Chemical spill mock-up demonstration successful in Doddaballapur

ದೊಡ್ಡಬಳ್ಳಾಪುರದಲ್ಲಿ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಯಶಸ್ವಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇವನಹಳ್ಳಿ 3ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇಲ್ಲಿ ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನವನ್ನು (Chemical spill mock-up demonstration) ಯಶಸ್ವಿಯಾಗಿ ನಡೆಸಲಾಯಿತು.

ಆಫ್-ಸೈಟ್ ತುರ್ತು ಅಣಕು ಪ್ರದರ್ಶನದಲ್ಲಿ ಸುಮಾರು 20 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು, ಎನ್.ಡಿ.ಆರ್.ಎಫ್ ಸಿಬ್ಬಂದಿ, ಅಗ್ನಿಶಾಮಕ ದಳ, 02 ಆಂಬ್ಯುಲೆನ್ಸ್, 07 ಬಸ್ ಗಳು, ವೈದ್ಯರು, ದಾದಿಯರು, ವೀಕ್ಷಕರು ಮತ್ತು ವಿವಿಧ ಕಾರ್ಖಾನೆಗಳಿಂದ ಸುಮಾರು 100 ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಅಣುಕು ಪ್ರದರ್ಶನವನ್ನು ನೈಜ ಘಟನೆಯಂತೆ ಬಿಂಬಿಸಲಾಗಿತ್ತು.

DDMA ಯ ಸಹಾಯದಿಂದ ಪುನರ್ವಸತಿ ಕೇಂದ್ರಗಳಿಗೆ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಕೈಗಾರಿಕಾ ಪ್ರದೇಶಕ್ಕೆ ಕಾರ್ಮಿಕರನ್ನು ಸ್ಥಳಾಂತರಿಸಲಾಯಿತು ಮತ್ತು ಪಕ್ಕದ ಕಾರ್ಖಾನೆಯಾದ Grover Jumpper Vineryard ಯಲ್ಲಿನ ನಿಯಂತ್ರಣ ಕೊಠಡಿಯಲ್ಲಿ ಡಿ-ಬೀಫಿಂಗ್ ನಡೆಸಲಾಯಿತು.

ಕಾರ್ಖಾನೆಯ 20 ಕಾರ್ಮಿಕರು ರಾಸಾಯನಿಕ ಸೋರಿಕೆಯಿಂದ ಗಾಯಗೊಂಡರು, ಎನ್.ಡಿ.ಆರ್.ಎಫ್ ತಂಡ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಲಾಯಿತು.

ಈ ರಾಸಾಯನಿಕ ದುರಂತ ಅಣುಕು ಪ್ರದರ್ಶನದಿಂದ ಕಾರ್ಖಾನೆಯಲ್ಲಿ ಸುಮಾರು 265 ಕ್ಕೂ ಹೆಚ್ಚು ಕಾರ್ಮಿಕರನ್ನು ರಕ್ಷಿಸಿ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿಯಿರುವ ಪುನರ್ವಸತಿ ಕೇಂದ್ರಗಳಾದ ಅಂಬೇಡ್ಕರ್ ಭವನ ಮತ್ತು ಸರ್ಕಾರಿ ಬಾಲಕಿಯರ ವಸತಿ ನಿಲಯಕ್ಕೆ ಸ್ಥಳಾಂತರಿಸಲಾಯಿತು.

ಕಾರ್ಖಾನೆಯ ಸುತ್ತಮುತ್ತಲಿನ ಗ್ರಾಮಗಳು ಮತ್ತು ಪ್ರದೇಶದ ಮಾರ್ಗಗಳನ್ನು DDMA ಯ ಸಹಯೋಗದೊಂದಿಗೆ ಸುತ್ತುವರಿದು ಟ್ರಾಫಿಕ್ ನಿಯಂತ್ರಿಸಲಾಯಿತು.

ಈ ಸಮಯದಲ್ಲಿ 02 ಕಾರ್ಮಿಕರು ಮೃತಪಟ್ಟಿದ್ದು, ಸಣ್ಣ-ಪುಟ್ಟ ಗಾಯಗಳಾಗಿರುವ 08 ಕಾರ್ಮಿಕರನ್ನು, ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಯಿತು.

ಅತೀ ಹೆಚ್ಚು ಗಾಯಗಳಾದ 02 ಕಾರ್ಮಿಕರನ್ನು ವಿಕ್ಟೋರಿಯಾ ಮತ್ತು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಯಿತು.

ಇದಲ್ಲದೆ, ಡ್ರಿಲ್ ಮಾಡುವಾಗ ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳು, ಸಂಪನ್ಮೂಲಗಳ ಅವಶ್ಯಕತೆ, ಕಾರ್ಮಿಕರ ಮತ್ತು ಕಾರ್ಖಾನೆಗಳ ಸುರಕ್ಷತೆ, ಕಾರ್ಖಾನೆ ಸುತ್ತಮುತ್ತಲಿನ ಕಾರ್ಮಿಕರ ಮತ್ತು ಜನಗಳ ಜಾಗರೂಕತೆ ಇತ್ಯಾದಿಗಳ ವಿಷಯಗಳ ಕುರಿತಂತೆ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಭಾಗಿದಾರರಿಂದ ಪಡೆಯಲಾಯಿತು.

ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ.

ಅಣುಕು ಪ್ರದರ್ಶನದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಕಾರ್ಖಾನೆಗಳ ಜಂಟಿ ನಿರ್ದೇಶಕರಾದ ನವನೀತ ಮೋಹನ್ ಎನ್, ಕಾರ್ಖಾನೆಗಳ ಉಪನಿರ್ದೇಶಕರಾದ ಎಂ ಎ ಸೋಮಶೇಖರ್, ನರಸಿಂಹಮೂರ್ತಿ ಎಸ್ಎ, , ವಿ ತಿಮ್ಮರಾಜು, ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕರಾದ ಸುಧಾಕರ್ ಚೌಹಾಣ್, ಉಪ ಪ್ರಧಾನ ವ್ಯವಸ್ಥಾಪಕರಾದ ಬಿ ಚಂದ್ರಶೇಖರ್ ಮತ್ತು ಭಾಗೀದಾರ ಇಲಾಖೆಗಳ ಪ್ರತಿನಿಧಿಗಳು, ವೀಕ್ಷಕರು ಮತ್ತು ವಿಪತ್ತು ನಿರ್ವಹಣಾ ತಜ್ಞೆ ಸ್ಮಿತಾ ಟಿ.ಎಲ್ ಭಾಗವಹಿಸಿದ್ದರು.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!