I don't want power right now, I will work as an activist; Nikhil Kumaraswamy

ನನಗೆ ಈಗಲೇ ಅಧಿಕಾರ ಬೇಡ, ಕಾರ್ಯಕರ್ತನಾಗಿ ನಾನು ಕೆಲಸ ಮಾಡ್ತೀನಿ; ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ. ಸ್ವತಂತ್ರ ಸರ್ಕಾರ ತರಬೇಕು ಅನ್ನೋದು ದೇವೇಗೌಡರ (Deve Gowda) ಆಸೆ, ಅದಕ್ಕೆ ನಾನು ಕಾರ್ಯಕರ್ತನಾಗಿ ನಾನು ಕೆಲಸ ಮಾಡ್ತೀನಿ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ತಿಳಿಸಿದರು.

ಸಭೆಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದರ ನಿಖಿಲ್ ಕುಮಾರಸ್ವಾಮಿ ಅವರು: ಗ್ಯಾರಂಟಿ ಯೋಜನೆಗಳನ್ನ ಫಲಾನುಭವಿಗಳಿಗೆ ನೀಡ್ತಿವಿ ಎಂದು ಹೇಳಿದರು. ಆದರೆ ಜನ ಕಾಂಗ್ರೆಸ್ ಸರ್ಕಾರವನ್ನ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಜನರ ಭಾವನೆಗೆ ಸ್ಪಂದಿಸಿ‌ ಫ್ರೀಡಂ ಪಾರ್ಕ್ ನಲ್ಲಿ ಸಾಕಪ್ಪ ಸಾಕು ಹೋರಾಟ ಮಾಡಿದ್ವಿ. ಇನ್ನು ಸರ್ಕಾರದ ವಿರುದ್ಧ ಹೋರಾಟಗಳು ದೊಡ್ಡ ಮಟ್ಟದಲ್ಲಿ ಹೆಚ್ಚಾಗಿ ಮಾಡುತ್ತೇವೆ ಎಂದು ಹೇಳಿದರು.

ಅತಿವೃಷ್ಟಿ ಸಂದರ್ಭದಲ್ಲಿ ಯಾದಗಿರಿ , ಬೀದರ್ , ಕಲಬುರಗಿ ಜಿಲ್ಲೆಗೆ ಜೆಡಿಎಸ್ ನಿಯೋಗ ಭೇಟಿ ನೀಡಿ ರೈತರ ಸಮಸ್ಯೆಗಳನ್ನ ಆಲಿಸಿದ್ದೇವೆ. ರೈತರ ಬೆಂಬಲಕ್ಕೆ ಸ್ಪಂದಿಸಿ ಎಂದು ಸರ್ಕಾರಕ್ಕೆ ಒತ್ತಡ ಹಾಕಿದ್ವಿ. ಆದರೆ ಈ ಸರ್ಕಾರ ರೈತರ ನೆರವಿಗೆ ಬಂದಿಲ್ಲ. ಇದು ರೈತ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಇದೇ ನ. 25 ರಂದು ರೈತರ ಹೋರಾಟಕ್ಕೆ ಕೈ ಜೋಡಿಸುತ್ತೇವೆ. ಎರಡನೇ ಬೆಳೆಗೆ ನೀರು ಹರಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸುತೇವೆ. ತುಂಗಾಭದ್ರ ಡ್ಯಾಂ ವಿಚಾರ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ಸರ್ಕಾರದ ಮೇಲೆ ಒತ್ತಡ ಹಾಕ್ತೀವಿ.

ಜೆಡಿಎಸ್ ಅಧಿಕಾರ ಬಂದಾಗ ಕಾರ್ಯಕರ್ತರಿಗೆ ಅಧಿಕಾರ ಕೊಡೊಲ್ಲ ಎಂಬ ಆರೋಪ ವಿಚಾರಕ್ಕೆ ಮಾತನಾಡಿದ ಅವರು. ಕಾಂಗ್ರೆಸ್ ಅವಧಿಯಲ್ಲಿ ನಮಗೆ ಏನು ಮಾಡಲು ಆಗಿಲ್ಲ. ಎಲ್ಲದ್ದಕ್ಕೂ ನಾವು ಕಾಂಗ್ರೆಸ್ ಅವರನ್ನ ಕೇಳಬೇಕಿತ್ತು. ಹೀಗಾಗಿ ಕಾರ್ಯಕರ್ತರಿಗೆ ಅಧಿಕಾರ ಕೊಡಲು ಆಗಿಲ್ಲ.2028ಕ್ಕೆ ಹೆಚ್ಚು ಸ್ಥಾನ ಗೆಲ್ಲಬೇಕು ಅನ್ನೋದು ನಮ್ಮ ಗುರಿ. ನಾನು ಸಹ ಕಾರ್ಯಕರ್ತನಾಗಿ ಕೆಲಸ ಮಾಡ್ತೀನಿ ಎಂದು ಹೇಳಿದರು.

ಜೆಡಿಎಸ್ ಗೆ ಹಳೆ ‌ಮೈಸೂರು ಭಾಗದ ಪಕ್ಷ ಅಂತ ಹಣೆಪಟ್ಟಿ ಕಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ದಲ್ಲೂ ನಮ್ಮ ಪಕ್ಷ ಗಟ್ಟಿಯಾಗಿ ನೆಲೆಯೂರಿದೆ. ಜನರು ದೇವೇಗೌಡರ ಹಾಗೂ ಕುಮಾರಣ್ಣ ಅವರನ್ನ ಪ್ರತಿ ಮನೆಯಲ್ಲೂ ಪೂಜೆ ಮಾಡ್ತಾರೆ ಎಂದು ಹೇಳಿದರು.

ಕುಮಾರಸ್ವಾಮಿ ಸಮಾವೇಶಕ್ಕೆ ಜನ ಸೇರುತ್ತಾರೆ. ಆದರೆ ಮತ ಆಗಿ ಕನ್ವರ್ಟ್ ಆಗಲ್ಲ ಅನ್ನೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಇದನ್ನ ಸರಿ ಮಾಡಿಕೊಳ್ಳೋ ಕೆಲಸ ಮಾಡ್ತೀವಿ. ಟೆಕ್ನಾಲಜಿ ಬಳಕೆ ಮಾಡಿಕೊಂಡು ಮತ್ತಷ್ಟು ಸಂಘಟನೆ ಮಾಡುವ ನಿರ್ಧಾರ ಮಾಡಿದ್ದೇವೆ‌ ಇದಕ್ಕಾಗಿ ಮಿಸ್ ಕಾಲ್ ಅಭಿಯಾನ ಮಾಡಿದ್ದೀವಿ ಎಂದು ನಿಖಿಲ್ ಅವರು ಹೇಳಿದರು.

ಎರಡನೇ ಸುತ್ತಿನ ಪ್ರವಾಸ ಶೀಘ್ರವೇ ಪ್ರಾರಂಭ ಮಾಡ್ತೀವಿ. ಅಧಿವೇಶನದಲ್ಲಿ ಬಗ್ಗೆ ಯಾವ ವಿಷಯಗಳ ಚರ್ಚೆ ಮಾಡಬೇಕು ಅಂತ ಕುಮಾರಸ್ವಾಮಿ ಅವರ ಜೊತೆ ಸಭೆ ಮಾಡ್ತೀವಿ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ರಾಜಕೀಯ

ಅಪೆಕ್ಸ್ ಬ್ಯಾಂಕ್ ಚುನಾವಣೆ ಕಣಕ್ಕಿಳಿದ ಎಂಎಲ್ಸಿ ಎಸ್ ರವಿ

ಅಪೆಕ್ಸ್ ಬ್ಯಾಂಕ್ ಚುನಾವಣೆ ಕಣಕ್ಕಿಳಿದ ಎಂಎಲ್ಸಿ ಎಸ್ ರವಿ

ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ (Apex Bank elections) ಎಂಎಲ್ಸಿ ಎಸ್ ರವಿ ಮತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಅವರು ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನಲ್ಲಿ

[ccc_my_favorite_select_button post_id="118515"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!