Loan from Prime Minister Narendra Modi for development: R. Ashoka

ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಾಲ: ಆರ್‌.ಅಶೋಕ

ಬೆಂಗಳೂರು: ಎರಡೂವರೆ ವರ್ಷದಲ್ಲಿ ತೆರಿಗೆಗಳನ್ನು ಏರಿಸಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ. ಈ ಆಡಳಿತದ ಅವಧಿ ಕರಾಳ ವರ್ಷಗಳಾಗಿವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಹೋಳಾಗಿ ಸಿಎಂ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್‌ ಸಿಎಂ ಕುರ್ಚಿಗಾಗಿ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜಿಎಸ್‌ಟಿಯನ್ನು ಇಳಿಸಿದ್ದರೆ, ಈ ಎರಡೂವರೆ ವರ್ಷದಲ್ಲಿ ಕಾಂಗ್ರೆಸ್‌ ಸರ್ಕಾರ ಎಲ್ಲ ತೆರಿಗೆಗಳನ್ನು ಏರಿಕೆ ಮಾಡಿದೆ. ಇದೇ ಇವರ ಸಾಧನೆ. ಬಜೆಟ್‌ನಲ್ಲಿ ಚಾಂಪಿಯನ್‌ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಸಾಲ ಮಾಡುವುದರಲ್ಲಿ, ಭ್ರಷ್ಟಾಚಾರದಲ್ಲಿ, ರೈತರನ್ನು ಕೊಲ್ಲುವಲ್ಲಿ, ಜಾತಿಗಳ ಮಧ್ಯೆ ಬೆಂಕಿ ಹಚ್ಚುವಲ್ಲಿ, ಹೈಕಮಾಂಡ್‌ಗೆ ಹಣ ಕಳುಹಿಸುವಲ್ಲಿ ಚಾಂಪಿಯನ್‌ ಆಗಿದ್ದಾರೆ ಎಂದರು.

ಕ್ರಾಂತಿ ಇಲ್ಲ ಎಂದು ಹೇಳಿದ್ದರೂ ಎಲ್ಲರೂ ಹೈಕಮಾಂಡ್‌ಗೆ ಬಳಿಗೆ ಹೋಗಿದ್ದಾರೆ. ಸಿಎಂ ಸ್ಥಾನಕ್ಕೆ ಒಪ್ಪಂದ ನಡೆದಿದೆಯೇ ಇಲ್ಲವೇ ಎಂಬುದನ್ನು ಜನರಿಗೆ ಸರಿಯಾಗಿ ತಿಳಿಸಬೇಕು.

ಇಂತಹ ಕಚ್ಚಾಟದಿಂದಲೇ ಗೂಗಲ್‌ ಕಂಪನಿ ಪಕ್ಕದ ರಾಜ್ಯಕ್ಕೆ ಹೋಗಿದೆ. ಬೆಂಗಳೂರು ಕಸ, ರಸ್ತೆಗುಂಡಿಯ ಸಮಸ್ಯೆಯಿಂದಾಗಿ ಉದ್ಯಮಿಗಳು ಈ ಕಡೆಗೆ ಬರುತ್ತಿಲ್ಲ. ಇಂತಹ ನಗರವನ್ನೇ ಬ್ರ್ಯಾಂಡ್‌ ಮಾಡಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಕಸ ಗುಡಿಸುವ ಯಂತ್ರಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಯಂತ್ರಗಳನ್ನು ಖರೀದಿ ಮಾಡಿದರೆ 308 ಕೋಟಿ ರೂ. ವೆಚ್ಚವಾಗುತ್ತದೆ. ಆದರೆ ಈ ಸರ್ಕಾರ ಬಾಡಿಗೆಗಾಗಿ 610 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ 72 ಲಕ್ಷ ರೂ. ಗೆ ಒಂದು ವಾಹನ ಖರೀದಿ ಮಾಡಿದರೆ, ಈ ಸರ್ಕಾರ ಎರಡೂವರೆ ಕೋಟಿ ರೂ.ಖರ್ಚು ಮಾಡುತ್ತಿದೆ. ಅಂದರೆ ಇದು ದೊಡ್ಡ ಹಗರಣವಾಗಿದೆ.

ಒಂದು ಗಂಟೆಗೆ 2 ಕಿ.ಮೀ. ಸ್ವಚ್ಛ ಮಾಡಬಹುದು. ಆದರೆ ಒಂದು ಗಂಟೆಯಲ್ಲಿ 40 ಕಿ.ಮೀ. ಕಸ ಗುಡಿಸಿದ್ದಾರೆ ಎಂದು ಬಿಲ್‌ ಮಾಡಲಾಗುತ್ತಿದೆ. ಈ ಮೂಲಕ ಹಣ ಲೂಟಿ ಮಾಡಲಾಗುತ್ತಿದೆ. ನಗರದಲ್ಲಿರುವ ಟ್ರಾಫಿಕ್‌ ನಡುವೆ ಇಷ್ಟು ಕಸ ಗುಡಿಸಲು ಸಾಧ್ಯವೇ ಇಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಗಾಗಿ ಸಾಲ ಮಾಡಿದರೆ, ಸಿಎಂ ಸಿದ್ದರಾಮಯ್ಯ ಲೂಟಿಗಾಗಿ ಸಾಲ ಮಾಡಿದ್ದಾರೆ. ಬಿಜೆಪಿ ಮೇಲೆ ಕಮಿಶನ್‌ ಆರೋಪ ಮಾಡಿ ಈಗ ಇವರೇ ಕಮಿಶನ್‌ ಪಡೆಯುತ್ತಿದ್ದಾರೆ ಎಂದರು.

ರೈತರ ಪರ ಹೋರಾಟ

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್‌ 27, 28 ರಂದು ಹಾಗೂ ಡಿಸೆಂಬರ್‌ 1 ಮತ್ತು 2 ರಂದು ಜಿಲ್ಲಾ ಕೇಂದ್ರಗಳಲ್ಲಿ ರೈತ ಮೋರ್ಚಾ ವತಿಯಿಂದ ಹೋರಾಟ ಮಾಡಿ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಲಾಗುವುದು.

ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ, ತುಂಗಭದ್ರಾ ಜಲಾಶಯದಿಂದ ಎರಡನೇ ಬೆಳೆಗೆ ನೀರು ಹರಿಸದೇ ಇರುವುದರಿಂದ ಅದಕ್ಕೆ ಪರಿಹಾರ, ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮೊದಲಾದ ಒತ್ತಾಯಗಳನ್ನು ಮಾಡಲಾಗುವುದು. ಈ ಮೂಲಕ ರೈತರ ಹೋರಾಟಕ್ಕೆ ಬೆಂಬಲಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!