Bihar election: Jai Kumar Singh shocked Nitish Kumar

Bihar election: ನಿತೀಶ್ ಕುಮಾರ್‌ಗೆ ಶಾಕ್ ಕೊಟ್ಟ ಪರಮಾಪ್ತ ಜೈ ಕುಮಾರ್ ಸಿಂಗ್..!

ಪಾಟ್ನಾ; ಬಿಹಾರ ಚುನಾವಣೆ (Bihar election) ದಿನಾಂಕ ಘೋಷಣೆ ಬೆನ್ನಲ್ಲೇ ಸಿಎಂ ನಿತೀಶ್ ಕುಮಾರ್ (Nitish Kumar) ಅವರಿಗೆ ಶಾಕ್ ಎದುರಾಗಿದ್ದು, ಜೆಡಿಯುನ ಹಿರಿಯ ನಾಯಕ ಮತ್ತು ನಿತೀಶ್ ಕುಮಾರ್ ಅವರಿಗೆ ಪರಮಾಪ್ತರಾಗಿದ್ದ ಜೈ ಕುಮಾರ್ ಸಿಂಗ್ (Jai Kumar Singh) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಈಗಾಗಲೇ ಬಿಹಾರ ಚುನಾವಣೆಗೂ ಮುನ್ನವೇ ವಿರೋಧ ಪಕ್ಷಗಳಾದ ಆರ್‌ಜೆಡಿ ಮತ್ತು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವೋಟ್ ಚೋರಿ (Vote Chori ಆರೋಪಿಸಿ ಇಡೀ ಬಿಹಾರ ರಾಜ್ಯದಲ್ಲಿ ಯಾತ್ರೆ ನಡೆಸುವ ಮೂಲಕ ಆಕ್ರಮಣಾಕಾರಿಯಾಗಿ ಮುಗಿಬಿದ್ದಿವೆ.

ಮತ್ತೊಂದೆಡೆ ಬಿಹಾರದ ರೋಡ್ತಾಸ್‌ನ ದಿನಾರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದ, ನಿತೀಶ್ ಕುಮಾರ್ ಅವರಿಗೆ ಬಹಳಷ್ಟು ಜನ ಆತ್ಮೀಯರು ಕೈ ಕೊಟ್ಟು ಪಕ್ಷ ಬಿಟ್ಟು ಹೋದರು, ಜೀವನ ಪೂರ್ತಿ ಅವರ ಹಿಂದೆ ನಿಲ್ಲುವೆ, ನಿತೀಶ್ ಕುಮಾರ್ ನನ್ನ ಹೃದಯದಲ್ಲಿದ್ದಾರೆ, ಅವರೇ ನನ್ನ ಆದರ್ಶ ಎನ್ನುತ್ತಿದ್ದ ಜೈ ಕುಮಾರ್ ಸಿಂಗ್ ಪಕ್ಷವನ್ನು ತ್ಯಜಿಸಿರುವುದು, ಪಕ್ಷದ ಟಿಕೇಟ್ ಹಣವಂತರಿಗೆ ಮಾರಾಟವಾಗುತ್ತಿದೆ ಎಂದು ಆರೋಪಿಸಿರುವುದು ಜೆಡಿಯು ಪಕ್ಷಕ್ಕೆ ದೊಡ್ಡಮಟ್ಟದ ಹೊಡೆತವನ್ನು ನೀಡಿದೆ.

ಜೆಡಿಯು ಪಕ್ಷದಲ್ಲಿ ಆಂತರಿಕ ವಿಪ್ಲವ

ಪಕ್ಷಕ್ಕೆ ಸಲ್ಲಿಸಿದ ರಾಜೀನಾಮೆ ಬಳಿಕ ಸುದ್ದಿಗಾರರೊಂದಿಗೆ ಮಾತಾನಾಡಿರುವ ಜೈ ಕುಮಾರ್ ಸಿಂಗ್, ಜೆಡಿಯು ಪಕ್ಷದಲ್ಲಿ ಆಂತರಿಕ ವಿಪ್ಲವ ಸೃಷ್ಟಿಯಾಗಿದೆ. ಪ್ರಮುಖ ರಾಜಕೀಯ ನಿರ್ಧಾರ ಕೈಗೊಳ್ಳುವ ನಾಯಕತ್ವ ಕಣ್ಮರೆಯಾಗಿದೆ. ಪಕ್ಷದ ಸಾಕಷ್ಟು ವಿಚಾರಗಳನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಗಮನಕ್ಕೆ ತರುತ್ತಿಲ್ಲ. ಹೀಗಾಗಿ ಜೆಡಿಯು ಗಂಭೀರ ಪರಿಣಾಮಗಳನ್ನು ಎದುರಿಸಲಿದೆ.

ನಿತೀಶ್ ಕುಮಾರ್ ಅವರು ಸರಿ ಇದ್ದಿದ್ದರೆ ಇಂದು ನಾ ಪಕ್ಷ ಬಿಡುವ ಸಂದರ್ಭ ಬರುತ್ತಿರಲಿಲ್ಲ. ನಿತೀಶ್ ಕುಮಾರ್ ಅವರು, ಜೈ ಕುಮಾರ್ ಸಂಕಷ್ಟ ಸಂದರ್ಭದಲ್ಲಿ ಇದ್ದೇನೆ ನಿನಗೆ ಟಿಕೆಟ್ ಕೊಡಲು ಸಾಧ್ಯವಾಗುತ್ತಿಲ್ಲ ಎಂದಿದ್ದರೆ ನನ್ನ ಸಮುದಾಯಕ್ಕೆ ನಾ ಹೇಳುತ್ತಿದ್ದೆ ಅನೇಕ ಬಾರಿ ಶಾಸಕನಾಗಿ, ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ ನನಗೆ ಟಿಕೇಟ್ ಬೇಡ ಎಂದು.

ಒಂದು ವೇಳೆ ನನ್ನ ಕ್ಷೇತ್ರದ ಟಿಕೆಟ್ ಬಿಜೆಪಿಗೆ ನೀಡಿದ್ದರು ನಾ ಈ ಮುಂಚಿನ ಚುನಾವಣೆಯಲ್ಲಿ ಅವರಿಂದ ನೆರವಾಗಿದೆ. ಈ ಚುನಾವಣೆಯಲ್ಲಿ ಅವರಿಗೆ ಬಿಟ್ಟುಕೊಡುವೆ ಎಂದು ಹೆಮ್ಮೆಯಿಂದ ಕೇಳುತ್ತಿದ್ದೆ. ಆದರೆ ನನ್ನ ಕ್ಷೇತ್ರದ ಟಿಕೆಟ್ ರಾಷ್ಟ್ರೀಯ ಲೋಕ ಮೋರ್ಚಾಗೆ (RLM) ಬಿಟ್ಟುಕೊಡಲಾಗಿದೆ. ಆದರೆ ರಾಷ್ಟ್ರೀಯ ಲೋಕ ಮೋರ್ಚಾ ಅಭ್ಯರ್ಥಿಗೆ ಒಂದು ಪೈಸೆ ರಾಜಕೀಯ ತಿಳಿದಿಲ್ಲ. ಅವರತ್ರ ಹಣ ಇದೆ ಅಷ್ಟೇ.

ನಾ ಅಧಿಕಾರಕ್ಕಾಗಿ ಎಂದು ರಾಜಕೀಯ ಮಾಡಿಲ್ಲ, ಮೂರು ಬಾರಿ ಗೆದ್ದು, ನಾಲ್ಕು ಸಚಿವ ಸ್ಥಾನ ನಿಭಾಯಿಸಿದ್ದೇನೆ, ಆದರೆ ಆತ್ಮಾಭಿಮಾನವನ್ನು ಬಲಿಕೊಡಲು ಸಾಧ್ಯವಿಲ್ಲ.. ಹೀಗಾಗಿ ನಾನು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆಯ ಸನಿಹದಲ್ಲಿ ರಾಜಪೂತ ಸಮುದಾಯದ ಜೈ ಕುಮಾರ್ ಸಿಂಗ್ ಅವರ ಈ ನಡೆ ಎನ್‌ಡಿಎ ಮೈತ್ರಿಕೂಟಕ್ಕೆ ಡ್ಯಾಮೇಜ್ ಮಾಡುವ ಆತಂಕ ಎದುರಾಗಿದೆ.

ಆದರೆ ಈ ವಿಷಯದ ಬಗ್ಗೆ ಜೆಡಿಯುನ ಯಾವುದೇ ಹಿರಿಯ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!