Sadhguru who brought transformation; Sri Lankan cricketer Aravinda de Silva

ಪರಿವರ್ತನೆ ತಂದ ಸದ್ಗುರು; ಶ್ರೀಲಂಕಾ ಕ್ರಿಕೆಟಿಗ ಅರವಿಂದ ಡಿ ಸಿಲ್ವ

ಚಿಕ್ಕಬಳ್ಳಾಪುರ: ದಿನೇ ದಿನೇ ಬೆಳೆಯುತ್ತಿರುವ ಒಂದು ಜಗತ್ತು ಒಂದು ಕುಟುಂಬ ಮಿಷನ್ ಅದ್ಭುತ ಸಂಸ್ಥೆಯಾಗಿದ್ದು, ಇದರ ಭಾಗವಾಗಲು ನನಗೆ ತುಂಬಾ ಸಂತೋಷವಾಗಿದೆ. ಮಾನವೀಯತೆಯ ವಿಚಾರದಲ್ಲಿ ನನ್ನಲ್ಲಿ ದೊಡ್ಡ ಪರಿವರ್ತನೆಯನ್ನು ತಂದಿದೆ ಎಂದು ಶ್ರೀಲಂಕಾದ ಮಾಜಿ ಕ್ರಿಕೆಟ್ ಆಟಗಾರ ಅರವಿಂದ ಡಿ ಸಿಲ್ವ (Aravinda de Silva) ತಿಳಿಸಿದರು.

ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ ”ಒಂದು ಜಗತ್ತು ಒಂದು ಕುಟುಂಬ ವಿಶ್ವ ಸಾಂಸ್ಕೃತಿಕ ಉತ್ಸವ”ದ 91ನೇ ದಿನದಂದು ಪಾಲ್ಗೊಂಡು ಸದ್ಗುರು ಶ್ರೀ ಮಧುಸೂಧನ ಸಾಯಿ ಅವರು ಪ್ರೇರಕ ಶಕ್ತಿಯಾಗಿದ್ದಾರೆ. ಈ ಸಂಸ್ಥೆಯ ಭಾಗವಾದ ಬಳಿಕ ನನ್ನಲ್ಲಿ ದೊಡ್ಡ ಬದಲಾವಣೆಯನ್ನು ಕಂಡುಕೊಂಡಿದ್ದೇನೆ ಎಂದು ವಿವರಿಸಿದರು.

ಬೌದ್ಧ ಗುರು ಬಟ್ಟರಮುಲ್ಲೆ ಅಮದಾಸನ ಥಿರೋ ಮಾತನಾಡಿ, ನಮ್ಮೆಲ್ಲರ ಹೃದಯಗಳು ಒಂದು ಲಯದಲ್ಲಿ ಇರುವುದರಿಂದ ನಾವೆಲ್ಲರೂ ಒಟ್ಟಿಗೆ ಸೇರಿದ್ದೇವೆ. ನೀವು ಕಪ್ಪು ಅಥವಾ ಬಿಳಿ,ಪುರುಷ ಅಥವಾ ಮಹಿಳೆ, ಬಡವ ಅಥವಾ ಶ್ರೀಮಂತ ಎಂಬುದು ಮುಖ್ಯವಲ್ಲ. ಆದರೆ ನಾವೆಲ್ಲರೂ ಇಲ್ಲಿ ಬಂದಿರುವುದಕ್ಕೆ ಒಂದು ಉದ್ದೇಶವಿದೆ. ಅದೇ ಒಂದು ಜಗತ್ತು ಒಂದು ಕುಟುಂಬ. ಇದೊಂದು ಸುಂದರವಾದ ಸ್ಫೂರ್ತಿ ನೀಡುವ ಮಿಷನ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾಧಕರಿಗೆ ಪುರಸ್ಕಾರ, ಸನ್ಮಾನ

ಗ್ರಾನುಲೆಸ್ ಇಂಡಿಯಾ ಲಿಮಿಟೆಡ್ ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ಕೃಷ್ಣಪ್ರಸಾದ್ ಚಿಗುರುಪಾಟಿ ಮತ್ತು ಮಹೀಂದ್ರಾ ಫೈನಾನ್ಸ್ ನ ಮಾಜಿ ಉಪಾಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾದ ರಮೇಶ್ ಜಿ ಅಯ್ಯರ್ ಅವರಿಗೆ ”ಒಂದು ಜಗತ್ತು ಒಂದು ಕುಟುಂಬ ಜಾಗತಿಕ ನಾಯಕತ್ವ ಪುರಸ್ಕಾರ” ನೀಡಿ ಗೌರವಿಸಲಾಯಿತು.

ಈಚ್ ಒನ್ ಎಜುಕೇಟ್ ಒನ್ ಸ್ಕಾಲರ್ ಶಿಪ್ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತಿರುವ ”ವಿಲೋ ಮೆಟರ್ ಅಂಡ್ ಪ್ಲಾಟ್ ಪಂಪ್ಸ್ ಪ್ರೈವೇಟ್ ಲಿಮಿಟೆಡ್” ಗೆ ”ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ” ನೀಡಿ ಗೌರವಿಸಲಾಯಿತು. ಕಂಪನಿಯ ಹಿರಿಯ ವ್ಯವಸ್ಥಾಪಕರಾದ ಬಿ ಸೆಂಥಿಲ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು.

ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಬೆಂಬಲ ನೀಡುತ್ತಿರುವ ”ಲಕ್ಷಕ ಟೆಕ್ಸ್ ಎಲ್ಎಲ್ಪಿ” ಕಂಪನಿಗೆ ”ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ” ನೀಡಿ ಗೌರವಿಸಲಾಯಿತು. ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಎಂಎನ್ ಪದ್ಮನಾಭನ್ ಪ್ರಶಸ್ತಿ ಸ್ವೀಕರಿಸಿದರು.

ಅನ್ನಪೂರ್ಣ ಟ್ರಸ್ಟ್ ಗೆ ಬೆಂಬಲ ನೀಡುತ್ತಿರುವ ನಾಟ್ ಸಲೂಷನ್ಸ್ ಪ್ರೈವೇಟ್ ಲಿಮಿಟೆಡ್ ಗೆ ”ಸಿಎಸ್ಆರ್ ಸರ್ಕಲ್ ಆಫ್ ಹಾನರ್ ಪುರಸ್ಕಾರ” ನೀಡಿ ಗೌರವಿಸಲಾಯಿತು. ಕಂಪನಿಯ ಸಂಸ್ಥಾಪಕರು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಮಂತ್ ಕುಮಾರ್ ಕೊನೂರು ಅವರು ಪ್ರಶಸ್ತಿ ಸ್ವೀಕರಿಸಿದರು.

ಶ್ರೀಲಂಕಾದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ಡಾ ಕ್ರಿಸ್ಟೋಫರ್ ಸ್ಟಬ್ಸ್ ಮತ್ತು ರಂಜಿ ಸ್ಟಬ್ಸ್ ಅವರಿಗೆ ಒಂದು ಜಗತ್ತು ಒಂದು ಕುಟುಂಬ ಮಾನವೀಯ ಪುರಸ್ಕಾರ ನೀಡಿ ಗೌರವಿಸಲಾಯಿತು. ಶ್ರೀಲಂಕಾದಲ್ಲಿ ಕಾರ್ಪೊರೇಟ್ ಆಡಳಿತಕ್ಕೆ ಉತ್ತಮ ಕೊಡುಗೆ ನೀಡುತ್ತಿರುವ ಕುಶೀಲ್ ಗುಣಶೇಖರ ಅವರಿಗೆ ಒಂದು ಜಗತ್ತು ಒಂದು ಕುಟುಂಬ ಮಾನವೀಯ ಪುರಸ್ಕಾರ ನೀಡಿ ಗೌರವಿಸಲಾಯಿತು.

ಶ್ರೀಲಂಕಾದ ಪ್ರತಿನಿಧಿ ಡಾ ಮಿನಾಲಿ ಉತ್ಪಾಲ ಡಿಸ್ಸಾನಾಯಕೆ ಅವರು ತಮ್ಮ ದೇಶದ ಕಲೆ, ಸಂಸ್ಕೃತಿ, ಸಂಗೀತ, ಭಾಷೆ, ಪ್ರಸಿದ್ಧ ತಾಣಗಳು, ಖಾದ್ಯಗಳು, ಸಾಂಪ್ರದಾಯಿಕ ಉಡುಪು, ಅಧಾತ್ಮ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದರು.

ಮತ್ತೊಬ್ಬ ಪ್ರತಿನಿಧಿ ಮಹೇಶ್ವರಶರ್ಮಾ ಪ್ರತೀಪನ್ ಮಾತನಾಡಿ, ತಮ್ಮ ಜೀವನದಲ್ಲಿನ ಆಧ್ಯಾತ್ಮಿಕ ಪರಿವರ್ತನೆಯ ಅನುಭವ ಹಂಚಿಕೊಂಡರು.

ಈ ವೇಳೆ ಸದ್ಗುರು ಶ್ರೀ ಮಧುಸೂಧನ ಸಾಯಿ ಆರ್ಶೀವಚನ ನೀಡಿದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!