Women's World Cup for India

ಗುಡ್ಮಾರ್ನಿಂಗ್ ನ್ಯೂಸ್: ಭಾರತದ ಮುಡಿಗೆ ಮಹಿಳಾ ವಿಶ್ವಕಪ್

ಮುಂಬೈ: ಹರ್ಮನ್‌ ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಇತಿಹಾಸ ನಿರ್ಮಿಸಿದೆ. ನವಿ ಮುಂಬೈನ ಡಿ.ವೈ ಪಾಟೀಲ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಏಕದಿನ ವಿಶ್ವಕಪ್ (Women’s World Cup) ಫೈನಲ್‌ನಲ್ಲಿ ಭಾರತ ತಂಡ ದ.ಆಫ್ರಿಕಾವನ್ನು 52 ರನ್‌ಗಳಿಂದ ಮಣಿಸಿದೆ.

ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ದ ಎಲ್ಲಾ ವಿಭಾಗಗಳಲ್ಲೂ ಸರ್ವಾಂಗೀಣ ಪ್ರದರ್ಶನ ತೋರಿಸಿದ ಹರ್ಮನ್ ಪ್ರೀತ್ ಕೌರ್ ಪಡೆಯು ಮೊದಲ ಬಾರಿಗೆ ವಿಶ್ವಚಾಂಪಿಯನ್‌ ಆಗಿ ಮೂಡಿ ಬಂದಿದೆ.

2005ರಲ್ಲಿ ಆಸ್ಟ್ರೇಲಿಯಾ ಮತ್ತು 2017ರಲ್ಲಿ ಇಂಗ್ಲೆಂಡ್ ವಿರುದ್ಧ ಫೈನಲ್ ಪಂದ್ಯದಲ್ಲಿ ಪರಾಭವ ಅನುಭವಿಸಿದ್ದ ಭಾರತದ ವನಿತೆಯರು ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ಧ ಎಡವಲಿಲ್ಲ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡಕ್ಕೆ ಸೋತ ಭಾರತ ತಂಡ 7 ವಿಕೆಟ್ ಕಳೆದುಕೊಂಡು 298 ರನ್ ಗಳಿಸಿತು. ಈ ಮೊತ್ತವನ್ನು ಬೆಂಬತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್‌ಗಳಲ್ಲಿ 246 ರನ್ ಗಳಿಸಲಷ್ಟೇ ಶಕ್ತವಾಯಿತು, ಆ ಮೂಲಕ ಭಾರತ ತಂಡ 52 ರನ್ ಗಳ ಭರ್ಜರಿ ವಿಜಯ ದಾಖಲಿಸಿತು.

ಬ್ಯಾಟಿಂಗ್‌ಗೆ ನೆರವಾಗುತ್ತಿದ್ದ ಪಿಚ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಭರ್ಜರಿ ಆರಂಭವನ್ನೇ ಮಾಡಿತ್ತು. ನಾಯಕಿ ಲಾರಾ ವೋಲ್ವಾರ್ಡ್ಸ್ ಮತ್ತು ತಾಜ್ಜಿನ್ ಬ್ರಿಟ್ಸ್ ಅವರು 8.4 ಓವರ್‌ಗಳಲ್ಲಿ 50 ರನ್ ಸೇರಿಸಿದರು. ಈ ಜೋಡಿ ದೊಡ್ಡ ಜತೆಯಾಟವ ನ್ನಾಡುವ ಸೂಚನೆ ನೀಡಿತ್ತು. ಆದರೆ ತಂಡದ ಮೊತ್ತ 51 ಆಗಿದ್ದಾಗ ಇಲ್ಲದ ರನ್ ತೆಗೆಯಲು ಹೋದ ತಾಜ್ಜಿ ನ್ ಬ್ರಿಟ್ಸ್ (35 ಎಸೆತದಲ್ಲಿ 23 ರನ್) ರನೌಟ್ ಆದರು. ಇದಾಗಿ 11 ರನ್‌ಗಳಾಗುವಷ್ಟರಲ್ಲೇ ಇನ್ನೂ ಖಾತೆ ತೆರೆಯದ ಅನ್ನೇರ್ ಬಾಶ್ ಅವರನ್ನು ಎಲ್‌ಬಿಡಬ್ಲ್ಯೂ ಬಲೆಗೆ ಬೀಳಿಸುವಲ್ಲಿ ಶ್ರೀಚರಣಿ ಯಶಸ್ವಿಯಾದರು.

ಇದಾದ ಬಳಿಕ ನಾಯಕಿ ವೊಲ್ವಾರ್ಡ್ಸ್ ಅವರು ಸುನೆ ಲೂಸ್ ಅವರೊಂದಿಗೆ ಸೇರಿ 52 ರನ್‌ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ಬೌಲಿಂಗ್‌ಗೆ ಇಳಿದ ಶೆಫಾಲಿ ವರ್ಮಾ ಅವರು ನಿರಂತರ 2 ಓವರ್ ಗಳಲ್ಲಿ 2 ವಿಕೆಟ್ ಕಬಳಿಸಿದರು.

ಸುನೆ ಲೂಸ್ (31 ಎಸೆತದಲ್ಲಿ 25 ರನ್) ಅವರು ಶೆಫಾಲಿ ವರ್ಮಾಗೆ ಕಾಟ್ ಆ್ಯಂಡ್ ಬೌಲ್ಡ್ ಆದರೆ, ಮರಿಝಾನೆ ಕಾಪ್ (5 ಎಸೆತದಲ್ಲಿ 4 ರನ್) ಅವರು ಕೀಪರ್ ರಿಚಾ ಘೋಷ್ ಅವರಿಗೆ ಕ್ಯಾಚಿತ್ತು ಮರಳಿದರು. ಆ ವಿಕೆಟ್ ಪತನದ ಬಳಿಕ ಎಚ್ಚರಿಕೆಯಿಂದ ಆಡುತ್ತಿದ್ದ ಸಿನಾಲೊ ಜಾಪ್ಪಾ ಅವರು ದೀಪ್ತಿ ಶರ್ಮಾ ಅವರ ಬೌಲಿಂಗ್‌ನಲ್ಲಿ ರಾಧಾ ಯಾದವ್ ಅವರಿಗೆ ಕ್ಯಾಚಿತ್ತರು.

ಈ ಸಂದರ್ಭದಲ್ಲಿ ಅನಾರಿ ಡೆರ್ಕ್ಸನ್ ಅವರ ಜೊತೆ ನಾಯಕಿ ವೊಲ್ವಾರ್ಡ್ಸ್ ಅವರು 61 ರನ್‌ಗಳ ಮಹತ್ವದ ಜತೆಯಾಟವಾಡಿ ತಂಡದ ಮೊತ್ತವನ್ನು 200ರ ಗೆಡಿ ದಾಟಿಸಿದರು. ಈ ಹಂತದಲ್ಲಿ ಪಂದ್ಯ ದಕ್ಷಿಣ ಆಫ್ರಿಕಾ ಕೈಗೆ ಬಂದಿತ್ತು. ಆದರೆ ಅನುಭವಿ ದೀಪ್ತಿ ಶರ್ಮಾ ಅವರ ಸೊಗಸಾದ ಯಾರ್ಕರ್ ಲೆಂಗ್ ಎಸೆತಕ್ಕೆ ಡೆರ್ಕ್ಸನ್ ಔಟಾದರು. ಆದರೂ ನಾಯಕಿ ವೊಲ್ವಾರ್ಡ್ಸ್ ಮಾತ್ರ ಹೋರಾಟ ನಿಲ್ಲಿಸಿರಲಿಲ್ಲ.

96 ಎಸೆತಗಳಲ್ಲಿ ಶತಕ ಪೂರೈಸಿದ ಅವರನ್ನು ಪೆವಿಲಿಯನ್‌ಗೆ ಕಳುಹಿಸುವಲ್ಲಿ ದೀಪ್ತಿ ಶರ್ಮಾ ಯಶಸ್ವಿಯಾದರು. ಅಮನ್ ಜೋತ್ ಕೌರ್ ಹಿಡಿದ ಅದ್ಭುತ ಕ್ಯಾಚ್ ಗೆ ದಕ್ಷಿಣ ಆಫ್ರಿಕಾ ನಾಯಕಿ ಔಟಾದರು. ಅಲ್ಲಿಂದ ಬಳಿಕ ಪಂದ್ಯದ ಮೇಲೆ ಭಾರತದ ಬೌಲರ್ ಗಳು ಸಂಪೂರ್ಣ ಹಿಡಿತ ಸಾಧಿಸಿದರು.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಟೀಮ್ ಇಂಡಿಯಾ ಭರ್ಜರಿ ಆರಂಭವನ್ನು ಪಡೆದುಕೊಂಡಿತು. ಸೆಮಿಫೈನಲ್ ಪಂದ್ಯದಲ್ಲಿ ವಿಫಲರಾಗಿದ್ದ ಶಫಾಲಿ ವರ್ಮಾ ಭಾನುವಾರ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದರು.

ಅನುಭವಿ ಸ್ಮೃತಿ ಮಂಧಾನಾ

ಅನುಭವಿ ಸ್ಮೃತಿ ಮಂಧಾನಾ ಜತೆ ಸೇರಿ ಮೊದಲ ವಿಕೆಟ್‌ಗೆ 104 ರನ್‌ಗಳ ಜೊತೆಯಾಟ ನೀಡಿದರು. ಮಂಧಾನಾ 58 ಎಸೆತಗಳಲ್ಲಿ 8 ಬೌಂಡರಿಗಳ ನೆರವಿನಿಂದ 45 ರನ್ ಗಳಿಸಿ ಟ್ರಯಾನ್ ಬೌಲಿಂಗ್‌ನಲ್ಲಿ ಕ್ಯಾಚ್ ಔಟ್ ಆದರು.

ಬಳಿಕ ಸ್ಪೋಟಕ ಬ್ಯಾಟಿಂಗ್ ಮುಂದುವರಿಸಿದ ಶಫಾಲಿ ವರ್ಮಾ 78 ಎಸೆತಗಳಲ್ಲಿ 87 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳಿದ್ದವು.

ಕಳೆದ ಪಂದ್ಯದಲ್ಲಿ ಶತಕ ಗಳಿಸಿದ್ದ ಜೆಮಿಮಾ ರೊಡ್ರಿಗಸ್ 37 ಎಸೆತಗಳಲ್ಲಿ ಕೇವಲ 24 ರನ್ ಗಳಿಸಲಷ್ಟೇ ಶಕ್ತರಾದರು. ನಾಯಕಿ ಹರ್ಮನ್ ಪ್ರೀತ್ ಕೌರ್ 29 ಎಸೆತಗಳಲ್ಲಿ 20 ರನ್ ಗಳಿಸಿದರೆ, ಅಮನ್ ಜೋತ್ ಕೌರ್ ಆಟ 12 ರನ್‌ಗೆ ಸೀಮಿತವಾಯಿತು.

ಆದರೆ 6ನೇ ವಿಕೆಟ್‌ಗೆ ಜತೆಯಾಟದ ದೀಪ್ತಿ ಶರ್ಮಾ ಹಾಗೂ ರಿಚಾ ಘೋಷ್ ಕೇವಲ 35 ಎಸೆತಗಳಲ್ಲಿ 47 ರನ್ ಸೂರೆಗೈದರು.

ದೀಪ್ತಿ ಶರ್ಮಾ ಫೈನಲ್‌ನಲ್ಲೂ ತಮ್ಮ ಸ್ಥಿರ ಬ್ಯಾಟಿಂಗ್ ಪ್ರದರ್ಶನ ಮುದುವರಿಸಿ 58 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ 58 ರನ್ ಗಳಿಸಿದರೆ, ಸ್ಫೋಟಕ ಬ್ಯಾಟಿಂಗ್ ಮಾಡಿದ ರಿಚಾ ಘೋಷ್ ಕೇವಲ 24 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್‌ಗಳ ಸಹಿತ 34 ರನ್ ಗಳಿಸಿ ತಂಡದ ಮೊತ್ತ 300ರ ಸನಿಹ ಬರಲು ನೆರವಾದರು.

ಭಾರೀ ಮಳೆಯಿಂದಾಗಿ ಭಾನುವಾರದ ಫೈನಲ್ ಪಂದ್ಯ ಸರಿಯಾದ ಸಮಯಕ್ಕೆ ಆರಂಭವಾಗಲಿಲ್ಲ. ಮೈದಾನ ಒದ್ದೆಯಾಗಿದ್ದ ಕಾರಣ ಎರಡು ಗಂಟೆಗಳ ಕಾಲ ಆಟ ವಿಳಂಬವಾಯಿತು. ಎರಡೂ ತಂಡಗಳು ಯಾವುದೇ ಬದಲಾವಣೆಯಿಲ್ಲದೆ ಫೈನಲ್‌ನಲ್ಲಿ ಕಣಕ್ಕಿಳಿದಿದ್ದವು.

ಫೋಟೋ ಕೃಪೆ: BCCI ‘X’ ಖಾತೆ

ರಾಜಕೀಯ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ( B.Y. Vijayendra) ತಿಳಿಸಿದ್ದಾರೆ.

[ccc_my_favorite_select_button post_id="116125"]
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು

[ccc_my_favorite_select_button post_id="116144"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!