ಮೈಸೂರು: ಮಹಿಳೆಯೋರ್ವರು ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಕುತ್ತಿಗೆ ಕೊಯ್ದು ಹತ್ಯೆಮಾಡಿ, ಬಳಿಕ ತಾನು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾ ಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಮುಸ್ಲಿಂ ಬ್ಲಾಕ್ ನಲ್ಲಿ ನಡೆದಿದೆ.
ರಬಿಯಾ ಭಾನು ಮಕ್ಕಳನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ಗುರುತಿಸಲಾಗಿದೆ
ಕಳೆದ 3 ವರ್ಷಗಳ ಹಿಂದೆ ರಬಿಯಾ ಭಾನುಗೆ ಸೈಯದ್ ಮುಸಾ ವೀರ್ ಎಂಬುವರ ಜತೆಗೆ ಮದುವೆಯಾಗಿದ್ದರು. 2 ವರ್ಷದ ಒಂದು ಹೆಣ್ಣು ಮಗು, ಕಳೆದ 8 ದಿನಗಳ ಹಿಂದೆ ಮತ್ತೊಂದು ಹೆಣ್ಣು ಮಗು ಕೂಡ ಜನಿ ಸಿತ್ತು. ಮೊದಲ ಹೆಣ್ಣು ಮಗು ಅನಮ್ ಫಾತಿಯ ವಿಶೇಷ ಚೇತನ ಮಗುವಾಗಿದ್ದ ಕಾರಣ ಕೌಟುಂಬಿಕ ಕಲಹ ಇತ್ತು ಎನ್ನಲಾಗಿದೆ.
ಕಳೆದ 8 ದಿನದ ಹಿಂದೆ ಇನ್ನೊಂದು ಮಗು ಕೂಡ ಜನಿಸಿದ್ದು ಅದು ಹೆಣ್ಣು ಮಗುವಾಗಿದೆ. ಹೀಗಾಗಿ ತಾಯಿಯ ರಬಿಯಾ ಭಾನು ಬೇಜಾರಿನಲ್ಲಿದ್ದು ತವರುಮನೆಯಲ್ಲಿ ಬಾಣಂತನಕ್ಕೆ ತೆರಳಿದ್ದಾರೆ.
ಶನಿವಾರ ಬೆಳಗ್ಗೆ ಮೊದಲ ಮಗು ಅಂಗವಿಕಲೆ, ಎರಡನೇ ಮಗು ಕೂಡ ಹೆಣ್ಣು ಎಂದು ಮನನೊಂದು ಮಲಗಿದ್ದ ಮಕ್ಕಳ ಕತ್ತು ಕೊಯ್ದು ತಾನು ಕೂಡ ಕತ್ತು ಕೊಯ್ದು ಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದು, ಉಪಾಹಾರಕ್ಕೆ ಕರೆಯಲು ಕುಟುಂಬಸ್ಥರು ರೂಮಿನ ಬಳಿ ಹೋದಾಗ ಘಟನೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.
ಬೆಟ್ಟದಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.