ್ಧಾರಗಳಿಗೆ ಬದ್ಧರಾಗಿರಿ. ಸಂಗಾತಿಯು ವಿರುದ್ಧವಾದ ನಿರೀಕ್ಷೆಗಳನ್ನು ಹೊಂದಿದ್ದರೆ, ಅದರಿಂದ ಕುಗ್ಗಬೇಡಿ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ನೀವು ಯೋಚನೆ ಮಾಡಿ ಯೋಜಿಸಿದ ಕಾರ್ಯಗಳ ಮೇಲೆ ಗಮನಹರಿಸುವ ಸಮಯ ಬಂದಿದೆ.ಅದರತ್ತ ಗಮನಹರಿಸಿ. ವಿಳಂಬ ನೀತಿ ಅನುಸರಿಸದಿರಿ. ಸಾಧನೆ ಮಾಡು ವ ಸಮಯ ಸನ್ನಿಹಿತವಾಗಿದೆ. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿಮ್ಮ ಮನಸ್ಥಿತಿ ಶೀಘ್ರದಲ್ಲೇ ಹಗುರವಾಗುತ್ತದೆ, ನಿಮ್ಮ ಸ್ವಂತ ವೈಯಕ್ತಿಕ ಭಾವನಾತ್ಮಕ ಗುರಿಗಳೊಂದಿಗೆ ಮುಂದುವರಿಯಲು ಇದು ಉತ್ತಮ ಸಮಯ. ನಿಮ್ಮ ದೃಢ ನಿರ್ಧಾರಗಳು ಹಾಗೆಯೇ ಇರಲಿ. ನೀವು ಮಕ್ಕಳು ಅಥವಾ ಕಿರಿಯ ಸಂಬಂಧಗಳ ಜವಾಬ್ದಾರಿಯನ್ನು ಹೊಂದಿದ್ದರೆ ಮಾತ್ರ ನೀವು ಸಂತೃಪ್ತರಾಗಿರುತ್ತೀರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ: ನಿಮ್ಮೊಂದಿಗೆ ನೀವು ನಿಜವಾಗಿಯೂ ಶಾಂತಿಯಿಂದಿರಲು ಇನ್ನೂ ಕೆಲವು ಮಾರ್ಗಗಳಿವೆ.ಆದರೆ, ಇದು ಕೇವಲ ಭ್ರಮೆ ಎಂದು ನಿಮ್ಮ ಅಂತರಾಳದಲ್ಲಿ ನಿಮಗೆ ತಿಳಿದಿದೆ. ಆದ್ದರಿಂದ, ಪ್ರಸ್ತುತ ಸನ್ನಿವೇಶಗಳನ್ನು ಹೆಚ್ಚು ಮಾಡಿ, ವಿಶೇಷವಾಗಿ ಇತರ ಜನರು ನಿಮ್ಮ ಬಗ್ಗೆ ನಿಜವಾದ ಆಸಕ್ತಿಯನ್ನು ತೋರಿಸುತ್ತಿದ್ದಾರೆ.(ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಸಪ್ತಮಿ
ನಕ್ಷತ್ರ: ಮೂಲ ನಕ್ಷತ್ರ.

ಈ ದಿನದ ವಿಶೇಷ: ಸರಸ್ವತಿ ಹಬ್ಬ.
ದೇವಿ ಕಾಲರಾತ್ರಿ,ನವಿಲು ನೀಲಿ ಬಣ್ಣ, ನೈವೇದ್ಯ ಕೋಸಂಬರಿ, ಚಿತ್ರಾನ್ನ,ಮೊಸರನ್ನ

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ದೊಡ್ಡಬಳ್ಳಾಪುರ: KIADB ಭೂ ಸ್ವಾಧೀನ ವಿರೋಧಿಸಿ ಸಿಡಿದೆದ್ದ ರೈತರು.. ನಾಳೆ ಮುತ್ತಿಗೆ ಹಾಕಲು ಕರೆ

ದೊಡ್ಡಬಳ್ಳಾಪುರ: KIADB ಭೂ ಸ್ವಾಧೀನ ವಿರೋಧಿಸಿ ಸಿಡಿದೆದ್ದ ರೈತರು.. ನಾಳೆ ಮುತ್ತಿಗೆ ಹಾಕಲು

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ **** ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಪ್ರತಿಭಟನೆಗೆ ಮುಂದಾಗಿದ್ದಾರೆ.

[ccc_my_favorite_select_button post_id="120414"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಸಿಲಿಂಡರ್ ಅಭಾವ; ಹೋಟೆಲ್ ನಡೆಸಲಾಗದೆ ಮಾಲೀಕ ಆತ್ಮಹತ್ಯೆ..!

ಸಿಲಿಂಡರ್ ಅಭಾವ; ಹೋಟೆಲ್ ನಡೆಸಲಾಗದೆ ಮಾಲೀಕ ಆತ್ಮಹತ್ಯೆ..!

ಯುದ್ಧದ ಪರಿಣಾಮ ಸೂಕ್ತ ಮುಂಜಾಗ್ರತೆ ಕೈಗೊಳ್ಳದ ಕಾರಣ ಭಾರತೀಯರ ಮೇಲೆ ತೀವ್ರತರವಾದ ಸಂಕಷ್ಟ ಎದುರಾಗಿದ್ದು, ಪರದಾಡುವಂತಾಗಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಅಡುಗೆ ಅನಿಲ ಅಭಾವದಿಂದ ಹೋಟೆಲ್ ನಡೆಸುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ *** ನಗರದಲ್ಲಿ ನಡೆದಿದೆ‌.

[ccc_my_favorite_select_button post_id="120411"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!