ದೊಡ್ಡಬಳ್ಳಾಪುರ; ತಾಲ್ಲೂಕಿನ ಸಿಂಪಾಡಿಪುರ ಗ್ರಾಮದ ವೀಣೆತಯಾರಕ ಹಾಗೂ 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (Rajyotsava Award) ಪುರಸ್ಕೃತ ಪೆನ್ನ ಓಬಳಯ್ಯ(105) ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ.
ಮೃತರಿಗೆ ಮೂರು ಜನ ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಿಂಪಾಡಿಪುರದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.