ಬೆಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ( ವಿದ್ಯುದ್ದೀ ಕರಣ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ನವೆಂಬರ್ 2 ರಿಂದ ಡಿಸೆಂಬರ್ 15ರವರೆಗೆ ಪ್ರತಿದಿನ ನಾಲ್ಕು ಗಂಟೆಗಳ ಕಾಲ ರೈಲುಗಳ (Trains) ಮಾರ್ಗ ವನ್ನು ಬಂದ್ ಮಾಡುತ್ತಿದೆ.
ಈ ಕಾರಣದಿಂದಾಗಿ ಮಂಗಳೂರು-ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳು ರದ್ದಾಗಲಿವೆ.
ರೈಲು ಸಂಖ್ಯೆ 16539 ಯಶವಂತಪುರ – ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ನ.8 ರಿಂದ ಡಿ.13 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್ ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ನ.9 ನ.9 ರಿಂದ ನ13.ರವರೆಗೆ ರದ್ದು ಗೊಳ್ಳಲಿದೆ.
ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಗೋಮಟೇಶ್ವರ ವೀಕ್ಲಿ ಎಕ್ಸ್ಪ್ರೆಸ್ ನ.2 ರಿಂದ ನ.14 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್ ಯಶವಂತಪುರ ವೀಕ್ಲಿ ಎಕ್ಸ್ ಪ್ರೆಸ್ ನ.3 ರಿಂದ ನ.15ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16515 ಯಶವಂತಪುರ ಕಾರವಾರ ವೀಕ್ಲಿ ಎಕ್ಸ್ಪ್ರೆಸ್ ನ.3ರಿಂದ ನ.15ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16516 ಕಾರವಾರ ಯಶವಂತಪುರ ಎಕ್ಸ್ಪ್ರೆಸ್ ನ.4 ರಿಂದ ಡಿ.16ರವರೆಗೆ ರದ್ದುಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.