Weavers' protest in Doddaballapur demanding power loom reservation act

ವಿದ್ಯುತ್ ಮಗ್ಗಗಳ ಮೀಸಲು ಕಾಯ್ದೆ ರೂಪಿಸಲು ಆಗ್ರಹಿಸಿ ದೊಡ್ಡಬಳ್ಳಾಪುರದಲ್ಲಿ ನೇಕಾರರ ಪ್ರತಿಭಟನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ನೇಕಾರರು ತಯಾರು ಮಾಡುವ ಬಟ್ಟೆಗಳನ್ನು ಸೂರತ್ ಹಾಗೂ ರೇಪಿಯರ್ ಮಗ್ಗಗಳಲ್ಲಿ ನೇಯ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ಪರಿಣಾಮ ದೊಡ್ಡಬಳ್ಳಾಪುರದ ನೇಕಾರಿಕೆ ಸಂಕಷ್ಟಕ್ಕೀಡಾಗಿದ್ದು, ಈ ದಿಸೆಯಲ್ಲಿ ವಿದ್ಯುತ್ ಮಗ್ಗಗಳ ಮೀಸಲು ಕಾಯ್ದೆ ರೂಪಿಸಬೇಕಿದೆ. ಹೊರ ರಾಜ್ಯಗಳಿಂದ ಬರುವ ಸೀರೆ ಮಾರಾಟ ತಡೆಯಬೇಕಿದ್ದು, ನೇಯ್ಗೆ ಉದ್ಯಮ ಭಿಕ್ಕಟ್ಟಿಗೆ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿ, ನೇಕಾರರ ಹಿತರಕ್ಷಣಾ ಸಮಿತಿ, ದೊಡ್ಡಬಳ್ಳಾಪುರ ಟೆಕ್ಸ್ಟೈಲ್ಸ್ ವೀವರ್ಸ್ ಅಸೋಸಿಯೇಶನ್, ನೇಕಾರರ ಹೋರಾಟ ಸಮಿತಿ, ವಿವಿಧ ನೇಕಾರ ಸಂಘಟನೆಗಳ ನೇತೃತ್ವದಲ್ಲಿ ನೇಕಾರರಿಂದ ಬೃಹತ್ ಪ್ರತಿಭಟನಾ (Weavers’ protest) ನಡೆಸಲಾಯಿತು.

ನಗರದ ಕರೇನಹಳ್ಳಿ ಬಯಲು ಬಸವಣ್ಣ ದೇವಸ್ಥಾನದ ಬಳಿಯಿಂದ ಮರವಣಿಗೆ ತಾಲ್ಲೂಕು ಕಛೇರಿ ಮುಂಭಾಗದವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿದ ನೂರಾರು ನೇಕಾರರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರೇಪಿಯರ್ ಮತ್ತು ಸೂರತ್ನಿಂದ ತರುವ ಏರ್ಜೆಟ್ ಸೀರೆಗಳನ್ನು ಇಲ್ಲಿಗೆ ತಂದು ಮಾರುವುದನ್ನು ಈ ಕೂಡಲೇ ನಿಲ್ಲಿಸಬೇಕು. ರೇಪಿಯರ್ ಮಗ್ಗಗಳಲ್ಲಿ ಇಲ್ಲಿನ ಸೀರೆಗಳನ್ನು ನೇಯದಂತೆ ಸರ್ಕಾರ ಕಾನೂನು ಜಾರಿಗೆ ತರಬೇಕಿದೆ ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ದೊಡ್ಡಬಳ್ಳಾಪುರದಲ್ಲಿ 25ಸಾವಿರ ಮಗ್ಗಗಳಿದ್ದು, ಗುಡಿ ಕೈಗಾರಿಕೆಯಾಗಿರುವ ನೇಕಾರಿಕೆಯನ್ನು, ವಿವಿಧ ಹಂತಗಳ ನೇಕಾರರು ಹಾಗೂ ಕುಟುಂಬ ಸೇರಿ ಒಂದು ಲಕ್ಷ ಮಂದಿ ಅವಲಂಬಿಸಿದ್ದಾರೆ. ಈ ಮದ್ಯೆ ನಮ್ಮ ನೇಕಾರಿಕೆಯಲ್ಲಿ ನಾವು ಉತ್ಪಾದನೆ ಮಾಡುವ ಸೀರೆಗಳನ್ನು ಸೂರತ್ ನಲ್ಲಿರುವ ಆಧುನಿಕ ತಂತ್ರಜ್ಞಾನದ ರೇಪಿಯರ್ ವಿರ್ಜೆಟ್ ಮಗ್ಗಗಳಲ್ಲಿ ಉತ್ಪಾದನೆ ಮಾಡುತ್ತಿದ್ದು, ದೊಡ್ಡಬಳ್ಳಾಪುರಕ್ಕೆ ತಂದು ನಾವು ಮಾರುತ್ತಿರುವ ಬೆಲೆಗಿಂತ ಅರ್ಧ ಬೆಲೆಗೆ ಮಾರಾಟ ಮಾಡಿ ದೊಡ್ಡಬಳ್ಳಾಪುರ ನೇಕಾರಿಕೆ ಉದ್ಯಮವನ್ನು ಹಾಳು ಮಾಡುತ್ತಿದ್ದು, ಸರ್ಕಾರ ಈ ಬಗ್ಗೆ ಕಾಯ್ದೆ ರೂಪಿಸಿ, ನೇಕಾರರ ಹಿತ ಕಾಪಾಡಬೇಕಿದೆ ಎಂದರು.

ಮುಕ್ತ ವ್ಯಾಪರ ಒಪ್ಪಂದ, ಜಾಗತೀಕರಣದ ಪ್ರಭಾವದಿಂದಾಗಿ, ನೇಕಾರರು ಮಾರಾಟ ಮಾಡುವ ಸೀರೆಗಳಿಗೆ ಮಾರುಕಟ್ಟೆ ಇಲ್ಲದಂತಾಗಿ ನೇಕಾರರು ಸಂಕಷ್ಟದಲ್ಲಿದ್ದಾರೆ. ಹಿಂದೆ ನೇಕಾರರ ಹೋರಾಟದ ಫಲವಾಗಿ, ಉಚಿತ ವಿದ್ಯುತ್ ಮೊದಲಾದ ಸೌಲಭ್ಯಗಳು ಸರ್ಕಾರದಿಂದ ದೊರೆತಿತ್ತು. ಈಗ ಸರ್ಕಾರ ಕಚ್ಚಾ ವಸ್ತುಗಳ ಬೆಲೆ ಕಡಿಮೆ ಮಾಡುವುದರೊಂದಿಗೆ, ನೇಕಾರರು ಉತ್ಪಾದಿಸಿದ ಬಟ್ಟೆಗಳನ್ನು ಖರೀದಿಸುವ ವ್ಯವಸ್ಥೆ ಮಾಡಬೇಕಿದೆ. ಈ ಕುರಿತು ಡಿ.1ರಂದು ಸಂವಾದ ಏರ್ಪಡಿಸಲಾಗಿದೆ ಎಂದರು.

ನೇಕಾರರು ಭಾವನಾತ್ಮಕವಾಗಿರದೇ ವಾಸ್ತವ ಸಂಗತಿಯನ್ನು ಅರ್ಥ ಮಾಡಿಕೊಳ್ಳಬೇಕಿದೆ. ಇದು ಸರ್ಕಾರದ ಕಾಯ್ದೆಗೆ ಸಂಬಂಧಿಸಿದ ವಿಚಾರವಾಗಿರುವುದರಿಂದ ನಿರಂತರ ಹೋರಾಟ ಹಾಗೂ ಒತ್ತಾಯದ ಮೂಲಕ ಬಗೆಹರಿಸಿಕೊಳ್ಳಬೇಕಿದೆ ಎಂದರು.

ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ನೇಯ್ಗೆ ಉದ್ಯಮದ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರ ಪರಿಹಾರ ಸೂಚಿಸಬೇಕಿದ್ದು, ಅಧಿಕಾರಿಗಳು ಹಾಗೂ ಸರ್ಕಾರ ಜವಾಬ್ದಾರಿ ವಹಿಸಿಕೊಳ್ಳಬೇಕಿದೆ ಎಂದರು.

ಸ್ಥಳಕ್ಕೆ ಆಗಮಿಸಿದ ಶಾಸಕ ಧೀರಜ್ ಮುನಿರಾಜು ಮಾತನಾಡಿ, ದೊಡ್ಡಬಳ್ಳಾಪುರದ ಸೀರೆಗಳನ್ನು ಮಿಲ್ಗಳಲ್ಲಿ ತಯಾರು ಮಾಡಲಾಗುತ್ತಿರುವುದು ನೇಕಾರರಿಗೆ ಸಂಕಷ್ಟವಾಗಿದೆ. ಇದಕ್ಕೆ ಗೃಹ ಕೈಗಾರಿಕೆಗಳಲ್ಲಿ ತಯಾರಾಗುವ ಉತ್ಪನ್ನಗಳನ್ನು ತಯಾರಿಸಬಾರದು ಎಂದು 2006ರ ಕಾಯ್ದೆಯಲ್ಲಿ ಇರುವ ಅಂಶಗಳ ಆಧಾರದ ಮೇಲೆ ಈ ಅಧಿವೇಷನದಲ್ಲಿ ಸರ್ಕಾರದ ಗಮನಕ್ಕೆ ತಂದು ಕಾಯ್ದೆ ರೂಪಿಸಲು ಮನವಿ ಮಾಡಲಾಗುವುದು ಎಂದು ನೇಕಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ವೇಳೆ ತಹಸೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ, ಕರ್ನಾಟಕ ರಾಜ್ಯ ಕೈ ಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್, ಜಿಲ್ಲಾ ಉಪನಿರ್ದೇಶಕ ಸುರೇಶ್ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!