D.C. Shashidhar distance from Doddaballapura Congress..! What is the reason..?

ದೊಡ್ಡಬಳ್ಳಾಪುರ ಕಾಂಗ್ರೆಸ್‌ನಿಂದ ಡಿ.ಸಿ. ಶಶಿಧರ್ ಅಂತರ..! ಕಾರಣವೇನು..?

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಮುಖಂಡ ಡಿ.ಸಿ. ಶಶಿಧರ್ (D.C. Shashidhar) ದೊಡ್ಡಬಳ್ಳಾಪುರ ಕಾಂಗ್ರೆಸ್ (Doddaballapura Congress) ಪಕ್ಷದಿಂದ ಅಂತರ ಕಾಯ್ದುಕೊಂಡಿರುವುದು, ರಾಜಕಾರಣದಿಂದ ತಟಸ್ಥವಾಗಿರುವುದು ಪಕ್ಷದ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

21ನೇ ವಯಸ್ಸಿಗೆ ರಾಜಕಾರಣಕ್ಕೆ ಕಾಲಿಟ್ಟ ದೊಡ್ಡಬೆಳವಂಗಲದ ಡಿ.ಸಿ. ಶಶಿಧರ್, 2005 ರಲ್ಲಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, 2008 ರಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ, 2012ರಲ್ಲಿ ಯೂತ್ ಕಾಂಗ್ರೆಸ್ ಪಾರ್ಲಿಮೆಂಟ್ ಅಧ್ಯಕ್ಷರಾಗಿ ಪಕ್ಷಕ್ಕಾಗಿ ಸೇವೆ ಸಲ್ಲಿಸಿದ್ದಾರೆ.

ಬಳಿಕ ದೊಡ್ಡಬೆಳವಂಗಲ ಗ್ರಾಮಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದ ಡಿ.ಸಿ. ಶಶಿಧರ್ ನಂತರ ಗ್ರಾಮಪಂಚಾಯಿತಿ ಅಧ್ಯಕ್ಷರಾದರೂ, ಆನಂತರ ನಡೆದ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ, ಕಾಂಗ್ರೆಸ್ ಪಕ್ಷದಲ್ಲಿನ ತೀವ್ರ ಸ್ಪರ್ಧೆಯ ನಡುವೆಯೂ ಅಧ್ಯಕ್ಷರಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿಯಲ್ಲಿ ಹಲವು ಮಹತ್ತರ ಕಾರ್ಯಗಳನ್ನು ಮಾಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಜನತೆ ಹಾಗೂ ಎಲ್ಲಾ ಪಕ್ಷಗಳ ಸದಸ್ಯರ ಮನ್ನಣೆಗೆ ಪಾತ್ರರಾಗಿದ್ದರು.

ಆದರೆ ವಿಧಾನಸಭೆ ಚುನಾವಣೆಯ ಬಳಿಕ ಡಿ.ಸಿ. ಶಶಿಧರ್ ಅವರು ಏಕಾಏಕಿ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದು, ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗುವ ಲಕ್ಷಣಗಳು ಕಂಡುಬರುತ್ತಿದೆ.

ಡಿ.ಸಿ. ಶಶಿಧರ್ ತಟಸ್ಥವಾಗಲು ಕಾರಣವೇನು..?

ಡಿ.ಸಿ. ಶಶಿಧರ್ ಅವರ ಆತ್ಮೀಯ ವಲಯದ ಪ್ರಕಾರ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕರಿಗೆ ಬೆಲೆ ಸಿಗುತ್ತಿಲ್ಲ, ಹಣ ಬಲ ಉಳ್ಳವರಿಗೆ ಮಾತ್ರ ಹುದ್ದೆಗಳು ದೊರಕುತ್ತಿದೆ, ಪಕ್ಷ ನಿಷ್ಟೆ ಹೊಂದಿದವರಿಗೆ ಅವಕಾಶಗಳು ಸಿಗುತ್ತಿಲ್ಲ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಯಕರ್ತರ ಕೇಳುವವರು ಇಲ್ಲವಾಗಿದೆ ಎಂಬ ಬೇಸರ ಅವರಿಗೆ ಕಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ತಮ್ಮದೇ ಪ್ರಬಲವಾದ ಹಿಡಿತ ಹೊಂದಿರುವ ಶಶಿಧರ್ ಅವರು ಸಚಿವ ಕೃಷ್ಣಾ ಬೈರೇಗೌಡ ಅವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡವರು. ಆದರೆ ಈಗ ಬೈರೇಗೌಡರ ಸಲಹೆಗೂ ಶಶಿಧರ್ ಮೌನವೇ ಉತ್ತರ ನೀಡಿದ್ದಾರೆ ಎಂಬ ಮಾತುಗಳು ಕೇಳಿಬಂದಿದೆ.

ಅಲ್ಲದೆ ಬೆಂಗಳೂರು ಗ್ರಾಮಾಂತರ ಯೂತ್ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್, ದೊಡ್ಡಬಳ್ಳಾಪುರ ಯೂತ್ ಕಾಂಗ್ರೆಸ್ ಅಧ್ಯಕ್ಷ ಪುನೀತ್ ಗೌಡ ಮಲ್ಲೋಹಳ್ಳಿ ಶಶಿಧರ್ ಅವರ ಬೆಂಬಲಿಗರಾಗಿದ್ದಾರೆ‌. ಆದರೆ ಏಕಾಏಕಿ ಡಿ.ಸಿ. ಶಶಿಧರ್ ಅವರು ತಟಸ್ಥವಾಗಿರುವುದು ಅವರ ಹಿಂಬಾಲಕರಿಗೆ ಆತಂಕಕ್ಕೆ ಕಾರಣವಾಗಿದೆ. ಅಲ್ಲದೆ ಶಶಿಧರ್ ಬೇರೆ ಪಕ್ಷಕ್ಕೆ ತೆರಳಿದರೆ ಗತಿ ಯಾರು ಎಂಬ ಆತಂಕ ಅವರದ್ದಾಗಿದೆ.

ಕೆಲವೇ ತಿಂಗಳುಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ಘೋಷಣೆಯಾಗಲಿದ್ದು, ದೊಡ್ಡಬಳ್ಳಾಪುರ ಕಾಂಗ್ರೆಸ್ ಡಿ.ಸಿ.ಶಶಿಧರ್ ಅಂತಹ ನಾಯಕರನ್ನು ಓಲೈಸಿ ಸಕ್ರಿಯರನ್ನಾಗಿಸದಿದ್ದಲ್ಲಿ ಪಕ್ಷಕ್ಕೆ ದೊಡ್ಡ ಮಟ್ಟದ ನಷ್ಟ ಉಂಟಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

ಪ್ರತಿಕ್ರಿಯೆ ನೀಡಲು ಮೌನ

ಈ ಎಲ್ಲಾ ಬೆಳವಣಿಗೆ ಕುರಿತು ಹರಿತಲೇಖನಿ ಡಿ.ಸಿ.ಶಶಿಧರ್ ಅವರನ್ನು ಪ್ರತಿಕ್ರಿಯೆಗಾಗಿ ಸಂಪರ್ಕಿಸಲಾಯಿತು. ಆದರೆ, ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿ, ಮೌನ ವಹಿಸಿದರು.

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!