Grand Kannada Rajyotsava will be held in Kuntanahalli tomorrow

ಕುಂಟನಹಳ್ಳಿಯಲ್ಲಿ ನಾಳೆ ಅದ್ಧೂರಿ ಕನ್ನಡ ರಾಜ್ಯೋತ್ಸವ; 22 ದೇವರ ಉತ್ಸವದ ವಿಶೇಷ..!

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ); ನಾಳೆ (ನ.22) ದೊಡ್ಡಬಳ್ಳಾಪುರ ತಾಲ್ಲೂಕಿನ ಕುಂಟನಹಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ (Kannada Rajyotsava) ಆಚರಿಸಲಾಗುತ್ತಿದೆ.

ಆದರೆ ಕುಂಟನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವವನ್ನು ಬಹಳ ವರ್ಷಗಳಿಂದ ಧಾರ್ಮಿಕ ಭಾವನೆಗೆ ಜೋಡಿಸಿ ಗ್ರಾಮಸ್ಥರು ಆಚರಿಸುತ್ತಿರುವುದು ವ್ಯಾಪಕ ಗಮನ ಸೆಳೆದಿದೆ.

ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ ಎಂಬುದು ನಿಮಗೂ ತಿಳಿದಿದೆ.

ಮೈಸೂರು ರಾಜ್ಯವು (ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.

ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.

ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಅಲ್ಲವೆ.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕುಂಟನಹಳ್ಳಿ ಗ್ರಾಮದಲ್ಲಿ ಹಲವು ವರ್ಷಗಳಿಂದ ಕನ್ನಡ ರಾಜ್ಯೋತ್ಸವಕ್ಕೆ ಧಾರ್ಮಿಕ ಭಾವನೆ ಜೋಡಿಯಾಗಿದೆ.

ಹೌದು ನಾಳೆ ನವೆಂಬರ್ 22 ರಂದು ಕುಂಟನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ 22 ದೇವರುಗಳ ಉತ್ಸವ ಆಯೋಜಿಸಲಾಗಿದ್ದು, ಗ್ರಾಮದಲ್ಲಿ ಹಬ್ಬದ ಸಂಭ್ರಮ ನಿರ್ಮಾಣವಾಗಿದೆ.

ನಾಳೆ ಕುಂಟನಹಳ್ಳಿ ಆಂಜನೇಯ ಸ್ವಾಮಿ, ಮೈಲಾರಲಿಂಗೇಶ್ವರ ಸ್ವಾಮಿ ಮಾಚೋಹಳ್ಳಿ, ಬೊಮ್ಮನಹಳ್ಳಿ ಆಂಜನೇಯ ಸ್ವಾಮಿ, ಲಕ್ಷ್ಮೀ ಕರಗದಾಂಬ ಸೋಮಶೆಟ್ಟಿಹಳ್ಳಿ, ಪಟೇಲಮ್ಮ ದೇವಿ ಅದ್ದಿಗಾನಹಳ್ಳಿ, ಮುತ್ಯಾಲಮ್ಮ ದೇವಿ ದೊಡ್ಡಬಳ್ಳಾಪುರ, ಅದ್ದೆ ತಿಮ್ಮರಾಯ ಸ್ವಾಮಿ, ಲಕ್ಷ್ಮೀ ನರಸಿಂಹಸ್ವಾಮಿ‌ ಲಿಂಗಾಪುರ, ಮಹೇಶ್ವರಮ್ಮ ದೇವಿ ನೇರಳಘಟ್ಟ, ಬ್ಯಾಡರಹಳ್ಳಿ ಕೆಂಪಮ್ಮ ದೇವಿ, ಗೊರವನಹಳ್ಳಿ ಮಹಾಲಕ್ಷ್ಮಿ , ಬಿದಲೂರು ಭೈರವೇಶ್ವರ ಸ್ವಾಮಿ, ಹೊನ್ನಾಘಟ್ಟ ಶನಿಮಹಾತ್ಮ, ಕಾಡನೂರು ಚನ್ನಕೇಶವ ಸ್ವಾಮಿ, ಹೊನ್ನಾಘಟ್ಟ ಅಕ್ಕಯ್ಯಮ್ಮ, ದೊಡ್ಡಬಳ್ಳಾಪುರ ದೊಡ್ಡಮ್ಮ ದೇವಿ, ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಅಣಗಲಪುರ, ಭೈರವೇಶ್ವರ ಸ್ವಾಮಿ ಕೂಗೇನಹಳ್ಳಿ, ಎಸ್. ನಾಗೇನಹಳ್ಳಿ ಮುನೇಶ್ವರ ಸ್ವಾಮಿಯ ಉತ್ಸವ ನಡೆಯಲಿದೆ.

ಕನ್ನಡ ರಾಜ್ಯೋತ್ಸವದ ಜೊತೆ ದೇವರ ಉತ್ಸವ ಹಲವು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದ್ದು, ಇದೇ ಪ್ರಥಮ ಬಾರಿಗೆ 22 ದೇವರುಗಳ ಉತ್ಸವ ಗ್ರಾಮಸ್ಥರಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ ಎಂದು ಯುವ ಮುಖಂಡ ರಘು, ಮುರುಳಿ ಅವರು ಹರಿತಲೇಖನಿಗೆ ತಿಳಿಸಿದ್ದಾರೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!