ದೊಡ್ಡಬಳ್ಳಾಪುರ: ತಾಲೂಕಿನ ವಿವಿಧ ಆಂಜನೇಯ ದೇವಾಲಯಗಳಲ್ಲಿ ಡಿ.2ರಂದು ಹನುಮ ಜಯಂತಿ (Hanuma Jayanti) ಅಂಗವಾಗಿ ವಿಶೇಷ ಪೂಜಾ ಕೈಂಕರ್ಯ ನಡೆಯಲಿದ್ದು, ದೇವಾಲಯಗಳು ತಳಿರು ತೋರಣ ದೀಪಾಲಂಕಾರದಿಂದ ಅಲಂಕೃತವಾಗಿವೆ.
ನಗರದ ಗಂಗಾಧರಪುರ, ರೋಜೀಪುರದಲ್ಲಿನ ಪ್ರಸನ್ನ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಡಿ.2ರಂದು ಮಧ್ಯಾಹ್ನ 12ಕ್ಕೆ ಹನುಮಜಯಂತಿ ಅಂಗವಾಗಿ ರಥೋತ್ಸವ ನಡೆಯಲಿದೆ.
ಇದರ ಅಂಗವಾಗಿ ಡಿ.1 ರಂದುಸಂಜೆ 6 ಗಂಟೆಗೆ ಸೀತಾರಾಮ ಕಲ್ಯಾಣೋತ್ಸವ ನಡೆಯಲಿದೆ. ಕಳೆದ 11 ದಿನಗಳಿಂದ ಹನುಮಜಯಂತಿ ಅಂಗವಾಗಿ ವಿವಿಧ ಭಜನಾ ಮಂಡಳಿಗಳ ವತಿಯಿಂದ ರಾತ್ರಿ ಹಗಲು ನಿರಂತರವಾಗಿ ಭಜನೆಗಳು ನಡೆದಿದ್ದು, ಹನುಮ ಜಯಂತಿಯಂದು ಮುಕ್ತಾಯವಾಗಲಿದೆ.
ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದಲ್ಲಿ ಡಿ.2 ರಂದು ಹನುಮ ಜಯಂತಿ ಅಂಗವಾಗಿ ಬೆಳಗ್ಗೆ 5 ಗಂಟೆಗೆ ಪಂಚಮೃತ ಅಭಿಷೇಕ, 7 ಗಂಟೆಗೆ ಸುರಭಿ ಭಜನಾ ಮಂಡಲಿಯವರಿಂದ ಭಜನೆ ಕಾರ್ಯಶಕ್ರಮ, 8.30ಕ್ಕೆ ಶ್ರೀ ರಾಮತಾರಕ ಹೋಮ, ಸಂಜೆ ನೆಲದಾಂಜನೇಯ ಸ್ವಾಮಿ ಪ್ರಾಕಾರೋತ್ಸವ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮ ನಡೆಯಲಿದೆ.
ಅರಳು ಮಲ್ಲಿಗೆ ಬಾಗಿಲು ಸರ್. ಎಂ. ವಿಶ್ವೇಶ್ವರಯ್ಯ ವೃತ್ತದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಡಿ.2 ರಂದು ಬೆಳಗ್ಗೆ 6 ಗಂಟೆಗೆ ಮಹಾಭಿಷೇಕ, 9 ಗಂಟೆಗೆ ವಿಶೇಷ ಅಲಂಕಾರ, 10 ಗಂಟೆಗೆ ವಿಷ್ಣು ಸಹಸ್ರ ನಾಮ ಪಾರಾಯಣ,ದೇವರ ನಾಮಗಳ ಗಾಯನ, ಸಂಜೆ 6 ಗಂಟೆಗೆ ಆಂಜನೇಯಸ್ವಾಮಿ ಮೆರವಣಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ.
ತಾಲೂಕಿನ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಅಂಗವಾಗಿ ಶ್ರೀ ರಾಮತಾರಕ ಹೋಮ, ಹೂವಿನ ಅಲಂಕಾರ ವಿಶೇಷ ಆಲಂಕಾರ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ರೈಲ್ವೆ ನಿಲ್ದಾಣ ವೃತ್ತದ ಬಳಿಯ ಪ್ರಸನ್ನ ಆಂಜನೇಯಸ್ವಾಮಿ, ತಾಲೂಕಿನ ಕೊಡಿಗೆಳ್ಳಿಯ ಅಭಯ ಆಂಜನೇಯಸ್ವಾಮಿ ದೇವಾಲಯ, ಮಜರಾಹೊಸಹಳ್ಳಿಯ ಆಂಜನೇಯಸ್ವಾಮಿ, ಸಿದ್ದೇನಾಯಕನಹಳ್ಳಿ, ಅರಳುಮಲ್ಲಿಗೆ ಕೆರೆ ಏರಿ ಅಭಯ ಆಂಜನೇಯಸ್ವಾಮಿ, ಶಿವಪುರ ಗೇಟ್, ರಾಗಿರಾಯನ ಕೆರೆ ಆಂಜನೇಯಸ್ವಾಮಿ ಮೊದಲಾಗಿ ನಗರ ಹಾಗೂ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಆಂಜನೇಯಸ್ವಾಮಿಗೆ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ಜರುಗಲಿವೆ.