Don't spread misinformation about the Manjunatha Swamy temple in Dharmasthala: R. Ashoka

BJP ಸುರಂಗ ರಸ್ತೆ ಬೇಡವೆಂದು ಹೇಳುತ್ತಿಲ್ಲ: ಆರ್‌.ಅಶೋಕ

ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

ಶಾಸಕರು, ಸಂಸದರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು ಎಲ್ಲ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದಾಗಿ ಬೆಂಗಳೂರು ಗಾರ್ಬೇಜ್‌ ಸಿಟಿಯಾಗಿ ಬದಲಾಗಿದೆ.

ಎಲ್ಲ ರಸ್ತೆಗಳಲ್ಲಿ ಗುಂಡಿಗಳು ಹಾಗೂ ಕಸದ ರಾಶಿ ಕಂಡುಬರುತ್ತಿದೆ. ನಗರಕ್ಕೆ ದ್ರೋಹ ಬಗೆದ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಹಾಗೂ ಒಂದು ವಾರ ಕಾಲ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್‌ 6 ರಿಂದ 15 ರವರೆಗೆ ಸಹಿ ಸಂಗ್ರಹ ಅಭಿಯಾನ ಮಾಡಲಾಗುವುದು ಎಂದು ತಿಳಿಸಿದರು.

ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ. ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಆ ಹಣವನ್ನು ಹೊಂದಿಸಲು ಈ ಕ್ರಮ ತರಬೇಕಿಲ್ಲ. ಇಷ್ಟೊಂದು ಹಣವನ್ನು ಜನರು ಪಾವತಿಸಲು ಸಾಧ್ಯವಿಲ್ಲ.

ನೋಂದಣಿ ಮೇಲೆ 5% ಹೆಚ್ಚಿಸಿ ಕಮಿಶನ್‌ ಹೊಡೆಯಲು ಪ್ರಯತ್ನ ಮಾಡಲಾಗಿದೆ. ಕಸದ ಸೆಸ್‌ ತಂದು ಜನರ ಮೇಲೆ ಹೊರೆ ಹಾಕಲಾಗಿದೆ. ಬೆಸ್ಕಾಂನಲ್ಲಿ ಒಸಿ, ಸಿಸಿ ಮೂಲಕ ಹಣ ಸಂಗ್ರಹಿಸಲಾಗುತ್ತಿದೆ. ತಾತ್ಕಾಲಿಕವಾಗಿ ವಿದ್ಯುತ್‌ ಪಡೆದರೆ ಮೂರು ಪಟ್ಟು ಶುಲ್ಕ ನೀಡಬೇಕಿದ್ದು, ಇದನ್ನೇ ಬೆಸ್ಕಾಂನಿಂದ ಪ್ರೋತ್ಸಾಹಿಸಲಾಗುತ್ತಿದೆ. ಜನರಿಗೆ ಇಂತಹ ದುಬಾರಿ ಬ್ರ್ಯಾಂಡ್‌ ಬೆಂಗಳೂರು ಬೇಕಿಲ್ಲ. ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ ಎಂದರು.

ಸುರಂಗ ರಸ್ತೆ ಬೇಡವೆಂದು ಹೇಳುತ್ತಿಲ್ಲ

ಸುರಂಗ ರಸ್ತೆ ನಿರ್ಮಿಸಲು ಸಾವಿರಾರು ಕೋಟಿ ರೂ. ಖರ್ಚು ಮಾಡುವುದು ಬೇಡ. ಲಾಲ್‌ಬಾಗ್‌ನಂತಹ ಉದ್ಯಾನಗಳನ್ನು ನಾಶ ಮಾಡಿ ರಸ್ತೆ ಮಾಡುವುದು ಬೇಕಿಲ್ಲ. ಈ ಹಿಂದೆ ಉಕ್ಕಿನ ಸೇತುವೆ ನಿರ್ಮಿಸಲು ಮುಂದಾದಾಗ ಕಾಂಕ್ರೀಟ್‌ ರಸ್ತೆ ಮಾಡಿ ಎಂದು ಆಗ್ರಹಿಸಿದ್ದೆವು.

ಈಗಲೂ ಸುರಂಗ ರಸ್ತೆ ಬೇಡವೆಂದು ಹೇಳುತ್ತಿಲ್ಲ. ಆದರೆ ದೆಹಲಿ ನಾಯಕರಿಗೆ ಅನುಕೂಲ ಮಾಡಿಕೊಡಲು ಸುರಂಗ ಕೊರೆಯುವುದು ಬೇಕಿಲ್ಲ. ಈಗಾಗಲೇ 150 ಬಗೆಯ ದರ ಏರಿಕೆಗಳನ್ನು ಮಾಡಲಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದರು.

ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಬೆಳಗಾವಿ ಹಾಗೂ ಚಾಮರಾಜನಗರದಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಾಳೆ ನಾನು ಚಾಮರಾಜನಗರಕ್ಕೆ ಹೋಗಿ ರೈತರ ಅಹವಾಲು ಆಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಹಾಗೂ ಪಾದಯಾತ್ರೆ ಮಾಡುತ್ತೇನೆ ಎಂದು ಹೇಳಿದರು.

ಚರ್ಚೆಗೆ ಬನ್ನಿ

ಕೇಂದ್ರ ಸರ್ಕಾರ ಮತ್ತು ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಬೆಂಗಳೂರಿಗೆ ಎಷ್ಟು ಅನುದಾನ ನೀಡಿದೆ, ಎಷ್ಟು ಅಭಿವೃದ್ಧಿ ಕಾರ್ಯಗಳಾಗಿದೆ ಎಂದು ತಿಳಿಸುತ್ತೇವೆ. ಕಾಂಗ್ರೆಸ್‌ ಎಷ್ಟು ಅಭಿವೃದ್ಧಿ ಮಾಡಿದೆ ಎಂದು ತಿಳಿಸಲಿ. ಸಿಎಂ ಬದಲಾವಣೆ ಆಗಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ.ಶಿವಕುಮಾರ್‌ ಸ್ಪಷ್ಟವಾಗಿ ತಿಳಿಸಲಿ.

ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಸ್ಪಷ್ಟೀಕರಣ ತಿಳಿಸಲಿ. ಹೀಗೆ ಹೇಳಿದರೆ ನಾವೇ ಸುಮ್ಮನಾಗುತ್ತೇವೆ. ಇವರಿಬ್ಬರಲ್ಲಿ ಯಾರೇ ಸಿಎಂ ಆದರೂ ಅಭಿವೃದ್ಧಿ ಮಾಡಲ್ಲ ಎಂದರು.

ಮಾಜಿ ಸಚಿವ, ಶಾಸಕರಾಗಿದ್ದ ಎಚ್‌.ವೈ.ಮೇಟಿ ಅವರ ನಿಧನ ಬಹಳ ದುಃಖ ತಂದಿದೆ. ರಾಜಕೀಯ ರಂಗದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದರು. ಅವರ ಸೇವೆಯನ್ನು ಜನರು ಯಾವಾಗಲೂ ಸ್ಮರಿಸುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಕೋರುತ್ತೇನೆ ಎಂದರು.

ರಾಜಕೀಯ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ( B.Y. Vijayendra) ತಿಳಿಸಿದ್ದಾರೆ.

[ccc_my_favorite_select_button post_id="116125"]
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು

[ccc_my_favorite_select_button post_id="116144"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!