ದೊಡ್ಡಬಳ್ಳಾಪುರ: ಪರಿಸರ ಸ್ನೇಹಿ ದೀಪಾವಳಿ – MSV ಪಬ್ಲಿಕ್ ಶಾಲೆಯಿಂದ ಜಾಗೃತಿ ಜಾಥಾ

Eco-friendly Diwali - Awareness rally by MSV Public School

ದೊಡ್ಡಬಳ್ಳಾಪುರ: ಬೆಳಕಿನ ಹಬ್ಬವಾದ ದೀಪಾವಳಿಯನ್ನು ಪರಿಸರಸ್ನೇಹಿಯಾಗಿ (Eco-friendly Deepavali) ಆಚರಿಸುವಂತೆ ಕರೆ ನೀಡಿ, ತಾಲೂಕಿನ ಪ್ರತಿಷ್ಠಿತ ಎಂ.ಎಸ್.ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ “ಪರಿಸರ ಸ್ನೇಹಿ ದೀಪಾವಳಿ – ಜಾಗೃತಿ ಜಾಥಾ” ನಡೆಸಿದರು.

ಶಾಲೆಯ ಅಧ್ಯಕ್ಷ ಸುಬ್ರಮಣ್ಯ ಜಾಗೃತಿ ಜಾಥಾಗೆ ಚಾಲನೆ ನೀಡಿದ ಬಳಿಕ ಮಾತನಾಡಿ, “ದೀಪಾವಳಿ ಬೆಳಕಿನ ಹಬ್ಬ. ಕತ್ತಲೆಯ ಮೇಲೆ ಬೆಳಕಿನ ವಿಜಯ, ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯ ಮತ್ತು ಅಜ್ಞಾನದ ಮೇಲೆ ಜ್ಞಾನದ ವಿಜಯವನ್ನು ಸಂಕೇತಿಸುತ್ತದೆ.

ದೊಡ್ಡಬಳ್ಳಾಪುರ: ಪರಿಸರ ಸ್ನೇಹಿ ದೀಪಾವಳಿ - MSV ಪಬ್ಲಿಕ್ ಶಾಲೆಯಿಂದ ಜಾಗೃತಿ ಜಾಥಾ

ಇದು ಹಿಂದೂ, ಜೈನ್, ಸಿಖ್ ಮತ್ತು ಬೌದ್ಧ ಧರ್ಮಗಳಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬವಾಗಿದೆ. ಆದರೂ ಪ್ರತಿಯೊಂದು ಧರ್ಮದಲ್ಲೂ ವಿಭಿನ್ನ ಕಥೆಗಳನ್ನು ಒಳಗೊಂಡಿದೆ. ಈ ಹಬ್ಬದಂದು ಮನೆಗಳನ್ನು ದೀಪಗಳು ಮತ್ತು ರಂಗೋಲಿಗಳಿಂದ ಅಲಂಕರಿಸಲಾಗುತ್ತದೆ. ಹೊಸ ಬಟ್ಟೆಗಳನ್ನು ಧರಿಸಲಾಗುತ್ತದೆ ಮತ್ತು ಸಿಹಿ ತಿಂಡಿಗಳನ್ನು ಹಂಚಿಕೊಳ್ಳಲಾಗುತ್ತದೆ.

“ದೀಪಾವಳಿ” ಎಂಬ ಸಂಸ್ಕೃತ ಪದವು ದೀಪ ಮತ್ತು ಅವಳಿ ಎಂಬ ಪದಗಳಿಂದ ಬಂದಿದೆ. ಇದರರ್ಥ “ದೀಪಗಳ ಸಾಲು”. ಇದು ವಿಕ್ರಮಶಕದ ವರ್ಷದ ಕೊನೆಯಲ್ಲಿ ಆಚರಿಸಲಾಗುವ ಕಾರಣ, ಉತ್ತರ ಭಾರತದಲ್ಲಿ ಇದನ್ನು ಹೊಸ ವರ್ಷದ ಹಬ್ಬವಾಗಿಯೂ ಆಚರಿಸುತ್ತಾರೆ” ಎಂದು ತಿಳಿಸಿದರು.

ಪ್ರಾಂಶುಪಾಲರಾದ ರೆಮ್ಯ ಬಿ ವಿ ಮಾತನಾಡಿ, “ದೀಪಾವಳಿ ಹಬ್ಬದ ಪ್ರಯುಕ್ತ ಜನರು ದೀಪಗಳನ್ನು ಹಚ್ಚಿ ಆಚರಿಸಬೇಕು. ಪಟಾಕಿಗಳನ್ನು ಹಚ್ಚಬಾರದು ಎಂಬ ಸಂದೇಶವನ್ನು ಸಾರುವ ಸಲುವಾಗಿ ನಮ್ಮ ಶಾಲೆಯ 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಜಾಥಾವನ್ನು ಹಮ್ಮಿಕೊಂಡಿದ್ದು, ಜನತೆ ಇದಕ್ಕೆ ಸ್ಪಂದಿಸಿ ಪರಿಸರ ಸ್ನೇಹಿ ದೀಪಾವಳಿಯ ಆಚರಣೆ ಮಾಡಬೇಕೆಂದು” ತಿಳಿಸಿದರು.

ಎಂ ಎಸ್‌ವಿ ಪಬ್ಲಿಕ್ ಶಾಲೆಯಿಂದ ಆರಂಭವಾದ ಜಾಗೃತಿ ಜಾಥಾ, ಮಾರ್ಕೆಟ್ ಸ್ಕೂಲ್ ಮಾರ್ಗದಲ್ಲಿ ತಾಲ್ಲೂಕು ಕಛೇರಿಯವರೆಗೂ ಸಾಗಿ, ಮಕ್ಕಳು ಫಲಕಗಳನ್ನು ಹಿಡಿದು, ಘೋಷಣೆಗಳನ್ನು ಕೂಗಿದರು.

ಪಟಾಕಿ ಹಚ್ಚುವುದರಿಂದ ಆಗುವ ಅನಾಹುತಗಳ ಬಗ್ಗೆ ವಿವರಿಸಿದರು. ಬಹುಮುಖ್ಯವಾಗಿ ಪಶುಪಕ್ಷಿ ಸಂಕುಲಕ್ಕೆ ಮಾರಕವಾದ ಪಟಾಕಿಗಳನ್ನು ತ್ಯಜಿಸಿ, ಹಣತೆಯ ಬೆಳಕಿನಿಂದ ನಮ್ಮ ಮನೆ ಮನಗಳನ್ನು ಬೆಳಗೋಣ ಎಂಬ ಸಂದೇಶವನ್ನು ನೀಡಿದರು.

ದೊಡ್ಡಬಳ್ಳಾಪುರ: ಪರಿಸರ ಸ್ನೇಹಿ ದೀಪಾವಳಿ - MSV ಪಬ್ಲಿಕ್ ಶಾಲೆಯಿಂದ ಜಾಗೃತಿ ಜಾಥಾ

ತಾಲೂಕು ಕಚೇರಿ ಬಳಿ ಶಿಕ್ಷಕರು ಮಕ್ಕಳಿಗೆ ಪ್ರತಿಜ್ಞಾ ವಚನ ಬೋಧಿಸಿದರು.

ಈ ವೇಳೆ ಸಾರ್ವಜನಿಕರಿಗೆ ಪರಿಸರ ಸ್ನೇಹಿ ದೀಪಾವಳಿಯ ಆಚರಣೆಯ ಮಹತ್ವದ ಕುರಿತಾದ ಕರಪತ್ರಗಳನ್ನು ವಿತರಿಸಿಲಾಯಿತು.

ದೊಡ್ಡಬಳ್ಳಾಪುರ: ಪರಿಸರ ಸ್ನೇಹಿ ದೀಪಾವಳಿ - MSV ಪಬ್ಲಿಕ್ ಶಾಲೆಯಿಂದ ಜಾಗೃತಿ ಜಾಥಾ

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]