ಎರಡು ರೈತ ಕೇಂದ್ರಿತ ಖಾಸಗಿ ಮಸೂದೆಗಳನ್ನು ಮಂಡಿಸಿದ ಸಂಸದ ಡಾ.ಕೆ.ಸುಧಾಕರ್

MP Dr.K. Sudhakar introduced two farmer-centric private bills

ನವದೆಹಲಿ: ರೈತರ ಕಲ್ಯಾಣಕ್ಕಾಗಿ ಸಂಸದ ಡಾ.ಕೆ.ಸುಧಾಕರ್ (Dr.K. Sudhakar) ಅವರು ಲೋಕಸಭೆಯಲ್ಲಿ ಎರಡು ಮಹತ್ವದ ಖಾಸಗಿ ಮಸೂದೆಗಳನ್ನು ಮಂಡಿಸಿದ್ದಾರೆ. ಈ ಮಸೂದೆಗಳು ಕೃಷಿ ಆರ್ಥಿಕತೆ ಹಾಗೂ ಗ್ರಾಮೀಣ ಕುಟುಂಬಗಳ ಅಭಿವೃದ್ಧಿಗೆ ಸಹಕಾರಿಯಾಗಿದೆ.

  1. ಹೈನುಗಾರರ (ಕಲ್ಯಾಣ) ಮಸೂದೆ, 2024

ಈ ಮಸೂದೆಯು ಭಾರತದ 7 ಕೋಟಿ ಡೇರಿ ಆಧಾರಿತ ಕೃಷಿ ಕುಟುಂಬಗಳಿಗೆ ಸಾಮಾಜಿಕ ಭದ್ರತೆಯ ನೆರವು ನೀಡುತ್ತದೆ. ಈ ಕುಟುಂಬಗಳಲ್ಲಿ ಹೆಚ್ಚಿನವರು ಸಣ್ಣ, ಅತಿ ಸಣ್ಣ ರೈತರು ಮತ್ತು ಮಹಿಳೆಯರಿದ್ದಾರೆ.

ಪ್ರಮುಖ ಅಂಶಗಳು

ಸಂಸದರು, ತಜ್ಞರು ಮತ್ತು ರೈತ ಪ್ರತಿನಿಧಿಗಳನ್ನು ಒಳಗೊಂಡ ಡೇರಿ ರೈತರ ಕಲ್ಯಾಣ ಸಮಿತಿಯ ರಚನೆ
ಡೇರಿ ರೈತರ ಕಲ್ಯಾಣ ನಿಧಿ ಸ್ಥಾಪನೆ .
ಡೇರಿ ರೈತರಿಗೆ ತಲಾ ₹50 ಲಕ್ಷ ಅಪಘಾತ ವಿಮೆ.
ಡೇರಿ ರೈತರಿಗೆ ತಲಾ ₹10 ಲಕ್ಷ ಆರೋಗ್ಯ ವಿಮೆ.

ಸರ್ಕಾರಿ ಯೋಜನೆಗಳಡಿ ಖರೀದಿಸಿದ ಜಾನುವಾರುಗಳಿಗೆ ಉಚಿತ ವಿಮೆ
ಡೇರಿ ರೈತರಿಗೆ ಮಾಸಿಕ ಪಿಂಚಣಿ
ಅಂದಾಜು ವೆಚ್ಚ: ವಾರ್ಷಿಕ ₹10,000 ಕೋಟಿ.

ಹವಾಮಾನದ ವೈಪರೀತ್ಯದಿಂದ ಜಾನುವಾರುಗಳ ಮೇಲೆ ಆಗುವ ಪರಿಣಾಮ, ಬೆಲೆ ಏರಿಳಿತ, ಹೆಚ್ಚುವ ವೆಚ್ಚಗಳು ಮತ್ತು ಸಾಮಾಜಿಕ ಭದ್ರತೆಯ ಸವಾಲುಗಳನ್ನು ಈ ಮಸೂದೆ ಪರಿಹರಿಸುತ್ತದೆ.

  1. ರಾಷ್ಟ್ರೀಯ ಪುಷ್ಪಕೃಷಿ ಮಂಡಳಿ ಮಸೂದೆ, 2024

ಭಾರತದ ಹೂವಿನ ಕೃಷಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಈ ಮಸೂದೆ ನೆರವಾಗುತ್ತದೆ. ಹೆಚ್ಚಿನ ಮೌಲ್ಯದ ಹೂವು ಉತ್ಪಾದನೆ ಮತ್ತು ರಫ್ತು ಹೆಚ್ಚಿಸಿ ದೇಶವನ್ನು ಹೂ ಮಾರುಕಟ್ಟೆಯ ಜಾಗತಿಕ ಕೇಂದ್ರವಾಗಿ ಮಾಡಲು ಇದು ಉತ್ತೇಜನ ನೀಡುತ್ತದೆ.

ಪ್ರಮುಖ ಅಂಶಗಳು

ರಾಷ್ಟ್ರೀಯ ಪುಷ್ಪಕೃಷಿ ಮಂಡಳಿಯ ರಚನೆ
ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಪ್ರಧಾನ ಕಚೇರಿ ಸ್ಥಾಪನೆ, ದೇಶದ ವಿವಿಧೆಡೆ ಪ್ರಾದೇಶಿಕ ಕಚೇರಿಗಳು
ವೈಜ್ಞಾನಿಕ ಕೃಷಿಗೆ ಒತ್ತು, ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಅಭಿವೃದ್ಧಿ
ರಫ್ತು ಪ್ರಮಾಣೀಕರಣಕ್‌ಕೆ ಸಹಾಯ, ಸಂಶೋಧನೆ ಮತ್ತು ಬೆಲೆ ಶಿಫಾರಸು
ರಾಷ್ಟ್ರೀಯ ಪುಷ್ಪಕೃಷಿ ಮಂಡಳಿ ನಿಧಿಯ ರಚನೆ.

ಅಂದಾಜು ವಾರ್ಷಿಕ ವೆಚ್ಚ; ₹1,500 ಕೋಟಿ, ಒಂದು ಬಾರಿ ವೆಚ್ಚ: ₹50 ಕೋಟಿ
ಭಾರತವು ಈಗಾಗಲೇ ₹717.83 ಕೋಟಿ ಮೌಲ್ಯದ ಸುಮಾರು 19,677 ಮೆಟ್ರಿಕ್ ಟನ್ ಪುಷ್ಪ ಉತ್ಪನ್ನಗಳನ್ನು ರಫ್ತು ಮಾಡುತ್ತಿದೆ. ಈ ಮಸೂದೆಯು ಉತ್ಪಾದನಾ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಈ ಕುರಿತು ಮಾತನಾಡಿದ ಸಂಸದ ಡಾ.ಕೆ.ಸುಧಾಕರ್‌, “ನಮ್ಮ ಹೈನುಗಾರರು ಮತ್ತು ಹೂವು ಬೆಳೆಗಾರರು ಗ್ರಾಮೀಣ ಭಾರತದ ಬೆನ್ನೆಲುಬಾಗಿದ್ದಾರೆ. ಈ ಮಸೂದೆಗಳು ಅವರ ಆದಾಯವನ್ನು ಭದ್ರಪಡಿಸಿ, ಸಮಸ್ಯೆಗಳನ್ನು ನಿವಾರಿಸುತ್ತದೆ. ಜೊತೆಗೆ ಹೊಸ ಆರ್ಥಿಕ ಅವಕಾಶಗಳನ್ನು ನೀಡುತ್ತದೆ. ಸರಿಯಾದ ಸಾಂಸ್ಥಿಕ ಚೌಕಟ್ಟು ನೀಡುವುದರ ಮೂಲಕ, ಭಾರತವು ಪುಷ್ಪಕೃಷಿಯಲ್ಲಿ ಜಾಗತಿಕ ನಾಯಕನಾಗಬಹುದು. ಹಾಗೆಯೇ ಪ್ರತಿ ಹೈನುಗಾರರು ಸಾಮಾಜಿಕ ಭದ್ರತೆ ಮತ್ತು ಘನತೆಯನ್ನು ಪಡೆಯಬಹುದು” ಎಂದು ತಿಳಿಸಿದ್ದಾರೆ.

ರೈತರ ಕಲ್ಯಾಣ, ಗ್ರಾಮೀಣ ಉದ್ಯಮಶೀಲತೆ ಮತ್ತು ಭಾರತದ ಕೃಷಿ ಪರಿವರ್ತನೆಯ ವಿಚಾರದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಅವರ ಬದ್ಧತೆಯನ್ನು ಈ ಎರಡೂ ಮಸೂದೆಗಳು ಪ್ರತಿಬಿಂಬಿಸುತ್ತವೆ.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]