Pradeep Vs Pratap: Students' street fight.. bhat's warning that enough is enough..!

Pradeep Vs Pratap: ಮಿತಿಮೀರಿದ ಶಿಷ್ಯರ ಬೀದಿ ಜಗಳ.. Enough ಎಂದು ಭಟ್ಟರ ವಾರ್ನಿಂಗ್..!

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar ) ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ನಡುವಿನ ರಾಜಕೀಯ ಕೆಸರೆರಚಾಟ ವಯಕ್ತಿಕ ಮಟ್ಟಕ್ಕೆ ಇಳಿದಿದ್ದು, ಇಬ್ಬರ ನಡುವೆ ತಂದಿಟ್ಟು ತಮಾಷೆ ನೋಡುವ ಕೆಲ ಖಾಸಗಿ ನ್ಯೂಸ್ ಚಾನಲ್‌ಗಳು TRP ಗಿಟ್ಟಿಸುತ್ತಿವೆ ಎಂಬ ಆಕ್ರೋಶದ ಮಾತು ಪ್ರಜ್ಞಾವಂತ ಮಾಧ್ಯಮ ವಲಯದಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.

ಹೌದು ತೀರ ವಯಕ್ತಿಕ ವಿಚಾರಗಳ ಕುರಿತಂತೆ ನಾ ಮುಂದು, ತಾ ಮುಂದು ಎಂದು ಸುದ್ದಿವಾಹಿನಿಗಳ ಮುಂದೆ ಮಾತಾಡುತ್ತಿರುವ ಶಾಸಕ ಪ್ರದೀಪ್ ಈಶ್ವರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಗುರುಗಳಾದ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಕಿವಿ ಹಿಂಡಲು ಮುಂದಾಗಿದ್ದಾರೆ.

ಈ ಇಬ್ಬರು ಖಾಸಗಿ ಸುದ್ದಿವಾಹಿನಿಗಳ ಮುಂದೆ ಮಾತಾಡುತ್ತಿರುವ ರೀತಿಯ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪ್ರತಾಪ ಸಿಂಹ ಮತ್ತು ಪ್ರದೀಪ ಈಶ್ವರ ನನಗೆ ಅತ್ಯಾಪ್ತರು. ಅವರಿಬ್ಬರೂ ರಾಜಕೀಯ ಮತ್ತು ಸಾರ್ವಜನಿಕ ಹಿತಾಸಕ್ತಿಯ ವಿಷಯ ಬಿಟ್ಟು ವೈಯಕ್ತಿಕವಾಗಿ ಪರಸ್ಪರ ನಿಂದಿಸಿಕೊಳ್ಳುವುದನ್ನು ನೋಡಿ, ನಾನು ಕುಬ್ಜನಾಗಿ ಹೋಗಿದ್ದೇನೆ. “ಭಟ್ರೇ, ನಿಮ್ಮ ಶಿಷ್ಯರು ಬೀದಿ ಜಗಳವಾಡುವುದನ್ನು ನೋಡಿ ಸುಮ್ಮನಿದ್ದೀರಲ್ಲ?” ಎಂದು ಬೀದಿಯಲ್ಲಿ ಹೋಗುವವರೂ ನನ್ನನ್ನು ಪ್ರಶ್ನಿಸುವಂತಾಗಿದೆ.

ಇಷ್ಟು ದಿನಗಳ ಕಾಲ ನಾನು ಅವರ ರಾಜಕೀಯ ನಿಲುವು-ಒಲವುಗಳ ಬಗ್ಗೆ ಏನನ್ನೂ ಹೇಳದೇ ಅಂತರ ಕಾಯ್ದುಕೊಂಡಿದ್ದೆ. ಅವರವರ ರಾಜಕೀಯ ಅವರವರಿಗೆ ಅಂತ ಸುಮ್ಮನೆ ಇದ್ದೆ. ಅದು ನನಗೆ ಸಂಬಂಧಪಡದ ವಿಷಯ ಕೂಡ. ಆದರೆ ಬರಬರುತ್ತಾ ಇಬ್ಬರು ವೈಯಕ್ತಿಕ ನಿಂದನೆಯಲ್ಲಿ ತೊಡಗಿ ಹಳಿ ತಪ್ಪುತ್ತಿದ್ದಾರೆ ಅನಿಸಲಾರಂಭಿಸಿತು.

ನನಗೆ ಇಬ್ಬರೂ ಬೇಕಾದವರೇ. ನಾನು ಇಬ್ಬರ ಶ್ರೇಯಸ್ಸನ್ನು ಬಯಸುವವನು. ಇಬ್ಬರೂ ಶರಂಪರ ಜಗಳವಾಡುವುದನ್ನು ನೋಡಿ ಸುಮ್ಮನಿದ್ದರೆ, ನಾನು ನೈತಿಕ ಹೊಣೆಗಾರಿಕೆಯಿಂದ ವಿಮುಖನಾಗುತ್ತಿದ್ದೇನೆ ಎಂದು ಎರಡು ದಿನಗಳಿಂದ ನನಗೆ ಬಲವಾಗಿ ಅನಿಸುತ್ತಿದೆ.

ಇಬ್ಬರಲ್ಲೂ ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇನೆ – ಇಬ್ಬರೂ ರಾಜಕೀಯ ಮತ್ತು ಜನಪರ ವಿಷಯಗಳ ಬಗ್ಗೆ ಚರ್ಚೆ ಮಾಡಿ, ವಾದ-ಸಂವಾದ ಮಾಡಿ, ಒಳ್ಳೆಯದೇ. ದಯವಿಟ್ಟು ನಿಮ್ಮ ಜಗಳದಲ್ಲಿ ನಿಮ್ಮ ತಂದೆ-ತಾಯಿಗಳನ್ನು ಎಳೆಯಬೇಡಿ. ಅಂದರೆ ನಿಮ್ಮ ನಿಮ್ಮ ವೈಯಕ್ತಿಕ ಮತ್ತು ತೀರಾ ಕ್ಷುಲ್ಲಕ ವಿಷಯಗಳನ್ನು ಪ್ರಸ್ತಾಪಿಸಿ ಕಿತ್ತಾಡಬೇಡಿ.

ಇಬ್ಬರೂ ಯುವ ನಾಯಕರಾಗಿ ಈಗಾಗಲೇ ನಿಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದ್ದೀರಿ, ಭರವಸೆ ಮೂಡಿಸಿದ್ದೀರಿ. ಆ ಕುರಿತು ನನಗೆ ನಿಮ್ಮಿಬ್ಬರ ಬಗ್ಗೆ ಅತೀವ ಅಭಿಮಾನವಿದೆ. ನಿಮ್ಮಿಬ್ಬರಿಗೂ ಸುದೀರ್ಘವಾದ ರಾಜಕೀಯ ಜೀವನವಿದೆ, ಇನ್ನೂ ಉತ್ತಮ ಭವಿಷ್ಯವಿದೆ.

ಜನರ ನಿರೀಕ್ಷೆಯೂ ನಿಮ್ಮಿಬ್ಬರ ಮೇಲೆ ಜಾಸ್ತಿಯಿದೆ. ಒಮ್ಮೆ ಸಮಾಧಾನದಿಂದ ನೀವು ನಡೆದು ಬಂದ ದಾರಿಯನ್ನು ಹಿಂತಿರುಗಿ ನೋಡಿ. ಈ ಕಿತ್ತಾಟವನ್ನು ಇಲ್ಲಿಗೆ ನಿಲ್ಲಿಸಿ, ಸಾಕು. Enough.”

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!