Karnataka Rajyotsava at MSV Public School.. Annual sports event

ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ.. ವಾರ್ಷಿಕ ಕ್ರೀಡಾಕೂಟ

ದೊಡ್ಡಬಳ್ಳಾಪುರ: ಕರ್ನಾಟಕ (Karnataka) ಇದು ಬರಿ ನಾಡಲ್ಲ. ಇದೊಂದು ದೇವಾಲಯ, ಈ ದೇವಾಲಯದಲ್ಲಿ ಅನೇಕ ಆಚಾರ ವಿಚಾರಗಳಿವೆ. ನಡೆ-ನುಡಿ ಶುದ್ಧವಾಗಿದೆ ಎಂದು ಜನಪ್ರಿಯ ವಿಜ್ಞಾನ ಬರಹಗಾರ ಹಾಗೂ ಕನ್ನಡ ಸಂವರ್ಧಕರಾದ ಎಂ.ಓ.ಆವಲಮೂರ್ತಿ ಹೇಳಿದರು.

ತಾಲೂಕಿನ ಪ್ರತಿಷ್ಠಿತ ಶಾಲೆಯಾದ ಎಂ.ಎಸ್.ವಿ. ಪಬ್ಲಿಕ್ ಶಾಲೆಯಲ್ಲಿ ಇಂದು ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಹಾಗೂ ವಾರ್ಷಿಕ ಕ್ರೀಡಾ ಕೂಟ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಭಾಗವಹಿಸಿ ಮಾತನಾಡಿದರು.

ಕನ್ನಡಿಗರ ಮನಸ್ಸು ಬಹಳ ನಿರ್ಮಲವಾಗಿದೆ. ಅಷ್ಠೇ ಅಲ್ಲದೆ ಕನ್ನಡ ನಾಡು ಸರ್ವ ಜನಾಂಗದ ಶಾಂತಿಯ ಸೌಹಾರ್ದತೆಯಿಂದ ಕೂಡಿರುವ ನಾಡಾಗಿದೆ. ಇಲ್ಲಿರುವ ಎಲ್ಲರೂ ಯಾವುದೇ ಬೇಧಭಾವವಿಲ್ಲದೆ ಬಹಳ ಹೆಮ್ಮೆಯಿಂದ, ಸಂಭ್ರಮ ಸಡಗರದಿಂದ ಆಚರಿಸುವ ಹಬ್ಬವೆಂದರೆ ಅದುವೆ ಕನ್ನಡ ರಾಜ್ಯೋತ್ಸವವಾಗಿದೆ ಎಂದರು.

“ಕನ್ನಡ ಕೇವಲ ಭಾಷಣಕ್ಕೆ ಮತ್ತು ನವಂಬರ್ ಗೆ ಸೀಮಿತವಾಗದೆ ದೈನಂದಿನ ಚಟುವಟಿಕೆ ಹಾಗೂ ವಾಡಿಕೆಯಲ್ಲಿ ಅಳವಡಿಸಿಕೊಳ್ಳಬೇಕು. 14 ವರ್ಷದೊಳಗೆ ಕಲಿಯುವ ಸಂಸ್ಕಾರ, ಸಂಸ್ಕೃತಿ ನಮ್ಮ ಜೀವನದುದ್ದಕ್ಕೂ ಇರುತ್ತದೆ. ಹಾಗಾಗಿ ಮಕ್ಕಳು ಉತ್ತಮ ವಿದ್ಯೆ, ಜೀವನ ಶೈಲಿ ಹಾಗೂ ಸಂಸ್ಕಾರವನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ‌ನೀಡಿದರು.

ಕನ್ನಡದ ಉಳಿವು ಕೇವಲ ದೈನಂದಿನ ಬಳಕೆಯಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ಸಹಿಯನ್ನೂ ಸಹ ಕನ್ನಡದಲ್ಲೇ ಮಾಡುವುದನ್ನು ಕಲಿಯಬೇಕು. ಹಾಗೂ ಸಾಧ್ಯವಾದಷ್ಟೂ ಕನ್ನಡ ಪುಸ್ತಕಗಳನ್ನು ಓದುವುದರಿಂದ ಶಬ್ದಭಂಡಾರ ಹೆಚ್ಚಾಗುತ್ತದೆ ಎಂಬ ಕಿವಿ ಮಾತನ್ನು ಹೇಳಿದರು.

ಶಾಲೆಯ ಅಧ್ಯಕ್ಷರಾದ ಎ.ಸುಬ್ರಮಣ್ಯ ಮಾತನಾಡಿ, 1956ಕ್ಕಿಂದ ಹಿಂದಿನ ಕರ್ನಾಟಕದ ಸ್ಥಿತಿ ಗತಿಗಳನ್ನು ಹಾಗೂ ಕರ್ನಾಟಕ ಏಕೀಕರಣ, ಚಳುವಳಿ ಅದರ ಏಳು ಬೀಳುಗಳು, ಆಲೂರು ವೆಂಕಟರಾಯರ ಕಾಣಿಕೆಗಳು ಅವರು ಹುಟ್ಟು ಹಾಕಿದ ಏಕೀಕರಣದ ಚಳುವಳಿಯ ಬಗ್ಗೆ ತಿಳಿಸಿದರು.

ಅಲ್ಲಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ನಾಡನ್ನು ಒಂದುಗೂಡಿಸಲು ಅಂದಿನ ಕನ್ನಡಿಗರು ಮಾಡಿದ ಹೋರಾಟದ ಮಹತ್ವಗಳ ಬಗ್ಗೆ ತಿಳಿಸಿದರು. ಕನ್ನಡ ನುಡಿ, ಜಲ, ಸಂಪತ್ತಿನ ಸಂರಕ್ಷಣೆಗಾಗಿ ನಾವೆಲ್ಲಾ ಸದಾ ಸಿದ್ಧರಿರಬೇಕು ಎಂಬ ಪಣ ತೊಟ್ಟಾಗ ನಮ್ಮ ನಾಡು ಮತ್ತಷ್ಠು ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.

ಕನ್ನಡ ನಾಡಿನಲ್ಲಿ ಆಳ್ವಿಕೆ ಮಾಡಿದ ರಾಜ ಮಹಾರಾಜರ ಆಳ್ವಿಕೆಯ ಕಾಲ, ವಾಸ್ತುಶಿಲ್ಪಗಳ ಬಗ್ಗೆ ಹಾಗೂ ರಾಜ್ಯಾಡಳಿತದ ವೈಖರಿಯ ಬಗ್ಗೆ ತಿಳಿಸುತ್ತಾ, ವಿಷ್ಣುವರ್ಧನ ಹಾಗೂ ಕೃಷ್ಣದೇವರಾಯರ ಆಳ್ವಿಕೆಯ ಕಾಲದಲ್ಲಿ ಕನ್ನಡ ನಾಡು ಎಷ್ಟು ಶ್ರೀಮಂತಿಕೆಯಿಂದ ಕೂಡಿತ್ತು ಎಂಬ ವಿಚಾರಗಳನ್ನು ಶಾಲೆಯ ಉಪಾಧ್ಯಕ್ಷ ಸ್ವರೂಪ್ ಎಸ್ ತಿಳಿಸಿದರು.

ಶಾಲೆಯ ಪ್ರಾಂಶುಪಾಲರಾದ ರೆಮ್ಯ ಬಿ.ವಿ. ಮಾತನಾಡಿ ಕನ್ನಡ ನಾಡಿನಲ್ಲಿರುವ ಐತಿಹಾಸಿಕ ಸ್ಥಳಗಳ ಮಾಹಿತಿ ಹಾಗೂ ಅವುಗಳ ಮಹತ್ವವನ್ನು ತಿಳಿಸಿ, ಈ ಐತಿಹಾಸಿಕ ಸ್ಥಳಗಳನ್ನು ಸಂದರ್ಶಿಸುವುದರಿಂದ ನಮ್ಮ ನಾಡಿನ ಶ್ರೀಮಂತ ಸಂಸ್ಕೃತಿಯ ಭವ್ಯತೆಯ ಬಗ್ಗೆ ಅರಿವಾಗುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಶಾಲೆಯ ವಾರ್ಷಿಕ ಕ್ರೀಡಾ ಕೂಟ ಶಾಲಾ ಆವರಣದಲ್ಲಿ ನೆರವೇರಿತು.

ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ.. ವಾರ್ಷಿಕ ಕ್ರೀಡಾಕೂಟ

ಮಕ್ಕಳು ಪ್ರದರ್ಶಿಸಿದ ಟೇಕ್ವಾಂಡೋ, ಯೋಗ ಪ್ರದರ್ಶನ, ಡ್ರಿಲ್ ನೆರೆದಿದ್ದ ಪೋಷಕರ ಮನಸೆಳೆದವು.

ಮುಖ್ಯ ಅತಿಥಿಗಳು ಜ್ಯೋತಿಯನ್ನು ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.

ಪುಟಾಣಿ ಮಕ್ಕಳ ಮ್ಯಾರಾಥಾನ್ ನಡುವೆ ಕ್ರೀಡಾ ಜ್ಯೋತಿ ಪ್ರಜ್ವಲನದ ನಂತರ ಕ್ರೀಡಾ ಕೂಟ ಆರಂಭವಾಯಿತು.

ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ.. ವಾರ್ಷಿಕ ಕ್ರೀಡಾಕೂಟ

ಓಟದ ಸ್ಪರ್ಧೆ, ರಿಲೇ, ಕಬ್ಬಡ್ಡಿ, ವಾಲಿಬಾಲ್, ಥ್ರೋಬಾಲ್, ಉದ್ದ ಜಿಗಿತ, ಗುಂಡುಎಸೆತ, ತಟ್ಟೆ ಎಸೆತೆ ಹೀಗೆ ಮೊದಲಾದ ಕ್ರೀಡೆಗಳಲ್ಲಿ ಮಕ್ಕಳು ಭಾಗವಹಿಸಿದರು.

ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ.. ವಾರ್ಷಿಕ ಕ್ರೀಡಾಕೂಟ

ಶಾಲೆಯ ವಿವಿಧ ತಂಡಗಳಾದ ಅಗ್ನಿ, ಆಕಾಶ್, ಪೃಥ್ವಿ, ಸೂರ್ಯ ತಂಡದ ಮಕ್ಕಳ ಶಿಸ್ತುಬದ್ಧ ಪಥಸಂಚಲನ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು.

ಶಾಲೆಯ ಕಾರ್ಯದರ್ಶಿ ಮಂಜುಳಾ ಸುಬ್ರಮಣ್ಯ, ಉಪಾಧ್ಯಕ್ಷ ಸ್ವರೂಪ್ ಎಸ್., ಟ್ರಸ್ಟಿ ನಯನಾ ಸ್ವರೂಪ್ ಹಾಗೂ ಸಿಬ್ಬಂದಿ ವರ್ಗ ಪ್ರಶಸ್ತಿ ಪಡೆದ ಮಕ್ಕಳನ್ನು ಅಭಿನಂದಿಸಿದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!