If it is written on the forehead, D.K. Shivakumar will become CM, otherwise not: D.K. Suresh

ಪಕ್ಷ ಹೇಳಿದಷ್ಟು ದಿನ ಡಿ.ಕೆ. ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನದಲ್ಲಿ ಇರುತ್ತಾರೆ; ಡಿ.ಕೆ. ಸುರೇಶ್

ಬೆಂಗಳೂರು: ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, “ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಇದು ಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ. ಕಾದು ನೋಡೋಣ” ಎಂದರು.

ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂಬ ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆಯೇ ಹೊರತು ಬೇರೆಯವರಲ್ಲ” ಎಂದು ಪ್ರತಿಕ್ರಿಯಿಸಿದರು.

ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಗೆ ಹೋಗಿದ್ದು, ನೀವೂ ತೆರಳುತ್ತಿರುವ ಕಾರಣ ಎಂದು ಕೇಳಿದಾಗ, ನಾನು ಈಗಾಗಲೇ ದೆಹಲಿಗೆ ತೆರಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿವೆ. ನಾನು ದೆಹಲಿಗೆ ಹೋಗುವುದು ಹೊಸತಲ್ಲ. ಶಿವಕುಮಾರ್ ಅವರು ಅವರ ಕೆಲಸದ ಮೇಲೆ ಹೋಗಿದ್ದಾರೆ, ನನ್ನ ಪಾಡಿಗೆ ನಾನು ಹೋಗುತ್ತಿರುವೆ” ಎಂದು ತಿಳಿಸಿದರು.

ದೆಹಲಿಗೆ ಹೋದಾಗ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ದೆಹಲಿಗೆ ಹೋದಾಗ ಅವಕಾಶ ಸಿಕ್ಕರೆ ಪಕ್ಷದ ನಾಯಕರನ್ನು ಭೇಟಿ ಮಾಡುತ್ತೇನೆ” ಎಂದರು.

ಕಾಯುವ ಸಮಯ ಮುಗಿದಿದೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ಆ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ನೀವು ಹೇಳುತ್ತಿದ್ದು, ಏನಾಗುತ್ತದೆಯೋ ಕಾದು ನೋಡೋಣ” ಎಂದು ತಿಳಿಸಿದರು.

ನಿಮ್ಮ ಸಹೋದರ ಸಿಎಂ ಆಗಬೇಕು ಎಂಬ ಆಸೆ ನಿಮ್ಮದು ಎಂದು ಕೇಳಿದಾಗ, “ಈ ವಿಚಾರ ಸಾಕಷ್ಟು ಬಾರಿ ಹೇಳಿದ್ದೇನೆ. ಎಲ್ಲದಕ್ಕೂ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಸಿಎಂ, ಸಚಿವರು, ಶಾಸಕರು, ಶಿವಕುಮಾರ್ ಎಲ್ಲರಿಗೂ ಹೈಕಮಾಂಡ್ ತೀರ್ಮಾನವೇ ಮುಖ್ಯ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಕಾದು ನೋಡಬೇಕು” ಎಂದು ತಿಳಿಸಿದರು.

ಪವರ್ ಶೇರಿಂಗ್ ಹಾಗೂ ಸಂಪುಟ ಪುನಾರಚನೆ ಚರ್ಚೆ ಬಗ್ಗೆ ಕೇಳಿದಾಗ, “ಎಲ್ಲವನ್ನೂ ಕಾದು ನೋಡೋಣ” ಎಂದು ತಿಳಿಸಿದರು.

ಯಾರ ಕ್ಲೇಮ್ ಏನಿದೆಯೋ ಗೊತ್ತಿಲ್ಲ

ಶಿವಕುಮಾರ್ ಅವರ ಕ್ಲೇಮ್ ಮೇಲೆ ಎಲ್ಲವೂ ನಿಂತಿದೆಯಲ್ಲವೇ ಎಂದು ಕೇಳಿದಾಗ, “ಕಾದು ನೋಡೋಣ, ಇಲ್ಲಿ ಶಿವಕುಮಾರ್ ಒಬ್ಬರೇ ಕ್ಲೇಮ್ ಮಾಡುತ್ತಿಲ್ಲವಲ್ಲ. ಬಹಳಷ್ಟು ಜನರ ಕ್ಲೇಮ್ ಇದೆ. ಯಾರ ಕ್ಲೇಮ್ ಏನಿದೆಯೋ ಗೊತ್ತಿಲ್ಲವಲ್ಲ” ಎಂದರು.

ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ ಎಂಬ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹಿರಿಯ ಸಚಿವರು, ಅವರು ಹೇಳುತ್ತಾರೆ. ಸಚಿವ ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಹೈಕಮಾಂಡ್ ಅಪ್ಪಣೆಯೊಂದಿಗೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್ ಶಿವಕುಮಾರ್ ಅವರ ಬಳಿ ಚರ್ಚೆ ಮಾಡಿದರೆ, ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಅಗತ್ಯವಾದ ಸಲಹೆ ನೀಡುತ್ತಾರೆ. ಸಿಎಂ ಈಗಾಗಲೇ ಇದ್ದಾರೆ. ಸಿಎಂ ಇಲ್ಲದಿದ್ದಾಗ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಬಹುದು” ಎಂದು ತಿಳಿಸಿದರು.

ಪಕ್ಷ ಹೇಳಿದಷ್ಟು ದಿನ ಶಿವಕುಮಾರ್ ಅವರು ಅಧ್ಯಕ್ಷ ಸ್ಥಾನದಲ್ಲಿ ಇರುತ್ತಾರೆ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಪ್ರಸ್ತಾಪವನ್ನು ಹೈಕಮಾಂಡ್ ಮುಂದೆ ಇಟ್ಟಿರುವ ಬಗ್ಗೆ ಕೇಳಿದಾಗ, “ಹೈಕಮಾಂಡ್ ಯಾವ ತೀರ್ಮಾನ, ಸಲಹೆಯನ್ನು ಶಿವಕುಮಾರ್ ಅವರು ಕೇಳುತ್ತಾರೆ. ಶಿವಕುಮಾರ್ ಅವರು ಮಾತ್ರವಲ್ಲ, ಎಲ್ಲರೂ ಕೇಳುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ. ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯಬೇಕು ಎಂಬ ಆಸೆ ಶಿವಕುಮಾರ್ ಅವರಿಗಿಲ್ಲ. ಪಕ್ಷ ಮುಂದುವರಿಯಲು ಹೇಳಿದೆ, ಎಷ್ಟು ದಿನ ಅವಕಾಶ ನೀಡುತ್ತಾರೋ ಅಷ್ಟು ದಿನ ಪಕ್ಷದ ಕೆಲಸ ಮಾಡಿಕೊಂಡು ಇರುತ್ತಾರೆ” ಎಂದು ಹೇಳಿದರು.

ಸೋಲು ಗೆಲುವು ಸಹಜ

ಬಿಹಾರ ಚುನಾವಣೆ ಬಗ್ಗೆ ಕೇಳಿದಾಗ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗೆಲುವು ಸೋಲು ಇದ್ದೇ ಇರುತ್ತದೆ. ಬಿಹಾರದಲ್ಲಿ ಚುನಾವಣೆಗೂ ಮುನ್ನ ಎನ್ ಡಿಎ ಸರ್ಕಾರ ಕರ್ನಾಟಕ ಗ್ಯಾರಂಟಿ ಯೋಜನೆ ಮಾದರಿಯಲ್ಲೇ ಅನುಷ್ಠಾನ ಮಾಡಿತು. ಹೀಗಾಗಿ ಮಹಿಳಾ ಮತದಾರರು ಎನ್ ಡಿಎ ಪರ ಒಲವು ತೋರಿದ್ದಾರೆ.

10 ಸಾವಿರ ರೂ. ಒಟ್ಟಿಗೆ ಮಹಿಳೆಯರ ಖಾತೆಗೆ ಹಾಕಿದ ಪರಿಣಾಮ ಹಾಗೂ ಚುನಾವಣೆ ಮುನ್ನ 47 ಲಕ್ಷ ಮತಗಳನ್ನು ಮತಪಟ್ಟಿಯಿಂದ ಕಿತ್ತು ಹಾಕಿದ್ದು ಪ್ರಮುಖ ಕಾರಣವಾಗಿದೆ. ಜನ ತೀರ್ಪು ನೀಡಿದ್ದು, ಅದನ್ನು ಸ್ವಾಗತಿಸುತ್ತೇವೆ. ನಮ್ಮ ಪಕ್ಷಕ್ಕೆ ಸೋಲು, ಗೆಲುವು ಹೊಸತಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಾ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ತಿಳಿಸಿದರು.

ರಾಜಕೀಯ

ದ್ವೇಷಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ: ಆರ್‌.ಅಶೋಕ

ದ್ವೇಷಭಾಷಣ ಪ್ರತಿಬಂಧಕ ಮಸೂದೆ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ: ಆರ್‌.ಅಶೋಕ

ದ್ವೇಷಭಾಷಣ ಪ್ರತಿಬಂಧಕ ಮಸೂದೆ ವಾಕ್‌ ಸ್ವಾತಂತ್ರ್ಯವನ್ನು ಕಸಿಯಲಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="118314"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!