D.K. Shivakumar's visit to Hindu temples is of no use: R. Ashoka

ಡಿ.ಕೆ. ಶಿವಕುಮಾರ್ ಹಿಂದೂ ದೇವಸ್ಥಾನಗಳಿಗೆ ಹೋಗಿ ಪ್ರಯೋಜನವಿಲ್ಲ: ಆರ್‌.ಅಶೋಕ

ಧಾರವಾಡ: ರಾಜ್ಯ ಸರ್ಕಾರದಲ್ಲಿ ಸಿಎಂ ಬದಲಾವಣೆಯಾಗಲಿದೆ. ಆ ವಿಷಯವನ್ನು ಬೇರೆಡೆ ತಿರುಗಿಸಲು ಆರ್‌ಎಸ್‌ಎಸ್‌ ವಿಷಯವನ್ನು ತರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ, ಶಿಕ್ಷಣ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳಲ್ಲೂ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದ್ದು, ಖಾಲಿ ಡಬ್ಬ ಶಬ್ದ ಮಾಡುವಂತೆ ಮಾಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ಹಣ ಬಿಡುಗಡೆ ಮಾಡಿ, ಟೆಂಡರ್‌ ಮಾಡಿದ ಕಾಮಗಾರಿಗಳನ್ನು ಕಾಂಗ್ರೆಸ್‌ ನಾಯಕರು ಉದ್ಘಾಟಿಸುತ್ತಿದ್ದಾರೆ.

ಆರ್ಥಿಕ ಇಲಾಖೆಯಲ್ಲಿ ಯಾವ ಯೋಜನೆಗೂ ಹಣವಿಲ್ಲ. ಬಜೆಟ್‌ನಲ್ಲಿ ಒಟ್ಟು ಅನುದಾನ 80 ಸಾವಿರ ಕೋಟಿ ರೂ. ಇದ್ದರೆ, ಗ್ಯಾರಂಟಿಗಳಿಗೆ 60-70 ಸಾವಿರ ಕೋಟಿ ರೂ. ಆಗುತ್ತದೆ. ಉಳಿದ 10 ಸಾವಿರ ಕೋಟಿ ರೂ. ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಸಚಿವರ ಮನೆಯ ದುರಸ್ತಿ, ಕಾಂಗ್ರೆಸ್‌ ಸಮಾವೇಶಕ್ಕೆ, ಜಾತಿ ಗಣತಿಗೆ ಖರ್ಚು ಮಾಡುತ್ತಿದ್ದಾರೆ. ಈ ಸರ್ಕಾರ ಪಾಪರ್‌ ಆಗಿದೆ ಎಂದರು.

ಮಾಧ್ಯಮಗಳಲ್ಲಿ ರಸ್ತೆ ಗುಂಡಿಗಳ ಬಗ್ಗೆ ಸುದ್ದಿ ಬರುತ್ತಿದೆ. ಆ ವಿಚಾರವನ್ನು ಬೇರೆ ಕಡೆ ತಿರುಗಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಆರ್‌ಎಸ್‌ಎಸ್‌ ಬಗ್ಗೆ ಮಾತಾಡುತ್ತಿದ್ದಾರೆ. ಆರ್‌ಎಸ್‌ಎಸ್‌ ನೋಂದಣಿ ಮಾಡಬೇಕೆಂದು ಎಲ್ಲೂ ನಿಯಮವಿಲ್ಲ.

ಸಂವಿಧಾನದಲ್ಲಿ ಆ ರೀತಿಯ ನಿಯಮವಿಲ್ಲ. ಸಾಧನೆಗಳು ಇಲ್ಲದೆ ಅಭಿವೃದ್ಧಿ ಮೂಲೆಗುಂಪಾಗಿದೆ. ಆರ್‌ಎಸ್‌ಎಸ್‌ ವಿರುದ್ಧ ಇವರ ತಾತ ಮುತ್ತಾತನ ಕಾಲದಿಂದಲೂ ಏನೂ ಮಾಡಿಲ್ಲ. ನೌಕರರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಸಂಬಳ ನೀಡಿಲ್ಲ. ಹಣದ ಬದಲು ಹೆಣಗಳು ಬೀಳುತ್ತಿದೆ, ಆತ್ಮಹತ್ಯೆಗಳು ನಡೆಯುತ್ತಿದೆ. ಈ ಸರ್ಕಾರ ಯಾವಾಗ ತೊಲಗುತ್ತದೆ ಎಂದು ಜನರು ಕೂಡ ಕಾಯುತ್ತಿದ್ದಾರೆ ಎಂದರು.

ನಾನು ನವೆಂಬರ್‌ ಕ್ರಾಂತಿ ಎಂದಾಗ ಬಿಜೆಪಿಯವರು ಬುರುಡೆ ಬಿಡುತ್ತಿದ್ದಾರೆ ಎಂದರು. ಈಗ ಯತೀಂದ್ರ ಸಿದ್ದರಾಮಯ್ಯ ಅದನ್ನೇ ಹೇಳುತ್ತಿದ್ದಾರೆ. ಕೆ.ಎನ್‌.ರಾಜಣ್ಣ ಹೇಳಿದಾಗ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಿದರು.

ಡಿ.ಕೆ.ಶಿವಕುಮಾರ್‌ ನಾಮ ಹಾಕಿಕೊಂಡು ಟೆಂಪಲ್‌ ರನ್‌ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ನಾಮ ಹಾಕಲು ಎಲ್ಲರೂ ಸಿದ್ಧತೆ ಮಾಡುತ್ತಿದ್ದಾರೆ. ಯತೀಂದ್ರ ಅವರ ಹೇಳಿಕೆ ಬಂದಿರುವುದು ಸಿದ್ದರಾಮಯ್ಯನವರ ಕಡೆಯಿಂದಲೇ ಎಂದರು.

ಗುತ್ತಿಗೆದಾರರಿಗೆ ಸುಮಾರು 30 ಸಾವಿರ ಕೋಟಿ ರೂ. ಬಿಲ್‌ ನೀಡಿಲ್ಲ. ಗುತ್ತಿಗೆದಾರರ ಸಂಘ ಬಿಜೆಪಿ ಕಮಿಶನ್‌ ಬಗ್ಗೆ ಹೇಳಿದ್ದರು. ಈಗ ಕಾಂಗ್ರೆಸ್‌ ಅವಧಿಯಲ್ಲೇ 60 ಪರ್ಸೆಂಟ್‌ ಕಮಿಶನ್‌ ಇದೆ ಎಂದು ಹೇಳುತ್ತಿದ್ದಾರೆ. ಉದ್ಯಮಿ ಮೋಹನ್‌ದಾಸ್‌ ಪೈ ಕೂಡ ಇದನ್ನೇ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಕಲೆಕ್ಷನ್‌ ಸಭೆ ಮಾಡಿ, ಬಿಹಾರ ಚುನಾವಣೆಗಾಗಿ 300-400 ಕೋಟಿ ರೂ. ಸಂಗ್ರಹ ಮಾಡಬೇಕೆಂದು ಸೂಚನೆ ನೀಡಿದ್ದಾರೆ. ಸಚಿವ ಸ್ಥಾನ ಉಳಿಯಲು ಕಪ್ಪ ಕಾಣಿಕೆ ಕೊಡಿ ಎಂದು ಹೇಳಿ ಇಲಾಖಾವಾರು ಫಿಕ್ಸ್‌ ಮಾಡಿದ್ದಾರೆ. ಹಣ ನೀಡದಿದ್ದರೆ ಎಲ್ಲರನ್ನೂ ಕಳಿಸುತ್ತಾರೆ ಎಂದರು.

ಡಿ.ಕೆ.ಶಿವಕುಮಾರ್‌ ದಾರಿ ತಪ್ಪಿದ ಮಗ ಆಗಿದ್ದಾರೆ. ದೆಹಲಿಯಲ್ಲಿರುವ ಇಟಲಿ ದೇವಸ್ಥಾನವನ್ನು ಅವರು ಸುತ್ತಬೇಕಿದೆ. ಹಿಂದೂ ದೇವಸ್ಥಾನಗಳಿಗೆ ಹೋಗಿ ಪ್ರಯೋಜನವಿಲ್ಲ ಎಂದರು.

ವಿಧಾನಪರಿಷತ್‌ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚೆ ನಡೆದಿದೆ. ಜೊತೆಗೆ ಸಂಘಟನೆ ಹೆಚ್ಚಿಸಲು ಹುಬ್ಬಳ್ಳಿಗೆ ಭೇಟಿ ನೀಡಿದ್ದೇನೆ. ಕಾರ್ಯಕರ್ತರ ಅಭಿಪ್ರಾಯ ಪಡೆದು, ವರಿಷ್ಠರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!