Dharmasthala case: Who is BJP on? - Cmsiddaramaiah

ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ.

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು.

2028 ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ

ಮಾಜಿ ಸಂಸದ ಡಿ.ಕೆ.ಸುರೇಶ್ (D.K. Suresh) ಅವರು ಡಿ.ಕೆ.ಶಿವಕುಮಾರ್ (D.K. Shivakumar) ಅವರು ಸಿಎಂ ಆಗುವ ಬಗ್ಗೆ ಮಾಡಿದ ಹೇಳಿಕೆಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆದು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ.

ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರು ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಪುನ: ಕಾಂಗ್ರೆಸ್ ಪಕ್ಷವೇ ಆಯ್ಕೆಯಾಗಿ ಬರಲಿದೆ ಎಂದು ತಿಳಿಸಿದರು.

ಸಂಪುಟ ಪುನರ್ರಚನೆ: ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ

ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಕೆ ಬಗ್ಗೆ ನಡೆಯುತ್ತಿರುವ ಚರ್ಚೆಗೆ ಉತ್ತರಿಸಿ, ಇದು ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನರ್ರಚನೆ ಮಾಡಬಹುದು ಎಂದು ತಿಳಿಸಿದ ನಂತರವಷ್ಟೇ, ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು.

ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನರ್ರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದರು.

ಜನರು ಅಪೇಕ್ಷಿಸುವವರೆಗೆ ಬಜೆಟ್ ಮಂಡನೆ

2028 ರಲ್ಲಿಯೂ ಸಿದ್ದರಾಮಯ್ಯನವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಾಗುವುದೇ ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಭವಿಷ್ಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಜನರು ಎಲ್ಲಿವರೆಗೆ ಅಪೇಕ್ಷಿಸುವರೋ, ಅಲ್ಲಿಯವೆಗೆ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ತಿಳಿಸಿದರು.

ಬೆಂಗಳೂರು ಬ್ಯಾಂಕ್ ದರೋಡೆ: ಅಪರಾಧಿಗಳ ಬಂಧನಕ್ಕೆ ಕ್ರಮ

ಬೆಂಗಳೂರಿನಲ್ಲಿ ನಡೆದ ಬ್ಯಾಂಕ್ ದರೋಡೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಕಳುವಿನ ಬಗ್ಗೆ ಸುಳಿವು ಸಿಕ್ಕಿದ್ದು, ಘಟನೆಗೆ ಬಳಸಿದ ಕಾರು ಪೊಲೀಸರಿಗೆ ದೊರಕಿದೆ. ಬ್ಯಾಂಕ್ ದರೋಡೆಯ ಅಪರಾಧಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದರು.

ಪ್ರಧಾನಿ ಮೋದಿ ಭೇಟಿ

ಪ್ರಧಾನಿ ಮೋದಿ ಅವರೊಂದಿಗಿನ ಭೇಟಿಯ ಬಗ್ಗೆ ವಿವರಗಳನ್ನು ಕೇಳಲಾಗಿ, ರಾಜ್ಯದಲ್ಲಿ ಅಧಿಕ ಮಳೆಯುಂಟಾಗಿದ್ದು, ಅದರಿಂದ ಹಾನಿಗೆ ಪರಿಹಾರ ಕೇಳಲಾಗಿದೆ. ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ರೈತರು , ಕಾರ್ಖಾನೆ ಮಾಲಿಕರೊಂದಿಗೆ ನಡೆಸಿದ ಚರ್ಚೆಗಳ ಬಗ್ಗೆ ವಿವರಿಸಲಾಯಿತು. 11.25 ಇಳುವರಿಯಿರುವ ಕಬ್ಬು ಬೆಳೆಯ ಒಂದು ಟನ್ ಗೆ ( ಕಟಾವು ಮತ್ತು ಸಾಗಣೆ ವೆಚ್ಚ ಹೊರತುಪಡಿಸಿ) 3,300 ರೂ. ನೀಡುವ ತೀರ್ಮಾನಕ್ಕೆ ರೈತರು ಹಾಗೂ ಕಾರ್ಖಾನೆಯವರು ಸಮ್ಮತಿಸಿದ್ದಾರೆ ಎಂದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಎನ್.ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="116459"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!