ನಾಳೆಯಿಂದ ಕಾಮಗಾರಿ ಓಕೆ.. ಗುಂಡಿ ಮುಕ್ತ ದೊಡ್ಡಬಳ್ಳಾಪುರ ಯಾವಾಗ‌‌..?

The work is ok.. When will Doddballapura be pothole free..?

ಕೆ.ಎಂ.ಸಂತೋಷ್, ಆರೂಢಿ: ನಾಳೆಯಿಂದ (ನ.13) ದೊಡ್ಡಬಳ್ಳಾಪುರ (Doddaballapura) ನಗರದ ರಂಗಪ್ಪ ವೃತ್ತದಿಂದ ಡಾ. ರಾಜಕುಮಾರ್ ವೃತ್ತದವರೆಗೆ ಒಳಚರಂಡಿ ಕಾಮಗಾರಿ ನಡೆಸಲಾಗುತ್ತಿದೆ.

ಈ ಕುರಿತು ದೊಡ್ಡಬಳ್ಳಾಪುರ ನಗರಸಭೆಯಿಂದ ಜನರಿಗೆ ತಲುಪುತ್ತಿಲ್ಲ ಎಂಬ ದಿನ ಪತ್ರಿಕೆಗಳಿಗೆ ಮಾತ್ರ ಜಾಹೀರಾತು ನೀಡಿ, ಸಾವಿರಾರು ರೂ ಹಣ ಲಪಟಾಯಿಸುತ್ತಿದೆ ಎಂಬ ಆರೋಪವೂ ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿದೆ.

ಈ ಕಾಮಗಾರಿ ಕುರಿತಂತೆ ಹರಿತಲೇಖನಿ ಓದುಗರ ಮಾಹಿತಿ ಮೇರೆಗೆ ಗಮನಿಸಿದಾಗ, ನಾಳೆಯಿಂದ (ನ.13) ಎನ್.ಜಿ.ಟಿ ಪರಿಸರ ಪರಿಹಾರ ನಿಧಿಯಡಿ ಭಜನೆಹಟ್ಟಿರಂಗಪ್ಪ (ರಂಗಪ್ಪ ಸರ್ಕಲ್) ವೃತ್ತದಿಂದ ಡಿ-ಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೂ ಒಳಚರಂಡಿ ಪೈಪ್ ಲೈನ್ ಕಾಮಗಾರಿಯ ಜಾಹೀರಾತಿನ ಪ್ರತಿಯನ್ನು ಪೊಲೀಸ್ ಇಲಾಖೆ ಪೊಸ್ಟ್ ಮಾಡಿದೆ.

ಈ ಕಾಮಗಾರಿ ಹಿನ್ನೆಲೆ ದೊಡ್ಡಬಳ್ಳಾಪುರ ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಮತ್ತು ಬೆಂಗಳೂರಿನಿಂದ ದೊಡ್ಡಬಳ್ಳಾಪುರ ನಗರಕ್ಕೆ ಬಂದು ಹೋಗುವ ಬಸ್, ಲಾರಿ, ಕಾರು ಮತ್ತು ಆಟೋಗಳು (ದ್ವಿಚಕ್ರ ವಾಹನ ಹೊರತುಪಡಿಸಿ) ಡಿ ಕ್ರಾಸ್ ಮುಖಾಂತರ ಸಂಚರಿಸಬೇಕಿದೆ.

ನೆಲಮಂಗಲ ಕಡೆ ತೆರಳುವ ವಾಹನಗಳು ಡಿ ಕ್ರಾಸ್, ಐಬಿ ಸರ್ಕಲ್, ತಾಲೂಕು ಕಚೇರಿ, ಕೊಂಗಾಡಿಯಪ್ಪ ಕಾಲೇಜು ರಸ್ತೆ ಮುಖಾಂತರ ಸಂಚರಿಸುವುದು.

ಯಾವುದೇ ರೀತಿಯಾದ ಸಂಚಾರಕ್ಕೆ ಅಡೆತಡೆಯಾಗದೆ ಕಾರ್ಯಚರಣೆ ಮಾಡುವಂತೆ ಈ ಮೂಲಕ ವಿನಂತಿಸಲಾಗಿದೆ ಎಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಮಾಹಿತಿ ನೀಡಿದೆ.

ದೊಡ್ಡಬಳ್ಳಾಪುರದ ಚಿಂತಕನ ಪ್ರಶ್ನೆ

ಈ ಕುರಿತಂತೆ ದೊಡ್ಡಬಳ್ಳಾಪುರದ ಚಿಂತಕ, ದೊಡ್ಡಬಳ್ಳಾಪುರದ ಸಾರಿಗೆ ಅವ್ಯವಸ್ಥೆ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೂ ದೂರು ನೀಡಿ, ದೊಡ್ಡಬಳ್ಳಾಪುರಕ್ಕೆ ಅಶ್ವಮೇಧ ಬಸ್‌ಗಳನ್ನು ನೀಡುವಂತೆ ಪಟ್ಟುಹಿಡಿದು, ಸಾಧಿಸಿದ ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ನಾಗ್ ಅವರು ಈ ಕಾಮಗಾರಿಗೆ ಬೆಂಬಲ ನೀಡಿದ್ದರೂ, ರಸ್ತೆ ಗುಂಡಿಗಳ ಕುರಿತು ಪ್ರಶ್ನೆ ಮಾಡಿದ್ದಾರೆ.

ಈ ಕುರಿತಂತೆ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಖಾತೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ರಸ್ತೆ ಅವ್ಯವಸ್ಥೆ, ಗುಂಡಿಗಳ ಸಮಸ್ಯೆ ಕುರಿತು ಪರೋಕ್ಷವಾಗಿ ಪ್ರಶ್ನೆ ಮಾಡಿದ್ದಾರೆ.

ಆರೋಪ

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ, ಗ್ಯಾರಂಟಿ ಯೋಜನೆಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿಲ್ಲ ಎಂಬುದು ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಆರೋಪ.

ಇದರ ನಡುವೆಯೂ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಅವರ ಅವಧಿಯಲ್ಲಿ ಕೆಲ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ.

ಶಾಸಕರ ಭಾವಚಿತ್ರಕ್ಕೆ ಗೌರವ ನೀಡಿ

ವಿಪರ್ಯಾಸವೆಂದರೆ ಕಾಮಗಾರಿ ಗುತ್ತಿಗೆ ಪಡೆದವರು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಅವರ ಫೋಟೋವನ್ನ ರಸ್ತೆ ಕಾಮಗಾರಿ ನಡೆಯುತ್ತಿದೆ ಎಂದು ಫ್ಲೆಕ್ಸ್ ಮುದ್ರಿಸಿ, ಸಾರ್ವಜನಿಕರಿಗೆ ಮುಜುಗರ ತರುವಂತೆ ಬೇಕಾಬಿಟ್ಟಿಯಾಗಿ ಬಳಸುತ್ತಿದ್ದಾರೆ.

ಈ ರೀತಿ ದೊಡ್ಡಬಳ್ಳಾಪುರ ಶಾಸಕರ ಫೋಟೋ ಬಳಸಿ ಓಲೈಕೆಗೆ ಸೀಮಿತವಾಗದೇ, ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ರಸ್ತೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಗುಂಡಿ ಮುಕ್ತ ದೊಡ್ಡಬಳ್ಳಾಪುರ ಮಾಡಬೇಕೆಂಬ ಆಗ್ರಹ ಕೇಳಿಬರುತ್ತಿದೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]