Last day to add name to voter list: Nov. 06

ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ

ಬೆಂ.ಗ್ರಾ.ಜಿಲ್ಲೆ: ಭಾರತ ಚುನಾವಣಾ ಆಯೋಗದ (Election Commission of India) ವೇಳಾಪಟ್ಟಿಯಂತೆ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ (Voter list) ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ.

ಅದರಂತೆ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ ಸೆಪ್ಟೆಂಬರ್ 30 ರಂದು ಪ್ರಕಟಣೆ ಹೊರಡಿಸಲಾಗಿದೆ. ನಮೂನೆ 19 ರಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಲು ನವೆಂಬರ್ 06 ಕೊನೆಯ ದಿನವಾಗಿದೆ.

ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 25 ರಂದು ಪ್ರಕಟಿಸಲಾಗುತ್ತಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 25 ರಿಂದ ಡಿಸೆಂಬರ್ 10 ವರೆಗೆ ಕಾಲಾವಕಾಶವಿದೆ.

ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-19ರ ಅರ್ಜಿಗಳನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ
1)ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಚೇರಿ, ಮುಕ್ತಾಂಬಿಕ ರಸ್ತೆ, ವಡ್ಡರಪೇಟೆ, ಕಚೇರಿ ದೂರವಾಣಿ ಸಂಖ್ಯೆ 080-27622208, ಮೊಬೈಲ್ ನಂ: 9480695013.

2)ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ತಾಲ್ಲೂಕು ಕಚೇರಿ ರಸ್ತೆ ದೊಡ್ಡಬಳ್ಳಾಪುರ ಕಚೇರಿ ದೂರವಾಣಿ ಸಂಖ್ಯೆ 080-27622002, ಮೊಬೈಲ್ ನಂ: 9448346792 ಸ್ವೀಕರಿಸಲಿದ್ದಾರೆ.

ದೇವನಹಳ್ಳಿ ತಾಲ್ಲೂಕಿನಲ್ಲಿ 1)ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಚೇರಿ, ಬಿ.ಬಿ ರಸ್ತೆ ಗುರು ಭವನ, ದೇವನಹಳ್ಳಿ. ಕಚೇರಿ ದೂರವಾಣಿ ಸಂಖ್ಯೆ 080-27682384, ಮೊಬೈಲ್ ನಂ: 9480695012.

2) ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ. ಬಿ.ಬಿ. ರಸ್ತೆ, ದೇವನಹಳ್ಳಿ ಕಚೇರಿ ದೂರವಾಣಿ ಸಂಖ್ಯೆ 080-22122999, ಮೊಬೈಲ್ ನಂ:6363263117 ಸ್ವೀಕರಿಸಲಿದ್ದಾರೆ.

ಹೊಸಕೋಟೆ ತಾಲ್ಲೂಕಿನಲ್ಲಿ
1)ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಛೇರಿ. ಮಿಷನ್ ಆಸ್ಪತ್ರೆ ರಸ್ತೆ, ಬೈರೇಗೌಡ ಪೆಟ್ರೋಲ್ ಬಂಕ್ ಹತ್ತಿರ ಹೊಸಕೋಟೆ ತಾಲ್ಲೂಕು ಕಚೇರಿ ದೂರವಾಣಿ ಸಂಖ್ಯೆ: 080-27931311 ಮೊಬೈಲ್ ನಂ: 9480695014.

2)ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ಹಳೆ ಬಸ್ ನಿಲ್ದಾಣ ಹತ್ತಿರ ಹೊಸಕೋಟೆ ತಾಲ್ಲೂಕು ಕಚೇರಿ ದೂರವಾಣಿ ಸಂಖ್ಯೆ: 080-27931237,ಮೊಬೈಲ್ ನಂ:9845637542

ನೆಲಮಂಗಲ ತಾಲ್ಲೂಕಿನಲ್ಲಿ
1)ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ಓ ಕಛೇರಿ, ಗುರು ಭವನ, ನೆಲಮಂಗಲ ಬಸ್ ನಿಲ್ದಾಣ ಹತ್ತಿರ, ನೆಲಮಂಗಲ ಮೊಬೈಲ್ ನಂ: 9480695015

2)ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ಬಿ ಹೆಚ್ ರಸ್ತೆ, ನೆಲಮಂಗಲ ಕಚೇರಿ ದೂರವಾಣಿ ಸಂಖ್ಯೆ:080-27722126, ಮೊಬೈಲ್ ನಂ: 8147397189

ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಮಾನದಂಡಗಳು

ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಸಾಮಾನ್ಯ ನಿವಾಸಿ ಆಗಿರಬೇಕು (ಈ ಕ್ಷೇತ್ರದ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಗಳು ಒಳಗೊಂಡಿರುತ್ತದೆ)
ಅರ್ಹತಾ ದಿನಾಂಕ ಹಿಂದಿನ 6 ವರ್ಷಗಳ ಅವಧಿಯ ಪೈಕಿ ಕನಿಷ್ಟ 3 ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಮಾನ್ಯತೆ ಹೊಂದಿರುವ/ಮಾನ್ಯತೆ ಹೊಂದಿರುವುದಾಗಿ ಘೋಷಿಸಲ್ಪಟ್ಟಿರುವ ಸೆಕೆಂಡರಿ ಶಾಲೆಗಿಂತ ಕಡಿಮೆ ಇಲ್ಲದ ಯಾವುದೇ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ವೃತ್ತಿಯಲ್ಲಿ ಕಾರ್ಯ ನಿರ್ವಹಿಸಿರಬೇಕು.

ಸೆಕೆಂಡರಿ ಶಾಲೆ ಅಂದರೆ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಪ್ರೌಢಶಾಲೆ ವಿಭಾಗದಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿರಬೇಕು.

ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಖಾಯಂ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಹಾಗೂ ಪಾರ್ಟ್ ಟೈಂ’ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಲ್ಲಿ ನೋಂದಣಿಗೆ ಅವಕಾಶವಿರುವುದಿಲ್ಲ.

ಸಹಾಯವಾಣಿ ಕೇಂದ್ರಗಳು

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಹಿತಿಗಾಗಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರವರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂ.ಸಂ-080-29902025.

ಚುನಾವಣಾಧಿಕಾರಿ ಯವರ ಕಛೇರಿ, 178-ಹೊಸಕೋಟೆ ವಿಧಾನಸಭಾ ಕ್ಷೇತ್ರ ದೂ.ಸಂ-080-27931237.

ಚುನಾವಣಾಧಿಕಾರಿಯವರ ಕಛೇರಿ, 179-ದೇವನಹಳ್ಳಿ ವಿಧಾನಸಭಾಕ್ಷೇತ್ರ ದೂ.ಸಂ-080-22122999.

ಚುನಾವಣಾಧಿಕಾರಿಯವರ ಕಛೇರಿ, 180-ದೊಡ್ಡಬಳ್ಳಾಪುರ ವಿಧಾನಸಭಾಕ್ಷೇತ್ರ
ದೂ.ಸಂ-080-27622002.

ಚುನಾವಣಾಧಿಕಾರಿಯವರ ಕಛೇರಿ, 181-ನೆಲಮಂಗಲ ವಿಧಾನಸಭಾ ಕ್ಷೇತ್ರ ದೂ.ಸಂ-080-27722126

ಅರ್ಜಿದಾರರು ಶಿಕ್ಷಕ ವೃತ್ತಿಯಲ್ಲಿ ತೊಡಗಿರುವ ಬಗ್ಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಂದ ದೃಢೀಕೃತ ದಾಖಲೆ/ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಮತದಾರರ ಪಟ್ಟಿ ನೋಂದಣಿಗೆ ಅರ್ಜಿದಾರರ ವಾಸಸ್ಥಳವು ಅರ್ಹತೆಯಾಗಿದ್ದು, ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಯ ಸ್ಥಳವು ಪರಿಗಣಿಸಲ್ಪಡುವುದಿಲ್ಲ.

ಮತದಾರರ ಪಟ್ಟಿ ಸೇರ್ಪಡೆಗೆ ಕನ್ನಡ ಅಥವಾ ಅಂಗ್ಲ ಭಾಷೆಯ ನಮೂನೆ-19 ರಲ್ಲಿ ಅರ್ಜಿ ಸಲ್ಲಿಸಬಹುದು
ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುವುದರಿಂದ ಅರ್ಜಿದಾರರು 2 ಇತ್ತೀಚಿನ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಇಲಾಖಾ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಮಾನದಂಡಗಳಡಿಯಲ್ಲಿ ಅರ್ಹತೆ ಹೊಂದಿರುವ ಶಿಕ್ಷಕರಿಂದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!