Vote rigging: Rahul Gandhi has 5 questions for the Election Commission..!

ದೆಹಲಿಯಲ್ಲಿ ಮತದಾನ ಮಾಡಿದ ಬಿಜೆಪಿಯವರಿಂದ ಬಿಹಾರದಲ್ಲೂ ಮತದಾನ; ರಾಹುಲ್ ಗಾಂಧಿ

ಪಾಟ್ನಾ: ಚುನಾವಣೆ ಆಯೋಗದ ವಿರುದ್ಧ ವೋಟ್ ಚೋರಿ (Vote Chori) ಆರೋಪ ಮುಂದುವರೆಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಈಗ ಮತ್ತೊಂದು ಗಂಭೀರ ಆರೋಪ ಮಾಡಿ ಗಮನ ಸೆಳೆದಿದ್ದು, ದೆಹಲಿ ಸೇರಿದಂತೆ ಇತರೆ ರಾಜ್ಯಗಳ ಚುನಾವಣೆಯಲ್ಲಿ ಮತದಾನ ಮಾಡಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಬಿಹಾರ ಚುನಾವಣೆಯಲ್ಲಿಯೂ ಮತದಾನ ಮಾಡಿದ್ದಾರೆಂದಿದ್ದು, ಶೀಘ್ರದಲ್ಲೇ ದಾಖಲೆ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ರಾಹುಲ್ ಗಾಂಧಿ, ಭಾರತದ ನನ್ನ ಯುವ ಮತ್ತು ಜನರಲ್ ಝಡ್ ಸ್ನೇಹಿತರೇ,

ಹರಿಯಾಣದಲ್ಲಿ ಸರ್ಕಾರವನ್ನು ಮತ ಕಳ್ಳತನದ ಮೂಲಕ ಹೇಗೆ ಕದಿಯಲಾಯಿತು ಮತ್ತು ಇಡೀ ರಾಜ್ಯದ ಸಾರ್ವಜನಿಕ ಅಭಿಪ್ರಾಯವನ್ನು ಕಸಿದುಕೊಳ್ಳಲಾಯಿತು ಎಂಬುದನ್ನು ನಾನು ಸಾಕ್ಷ್ಯಾಧಾರಗಳೊಂದಿಗೆ ಪ್ರದರ್ಶಿಸಿದೆ.

ಕೆಲವು ದಿನಗಳ ಹಿಂದೆ, ನಾನು SIR ಮೂಲಕ ಮತದಾರರ ಪಟ್ಟಿಗಳ ವ್ಯಾಪಕ ಕುಶಲತೆಯ ಬಗ್ಗೆ ಜಾಗೃತಿ ಮೂಡಿಸಲು ಬಿಹಾರದಲ್ಲಿ ‘ಮತದಾರರ ಹಕ್ಕುಗಳ ಯಾತ್ರೆ’ಯನ್ನು ಸಹ ನಡೆಸಿದ್ದೆ.

ಬಿಹಾರದ ಪ್ರತಿಯೊಂದು ಮೂಲೆಯಿಂದ ಬರುವ ಸುದ್ದಿಗಳು ಮತ್ತು ವೀಡಿಯೊಗಳು ಮತ ಕಳ್ಳತನದ ಪುರಾವೆಗಳನ್ನು ಮತ್ತಷ್ಟು ಬಲಪಡಿಸುತ್ತಿವೆ.

ಲಕ್ಷಾಂತರ ಮತದಾರರನ್ನು ಈಗಾಗಲೇ ಪಟ್ಟಿಯಿಂದ ತೆಗೆದುಹಾಕಲಾಗಿದೆ ಮತ್ತು ಈಗ ಜನರು ಮತಗಟ್ಟೆಗಳಲ್ಲಿ ಮತ ಚಲಾಯಿಸುವುದನ್ನು ತಡೆಯಲಾಗುತ್ತಿದೆ..

ಅದೇ ಸಮಯದಲ್ಲಿ, ಇತರ ರಾಜ್ಯಗಳಲ್ಲಿ ಚುನಾವಣೆಗಳಲ್ಲಿ ಮತ ಚಲಾಯಿಸಿದ ಅನೇಕ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಬಿಹಾರದಲ್ಲಿಯೂ ಮತ ಚಲಾಯಿಸುತ್ತಿದ್ದಾರೆ.

ನೆನಪಿಡಿ, ಮತ ಕಳ್ಳತನದ ಮೂಲಕ ರಚನೆಯಾದ ಸರ್ಕಾರವು ಯುವಕರು, ಜನರಲ್ ಝಡ್ ಮತ್ತು ಸಾರ್ವಜನಿಕರ ಹಿತಾಸಕ್ತಿಗಾಗಿ ಎಂದಿಗೂ ಕೆಲಸ ಮಾಡುವುದಿಲ್ಲ.

ಪ್ರಜಾಪ್ರಭುತ್ವದ ಈ ಕೊಲೆಯ ಪ್ರಮುಖ ಅಪರಾಧಿಗಳು:

ಜ್ಞಾನೇಶ್ ಕುಮಾರ್, ಸುಖಬೀರ್ ಸಿಂಗ್ ಸಂಧು, ವಿವೇಕ್ ಜೋಶಿ. ಇವರು ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳು, ಆದರೆ ಅವರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರುದ್ಧ ದೊಡ್ಡ ವಿಶ್ವಾಸಘಾತುಕತನವನ್ನು ಎಸಗುತ್ತಿದ್ದಾರೆ.

ಮತದಾನದ ಹಕ್ಕನ್ನು ರಕ್ಷಿಸಲು ರಚಿಸಲಾದವರು ನಿಮ್ಮ ಭವಿಷ್ಯವನ್ನು ಕದಿಯುವಲ್ಲಿ ಪಾಲುದಾರರಾಗಿದ್ದಾರೆ ಎಂದಿದ್ದಾರೆ ‌

ವೋಟ್ ಚೋರಿಗೆ ಆರೋಪ ಹೊತ್ತು ನಿವೃತ್ತಿ ಜೀವನ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ

ರೇಗಾದಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ (Gyanesh Kumar) ಮತ್ತು ಇತರ ಇಬ್ಬರು ಅಧಿಕಾರಿಗಳನ್ನು ಬಹಿರಂಗವಾಗಿ ಗುರಿಯಾಗಿಸಿಕೊಂಡು ವಾಗ್ದಾಳಿ ಮಾಡಿದ್ದಾರೆ.

ವೇದಿಕೆಯಲ್ಲಿ ಪ್ರಿಯಾಂಕಾ ಗಾಂಧಿ, ಸಿಇಸಿ ಜ್ಞಾನೇಶ್ ಕುಮಾರ್ ಅವರಿಗೆ ತೀಕ್ಷ್ಯ ಎಚ್ಚರಿಕೆ ನೀಡಿದ್ದು, ವೋಟ್ ಚೋರಿಗೆ ಸಹಕರಿಸಿರುವ ಜ್ಞಾನೇಶ್ ಕುಮಾರ್, ನೀವು ನೆಮ್ಮದಿಯಿಂದ ನಿವೃತ್ತರಾಗಲು ಸಾಧ್ಯವಿಲ್ಲ.

ಇತಿಹಾಸದ ಪುಟಗಳಲ್ಲಿ ಜ್ಞಾನೇಶ್ ಕುಮಾರ್ ದಾಖಲಾಗಲಿದೆ. ಬಳಿಕ ಜನರನ್ನು ಉದ್ದೇಶಿಸಿ ಜ್ಞಾನೇಶ್ ಕುಮಾರ್ ಅವರ ಹೆಸರನ್ನು ನೀವು ಎಂದಿಗೂ ಮರೆಯಬಾರದು ಎಂದು ನಾನು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ’ ಎಂದ ಪ್ರಿಯಾಂಕಾ ಎಸ್‌ಎಸ್ ಸಂಧು ಹಾಗೂ ವಿವೇಕ್ ಜೋಶಿ ಹೆಸರುಗಳನ್ನು ಕೂಡ ಹೇಳಿದ್ದಾರೆ.

ಈ ವೇಳೆ ಚುನಾವಣೆ ಅಧಿಕಾರಿಗಳ ಹೆಸರು ಹೇಳಿದಾಗಿ ಸಭೆಯಲ್ಲಿದ್ದ ಜನರು “ಚೋರ್-ಚೋರ್” (ಕಳ್ಳ-ಕಳ್ಳ) ಎಂಬ ಘೋಷಣೆಗಳನ್ನು ಕೂಗಿದರು.

ರಾಜಕೀಯ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್.ಎಮ್. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="119997"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!