ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ

Mr. Narayanaswamy, here is the affidavit I submitted to the Lokayukta: D.K. Shivakumar

ಬೆಂಗಳೂರು: “ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ. ನಾನು ಹಾಗೂ ಸತೀಶ್ ಜಾರಕಿಹೊಳಿ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಯಾಕೆ ನೋಡುತ್ತೀರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಪ್ರಶ್ನಿಸಿದ್ದಾರೆ.

ಕೆಐಎಡಿಬಿಎ ನೂತನ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಸತೀಶ್ ಜಾರಕಿಹೋಳಿ ಅವರ ಭೇಟಿ ಬಗ್ಗೆ ಕೇಳಿದಾಗ, “ನಾವು ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ ಇರುತ್ತೇವೆ, ರಾತ್ರಿ ಊಟಕ್ಕೆ ಸೇರುತ್ತೇವೆ, ಬೆಳಗ್ಗೆ ತಿಂಡಿಗೆ ಸೇರುತ್ತೇವೆ. ಇವೆಲ್ಲ ಇದ್ದೇ ಇರುತ್ತವೆ. ರಾಜಕೀಯದಲ್ಲಿ ಸ್ನೇಹ, ಬಾಂಧವ್ಯ, ನೆಂಟಸ್ಥನ ಇದ್ದೇ ಇರುತ್ತದೆ” ಎಂದರು.

“ಈಗ ನಾನು ಹಾಗೂ ಎಂ.ಬಿ. ಪಾಟೀಲ್ ಅವರು ಸುಮಾರು ಒಂದು ಗಂಟೆ ಕಾಲ ಮಾತಾಡಿದ್ದೇವೆ. ರಾಜ್ಯಕ್ಕೆ ಬಂಡವಾಳ ಹೂಡಿಕೆದಾರರನ್ನು ಹೇಗೆ ಆಕರ್ಷಿಸಬೇಕು. ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಹೇಗೆ ನಮಗೆ ಸ್ಪರ್ಧೆ ನೀಡುತ್ತಿದೆ. ತೆಲಂಗಾಣದಲ್ಲಿ ಸದ್ಯದಲ್ಲೇ ಜಾಗತಿಕ ಸಮಾವೇಶ ನಡೆಯಲಿದ್ದು, ಜಾಗತಿಕ ಮಟ್ಟದಲ್ಲಿ ನಾವು ಹೇಗೆ ಸ್ಪರ್ಧೆ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಈ ರೀತಿ ರಾಜ್ಯದ ಪ್ರಗತಿ ಬಗ್ಗೆ ಚರ್ಚೆ ಮಾಡುವುದು ಸಹಜ.” ಎಂದರು.

ಕೆಕೆಆರ್ ಡಿಬಿ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಮಾತನಾಡಿ, “ಕರ್ನಾಟಕದಲ್ಲಿ ಉದ್ಯಮ ಮಾಡುವವರನ್ನು ಗೌರವಿಸಬೇಕು, ಅವರ ವ್ಯವಹಾರ, ಅಧಿಕಾರಿಗಳ ಭೇಟಿಗೆ ಅನುಕೂಲ, ಅವರ ಕಡತಗಳ ತ್ವರಿತ ವಿಲೇವಾರಿ ಉದ್ದೇಶಕ್ಕೆ ರಾಜ್ಯ ಸರ್ಕಾರವು ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ ಕೆಕೆಆರ್ ಡಿಬಿ ನೂತನ ಕಚೇರಿ ನಿರ್ಮಿಸಿದೆ. ಇಷ್ಟು ದಿನ ಬಾಡಿಗೆ ಕಟ್ಟಡದಲ್ಲಿ ಇದ್ದರು, ಈಗ ಸ್ವಂತ ಕಟ್ಟಡ ನಿರ್ಮಿಸಲಾಗಿದೆ. ಈ ಕಚೇರಿಯಿಂದ ವಿಧಾನಸೌಧಕ್ಕೆ, ಬಸ್ ಹಾಗೂ ರೈಲ್ವೇ ನಿಲ್ದಾಣಕ್ಕೆ ಸಮೀಪವಾಗಿದ್ದು, ಇಲ್ಲಿ ಕಚೇರಿ ನಿರ್ಮಿಸಲಾಗಿದೆ” ಎಂದು ತಿಳಿಸಿದರು.

ಭ್ರಷ್ಟಾಚಾರ ವರದಿ ಅಧ್ಯಯನ ಮಾಡಿ ಅಶೋಕ್ ಅವರು ಅಧಿವೇಶನದಲ್ಲಿ ಪ್ರಸ್ತಾಪಿಸಲಿ

63% ಭ್ರಷ್ಟಾಚಾರ ರಾಜ್ಯದಲ್ಲಿದೆ ಎಂಬ ಉಪಲೋಕಾಯುಕ್ತ ಅವರ ವರದಿ ಬಗ್ಗೆ ಆರ್.ಅಶೋಕ್ ಅವರು ಮಾತನಾಡಿರುವ ಬಗ್ಗೆ ಕೇಳಿದಾಗ, “ಪಾಪ, ಆರ್.ಅಶೋಕ್ ಅವರಿಗೆ ಅದು ಯಾರ ಕಾಲದ ವರದಿ ಎಂದು ಗೊತ್ತಿಲ್ಲ. ಅವರು ಮೊದಲು ಈ ವರದಿ ಯಾರ ಕಾಲದ್ದು ಎಂದು ಓದಿಕೊಳ್ಳಲಿ. ಅವರು ಈ ವಿಚಾರವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲಿ, ಅಲ್ಲಿಯೇ ಉತ್ತರ ನೀಡುತ್ತೇವೆ” ಎಂದು ತಿರುಗೇಟು ನೀಡಿದರು.

ದೆಹಲಿಗೆ ಸರ್ವಪಕ್ಷ ನಿಯೋಗ ಹೋಗುವ ದಿನಾಂಕ ನಿಗದಿಯಾಯಿತೇ ಎಂದು ಕೇಳಿದಾಗ, “ಈ ಬಗ್ಗೆ ಇನ್ನು ಚರ್ಚೆ ಮಾಡಬೇಕಿದೆ. ಕೇಂದ್ರ ಸಚಿವರು ಸಂಸತ್ ಅಧಿವೇಶನದಲ್ಲಿ ಕಾರ್ಯನಿರತರಾಗಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಡಿ. 8ರಂದು ನಡೆಸಲು ತೀರ್ಮಾನಿಸಲಾಗಿದ್ದ ಸಭೆ ಮುಂದೂಡಿದ್ದೇವೆ. ಅವರು ಈ ಬಗ್ಗೆ ಪತ್ರವನ್ನು ಬರೆದಿದ್ದರು. ಪ್ರಧಾನಮಂತ್ರಿಗಳು ಪ್ರಹ್ಲಾದ್ ಜೋಷಿ ಅವರೊಂದಿಗೆ ಸಭೆ ಇಟ್ಟುಕೊಂಡಿದ್ದಾರೆ. ಅಂದು ನಿರ್ಮಲಾ ಸೀತಾರಾಮನ್ ಅವರು ಮಸೂದೆ ಮಂಡನೆ ಮಾಡಬೇಕಿದೆ. ಸೋಮಣ್ಣ ಅವರು ಕೂಡ ಅಂದು ಸಭೆಯಲ್ಲಿ ಭಾಗವಹಿಸಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಅವರಿಗೆ ಹಾಗೂ ನಮಗೆ ಅನುಕೂಲವಾಗುವ ದಿನಾಂಕವನ್ನು ನಿಗದಿ ಮಾಡಲಾಗುವುದು” ಎಂದು ತಿಳಿಸಿದರು.

ಪ್ರಚಾರಕ್ಕೆ ಮಾತನಾಡಬಾರದು, ಕನಿಷ್ಟ ಪರಿಜ್ಞಾನ ಇರಬೇಕು

ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ..” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು.

ವಾಚ್ ಕದ್ದದ್ದೋ, ಕೊಂಡದ್ದೋ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾರಾಯಣಸ್ವಾಮಿ ಅವರಿಗೆ ಇನ್ನೂ ಅನುಭವವಿಲ್ಲ. ಯಾವುದಾದರೂ ವಿಚಾರದ ಬಗ್ಗೆ ಮಾತನಾಡಬೇಕಾದರೆ ಕನಿಷ್ಟ ಪರಿಜ್ಞಾನ ಇರಬೇಕು. ಬರೀ ಪ್ರಚಾರಕ್ಕೆ ಮಾತನಾಡುವುದಲ್ಲ. ಅವರಿಗಿಂತ ಹೆಚ್ಚು ಜವಾಬ್ದಾರಿಯಿಂದ ನಾನು ವರ್ತಿಸುತ್ತೇನೆ. ಅವರೂ ಜವಾಬ್ದಾರಿಯಿಂದ ಕೆಲಸ ಮಾಡುವುದನ್ನು ಕಲಿಯಬೇಕು. ನಾನು ಪ್ರದರ್ಶಿಸಿರುವ ದಾಖಲೆ ವಿಚಾರ ಒತ್ತಟ್ಟಿಗೆ ಇರಲಿ, ಅವರೇ ಹೋಗಿ ಲೋಕಾಯುಕ್ತದಲ್ಲಿ ಪರಿಶೀಲನೆ ಮಾಡಲಿ. ಅಲ್ಲಿ ಸಲ್ಲಿಸಿರುವ ಆದಾಯ ಅಫಿಡವಿಟ್ ಸಾರ್ವಜನಿಕ ದಾಖಲೆಯಾಗಿದ್ದು, ಅದನ್ನು ಅವರೂ ಪಡೆಯಬಹುದು.

2018 ಹಾಗೂ 2023ರಲ್ಲಿ ತೋರಿಸಿಲ್ಲ ಎಂಬುದು ಅವರ ವಾದ ಎಂದು ಕೇಳಿದಾಗ, “ಅವರಿಗೇನು ಗೊತ್ತು? 2025 ರಲ್ಲೂ ಸಲ್ಲಿಕೆ ಮಾಡಿದ್ದೀನಲ್ಲಾ..?” ಎಂದು ತಿಳಿಸಿದರು.

ಈ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸುತ್ತಾರಂತೆ ಎಂದು ಕೇಳಿದಾಗ, “ಸದನದಲ್ಲೂ ಪ್ರಸ್ತಾಪಿಸಲಿ, ಬೇರೆ ಎಲ್ಲಾದರೂ ಪ್ರಸ್ತಾಪಿಸಲಿ. ಯಾರು ಬೇಡ ಎನ್ನುತ್ತಾರೆ. ದೇಶದೆಲ್ಲೆಡೆ ಚರ್ಚೆ ಮಾಡಲಿ. ನನ್ನ ದಾಖಲೆ ಅವರಿಗೆ ತೋರಿಸುವ ಅಗತ್ಯವಿಲ್ಲವಾದರೂ ನಾನು ಆ ವಾಚ್ ಕದ್ದಿದ್ದೇನೆ ಎಂದು ಹೇಳಿದ್ದಾರಲ್ಲ ಅದಕ್ಕೆ ತೋರಿಸಿರುವೆ” ಎಂದು ತಿರುಗೇಟು ನೀಡಿದರು.

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ:

ಇದಕ್ಕೂ ಮುನ್ನ ಗುರುವಾರ ಬೆಳಗ್ಗೆ ಟ್ವೀಟ್ ಮೂಲಕ ನಾರಾಯಣಸ್ವಾಮಿ ಅವರಿಗೆ ತಿರಗೇಟು ನೀಡಿದ ಶಿವಕುಮಾರ್ ಅವರು, “ಮಿಸ್ಟರ್ ನಾರಾಯಣಸ್ವಾಮಿ, ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್! ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲ. ನಾನು ಪಾರದರ್ಶಕ ವ್ಯಕ್ತಿ. ಏನನ್ನೂ ಮುಚ್ಚಿಟ್ಟುಕೊಳ್ಳಬಾರದು ಅಂತಲೇ ನಿಜ ಹೇಳಿದ್ದೇನೆ. ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? “ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ” ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ನನ್ನ ಅಫಿಡವಿಟ್ ಚೆಕ್ ಮಾಡಿಕೊಳ್ಳಿ” ಎಂದು ಹರಿಹಾಯ್ದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]