Make separate arrangements for Namaz at the airport; H.D. Kumaraswamy

ಏರ್ಪೋರ್ಟ್ ನಲ್ಲಿ ನಮಾಜ್ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಿ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸರಣಿ ಅತ್ಯಾಚಾರಿ ಹಾಗೂ ಉಗ್ರರಿಗೆ ಮೊಬೈಲ್ ಫೋನ್ ಸೌಲಭ್ಯ ಸೇರಿ ರಾಜಾತಿಥ್ಯ ಕಲ್ಪಿಸಿರುವ ಬಗ್ಗೆ ತೀವ್ರ ಸಿಡಿಮಿಡಿಗೊಂಡಿರುವ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು, ಕಾರಾಗೃಹದಲ್ಲಿ ಅಷ್ಟೇ ಭಯೋತ್ಪಾದಕರಿಲ್ಲ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯೇ ಇದ್ದಾರೆ ಎಂದು ಟೀಕಿಸಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸೋಮವಾರ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವರು; ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಗೆ ಹಾಗೂ ಶಿಕ್ಷೆಗೆ ಗುರಿಯಾಗಿರುವ ಕುಖ್ಯಾತ ಪಾತಕಿಗಳಿಗೆ ಜೈಲು ಸಿಬ್ಬಂದಿ ರಾಜಾತಿಥ್ಯ ನೀಡುತ್ತಿರುವುದು ನಾಚಿಕೆಗೇಡು ಎಂದರು.

ಭಯೋತ್ಪಾದಕರು ಕೇವಲ ಕಾರಾಗೃಹದಲ್ಲಿ ಮಾತ್ರವಷ್ಟೇ ಇಲ್ಲ, ಅವರಿಗಿಂತ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯು ಇದ್ದಾರೆ, ಅವರು ಯಾರು ಎನ್ನುವುದು ನನಗಿಂತ ಹೆಚ್ಚಾಗಿ ನಿಮಗೆ ಗೊತ್ತಿದೆ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಸಚಿವರು ಹೇಳಿದರು.

ರಾಜ್ಯದ ಜನ ಈ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ಕೊಡಲಾಗುತ್ತಿದೆ ಎನ್ನುವುದು ಹಳೆಯ ವಿಚಾರವಲ್ಲ. ಹಿಂದೆ ಇದೇ ವಿಷಯದ ಬಗ್ಗೆ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದರು. ಆಮೇಲೆ ಇನ್ನೊಂದು ಪ್ರಕರಣದಲ್ಲಿ ಸ್ವತಃ ನ್ಯಾಯಾಲಯಗಳೇ ಇಂಥ ಕೃತ್ಯಗಳಲ್ಲಿ ಭಾಗಿಯಾಗಿದ್ದ ಜೈಲು ಸಿಬ್ಬಂದಿಗೆ ಕಠಿಣ ಎಚ್ಚರಿಕೆ ನೀಡಿತ್ತು. ಅದಾದ ನಂತರ ಮತ್ತೆ ಅಂಥವೇ ಪ್ರಕರಣಗಳು ಜೈಲಿನಲ್ಲಿ ಮರುಕಳಿಸುತ್ತಿವೆ ಎಂದು ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದರು.

ಗುರುತರ ಅಪರಾಧ ಮಾಡಿದವರಿಗೆ ಎಲ್ಲಾ ರೀತಿಯ ಸೌಲಭ್ಯ ಕೊಟ್ಟಿರುವ ಬಗ್ಗೆ ಚರ್ಚೆ ನಡೆಯುತ್ತಿದೆ. ಇದು ಹೊಸದಾಗಿ ಶುರುವಾದುದಲ್ಲ. ವಿಧಾನಸೌಧದಲ್ಲಿ ಉಗ್ರರನ್ನು ಇಟ್ಟುಕೊಂಡು ಪರಪ್ಪನ ಅಗ್ರಹಾರ ಜೈಲಿನ ಉಗ್ರರ ಬಗ್ಗೆ ಏನು ಚರ್ಚೆ ಮಾಡೋದು? ನೀವು ಯಾರ ಬಗ್ಗೆ ತನಿಖೆ ಮಾಡ್ತೀರಿ? ಇವೆಲ್ಲಾ ಕಾಲಹರಣ, ಸಮಯ ವ್ಯರ್ಥ ಮಾಡುವುದಕ್ಕೆ ನಡೆಯುತ್ತಿರುವ ತನಿಖೆಯಷ್ಟೇ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಸಿಎಂ, ಗೃಹ ಸಚಿವರನ್ನು ಪ್ರಶ್ನಿಸಿ

ಜೈಲು ನಿರ್ವಹಣೆಯಲ್ಲಿ ಪದೆ ಪದೇ ನಡೆಯುತ್ತಿರುವ ವೈಫಲ್ಯಗಳ ಬಗ್ಗೆ ಮಾಧ್ಯಮಗಳು ಹಾಗೂ ಜನರು ಮುಖ್ಯಮಂತ್ರಿ, ಗೃಹ ಸಚಿವರನ್ನು ಕೇಳಬೇಕು, ಪ್ರಶ್ನಿಸಬೇಕು. ಪ್ರತಿ ದಿನವೂ ಈ ಸರ್ಕಾರದ ವೈಪಲ್ಯ ಎದ್ದು ಕಾಣಿಸುತ್ತಿದೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ಸಿಎಂ ಹಾಕುತ್ತಾರೆ. ಆದರೆ ಇವರಿಗೇನಿದೆ‍ ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕಿದೆ ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಸಿಎಂ ಅವರಿಗೆ ದೀರ್ಘ ಅನುಭವ ಇದೆ. ಇಷ್ಟು ಅನುಭವ ಇಟ್ಟುಕೊಂಡು ಇಷ್ಟೆಲ್ಲಾ ಲಘುವಾಗಿ ತೆಗೆದುಕೊಳ್ಳುವುದು ಎಷ್ಟು ಸರಿ? ಮುಖ್ಯಮಂತ್ರಿಗಳಿಗೆ ಗುಪ್ತದಳ ಎನ್ನುವುದು ಇರುವುದಿಲ್ಲವೇ? ಇವರೇ ಕೆಟ್ಟ ಶಕ್ತಿಗಳಿಗೆ ಬೆಂಬಲ ಕೊಡುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಗೃಹ ಸಚಿವರ ರಾಜಿನಾಮೆಗೆ ಒತ್ತಾಯಿಸ್ತೀರಾ? ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು; ಒತ್ತಾಯ ಮಾಡಿದಾಕ್ಷಣ ರಾಜಿನಾಮೆ ಕೊಡುವ ಕಾಲವೇ ಇದು? ಅಷ್ಟೊಂದು ನೈತಿಕತೆ ಯಾವ ರಾಜಕಾರಣಿಗಿದೆ? ಎಂದು ಉತ್ತರಿಸಿದರು.

ಏರ್ಪೋರ್ಟ್ ನಲ್ಲಿ ನಮಾಜ್ ಮಾಡಲು ಪ್ರತ್ಯೇಕ ವ್ಯವಸ್ಥೆ ಮಾಡಿ

ಏರ್ಪೋರ್ಟ್ ನಲ್ಲಿ ನಮಾಜ್ ಮಾಡಿರುವ ವಿಚಾರದ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ಬೆಂಗಳೂರು ನಗರ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದಿದೆ. ಅನೇಕ ಜನ ಇಲ್ಲಿಗೆ ಬರುತ್ತಾರೆ. ಅನೇಕ ಬೇರೆ ಬೇರೆ ಧರ್ಮದವರು ಪ್ರಾರ್ಥನೆ ಮಾಡುವುದಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿರುತ್ತದೆ.

ನಾವು ಸಣ್ಣತನ ತೋರುವ ಅಗತ್ಯ ಇಲ್ಲ. ಅವರಿಗೊಂದು ಪ್ರತ್ಯೇಕ ಕೊಠಡಿ ಮಾಡಿಕೊಡುವ ಮಾಡಿಕೊಡಬೇಕು. ಆಗ ಬಹಿರಂಗವಾಗಿ ಇಂಥ ದೃಶ್ಯಗಳನ್ನು ನೋಡುವುದು ತಪ್ಪುತ್ತದೆ ಎಂದು ಅಭಿಪ್ರಾಯಪಟ್ಟರು.

ರಾಜಕೀಯ

ದೊಡ್ಡಬಳ್ಳಾಪುರ: ಗುಂಡಸಂದ್ರ MPCS ಜೆಡಿಎಸ್ ತೆಕ್ಕೆಗೆ.. ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ಗುಂಡಸಂದ್ರ MPCS ಜೆಡಿಎಸ್ ತೆಕ್ಕೆಗೆ.. ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಗುಂಡಸಂದ್ರ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಸಲಾಗಿದ್ದು, ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

[ccc_my_favorite_select_button post_id="120184"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!