Role of youth is important in preserving art: CEO Dr. K.N. Anuradha

ದೊಡ್ಡಬಳ್ಳಾಪುರ; ಕಲೆ ಉಳಿಸುವಲ್ಲಿ ಯುವಜನತೆ ಪಾತ್ರ ಮುಖ್ಯ: ಸಿಇಓ ಡಾ.ಕೆ.ಎನ್. ಅನುರಾಧ

ದೊಡ್ಡಬಳ್ಳಾಪುರ; ಜಾನಪದ ಕಲಾ ಪ್ರತಿಭೆಗಳನ್ನು ಪ್ರದರ್ಶಿಸಲು ಯುವಜನೋತ್ಸವ ಕಾರ್ಯಕ್ರಮ ಅತ್ಯಂತ ಅನುಕೂಲವಾಗಿವೆ. ಯುವ ಜನತೆ ಎಲ್ಲಾ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿ ಮುಂದಿನ ಯುವಪೀಳಿಗೆಗೂ ಪ್ರೇರಣೆಯಾಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಓ ಡಾ.ಕೆ.ಎನ್. ಅನುರಾಧ (CEO Dr. K.N. Anuradha) ಅವರು ತಿಳಿಸಿದರು.

ದೊಡ್ಡಬಳ್ಳಾಪುರ; ಕಲೆ ಉಳಿಸುವಲ್ಲಿ ಯುವಜನತೆ ಪಾತ್ರ ಮುಖ್ಯ: ಸಿಇಓ ಡಾ.ಕೆ.ಎನ್. ಅನುರಾಧ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಉತ್ತರ ವಿಶ್ವ ವಿದ್ಯಾನಿಲಯ ಟಮಕ ಕೋಲಾರ, ನೆಹರು ಯುವ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೊಡ್ಡಬಳ್ಳಾಪುರ ಇವರ ಸಹಯೋಗದೊಂದಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಕಲೆಗಳ ಬಗ್ಗೆ ಜನರಿಗೆ ಆತ್ಮ ವಿಶ್ವಾಸ ಕುಂದುತ್ತಿದೆ. ಮಕ್ಕಳು ಮತ್ತು ಯುವಜನರು ಮೊಬೈಲ್ ನ್ನು ಬದಿಗಿಟ್ಟು, ಶಿಕ್ಷಣಕ್ಕೆ ಪ್ರಧಾನ ಅದ್ಯತೆ ನೀಡಬೇಕು. ಅದರಲ್ಲೂ ಯುವ ಸಮೂಹದವರೂ ಶಿಕ್ಷಣ, ವಿವಿಧ ವೃತ್ತಿಪರ ಕೋರ್ಸ್ ಗಳೊಂದಿಗೆ ನಮ್ಮ ಜಿಲ್ಲೆಯ ಸಾಂಸ್ಕೃತಿಕ ಹಾಗೂ ಪಾರಂಪರಿಕ ಜಾನಪದ ಕಲೆಗಳನ್ನು ಬೆಳೆಸುವಲ್ಲಿ ಮುಂದಾಗಬೇಕು.

ಈ ರೀತಿಯ ಕಾರ್ಯಕ್ರಮಗಳು ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಮ್ಮ ಜಾನಪದ ಕಲೆ, ಸಂಸ್ಕೃತಿಯನ್ನು ದೇಶವ್ಯಾಪಿ ಪ್ರಚುರಪಡಿಸಲು ಯುವ ಪೀಳಿಗೆ ಶ್ರಮ ವಹಿಸಬೇಕು.

ನಿಮ್ಮ ಮುಂದಿನ ಭವಿಷ್ಯವನ್ನು ಮೊಬೈಲ್ ನೋಡುವುದರಿಂದ ವ್ಯರ್ಥ ಮಾಡದೆ, ಪ್ರತಿ ಗ್ರಾಮದಲ್ಲಿರುವ ಅರಿವು (ಗ್ರಂಥಾಲಯಗಳು) ಕೇಂದ್ರಗಳ ಪ್ರಯೋಜನ ಪಡೆದುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರಯತ್ನಿಸಿ ಎಂದರು.

ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಅವರು ಸ್ಪರ್ಧೆಗಳು ಮತ್ತು ವಿಜ್ಞಾನ ಮೇಳವನ್ನು ವೀಕ್ಷಿಸಿ ಸ್ಪರ್ಧಾರ್ಥಿಗಳಿಗೆ ಶುಭಕೋರಿದರು.

ಕಾರ್ಯಕ್ರಮದಲ್ಲಿ ಜಾನಪದ ಗೀತೆ, ನೃತ್ಯ, ಚಿತ್ರಕಲೆ ಹಾಗೂ ಕವಿತೆ ಬರೆಯುವ ಸ್ಪರ್ಧೆ ಮತ್ತು ವಿಜ್ಞಾನ ಮೇಳ ಸೇರಿದಂತೆ ಇತರೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸುಮಾರು 100 ಜನ ಸ್ಪರ್ಧಿಗಳು ಭಾಗವಹಿಸಿದ್ದರು, ವಿಜೇತರಿಗೆ ಮತ್ತು ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಬಹುಮಾನ ಪಡೆದವರಿಗೆ ರಾಜ್ಯ ಮಟ್ಟಕ್ಕೆ ಕಳುಹಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಟಿ.ಜಯಲಕ್ಷ್ಮೀ , ದೊಡ್ಡಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸದಾಶಿವ ರಾಮಚಂದ್ರಗೌಡ, ಜಾನಪದ ವಿದ್ವಾಂಸರಾದ ಗುರುವ ಬಸವರಾಜು, ಗಾಯಕ ಮೋಹನ್ ಕುಮಾರ್, ನೆಹರು ಯುವ ಕೇಂದ್ರದ ಸಹಾಯಕ ನಿರ್ದೇಶಕರು ಶ್ರೀವಾಣಿ ಸೇರಿದಂತೆ ಶಿಕ್ಷಕರು ಮತ್ತು ಸ್ಪರ್ಧಾರ್ತಿಗಳು ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

[ccc_my_favorite_select_button post_id="118997"]
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆ ಜಾರಿಯ ನಂತರ ಅದನ್ನು ಟೀಕೆ ಮಾಡುವ ನೈತಿಕತೆ ಇರುವುದಿಲ್ಲ: ಆರ್. ಅಶೋಕ (R. Ashoka)

[ccc_my_favorite_select_button post_id="118949"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

2025ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 85ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ ಅಪಘಾತ (Accident) ಪ್ರಕರಣಗಳು 2026ರ ಆರಂಭದಲ್ಲಿಯೂ ಮುಂದುವರಿದೆ.

[ccc_my_favorite_select_button post_id="118962"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!