Actor Darshan visits Bhagwati temple

ನಾಳೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ; ಅಭಿಮಾನಿಗಳಿಗೆ ದರ್ಶನ್ ಭಾವನಾತ್ಮಕ ಸಂದೇಶ

ಬೆಂಗಳೂರು; ಅಭಿಮಾನಿಗಳ ದಾಸ, ಚಾಲೆಂಜಿಗ್ ಸ್ಟಾರ್ ದರ್ಶನ್ (Darshan) ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ”ದಿ ಡೆವಿಲ್’ (The Devil) ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

ಇತ್ತೀಚೆಗೆ ಹರಿಬಿಟ್ಟ ಟ್ರೇಲರ್ ಲಕ್ಷಾಂತರ ಹಿಟ್ಸ್ ದಾಖಲಿಸಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್‌ನಲ್ಲಿ ದರ್ಶನ್ ಸಿನಿಮಾ ದಾಖಲೆ ಮಟ್ಟದ ಟಿಕೆಟ್ ಬಿಕರಿಯಾಗಿದೆ.

ಡಿ. 11ರಂದು ರಿಲೀಸ್ ಆಗಲಿರುವ ‘ಡೆವಿಲ್’ ದರ್ಶನ ಪಡೆಯಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ ಎಂಬುದಕ್ಕೆ ಈಗಾಗಲೇ ಲಕ್ಷಾಂತರ ಟಿಕೆಟ್ಸ್ ಸೋಲ್ಡ್‌ ಔಟ್ ಆಗಿರುವುದೇ ಸಾಕ್ಷಿ.

ಮೊನ್ನೆಯಷ್ಟೇ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಆರಂಭವಾಗಿತ್ತು. ಶುರುವಾದ ಕೆಲವೇ ಗಂಟೆಗಳಲ್ಲಿ ಸಾವಿರಾರು ಟಿಕೆಟ್‌ಗಳು ಮಾರಾಟವಾಗಿ ಬುಕ್ ಮೈ ಶೋನಲ್ಲಿ ಟ್ರೆಂಡಿಂಗ್ ಸೃಷ್ಟಿಸಿದೆ.

ಮಂಗಳವಾರ ಬೆಳಗ್ಗೆಯವರೆಗೂ ಸುಮಾರು ಎರಡು ಲಕ್ಷಕ್ಕೂ ಅಧಿಕ ಟಿಕೆಟ್‌ ಬಿಕರಿಯಾಗಿರುವುದಾಗಿ ಮಾಹಿತಿ ನೀಡುತ್ತಾರೆ ವಿತರಕ ಸುಪ್ರೀತ್. ಸಿನಿಮಾ ಬಿಡುಗಡೆಗೆ ಇನ್ನೂ ಎರಡು ದಿನ ಬಾಕಿ ಇರುವುದರಿಂದ ಮತ್ತಷ್ಟು ಲಕ್ಷ ಟಿಕೆಟ್ ಸೇಲ್ ಆಗುವ ನಿರೀಕ್ಷೆ ಇದೆ ಎಂಬುದು ಅವರ ಅಂದಾಜು.

ದರ್ಶನ್ ಭಾವನಾತ್ಮಕ ಸಂದೇಶ

ಗೆಳೆತಿಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನ ಹತ್ಯೆ ಆರೋಪದಲ್ಲಿ ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ನಡುವೆ ಅವರ ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಪತ್ನಿ ವಿಜಯಲಕ್ಷ್ಮಿ ದರ್ಶನ್ ಮೂಲಕ ತನ್ನ ಸೆಲೆಬ್ರಿಟಿಗಳಿಗೆ (ಅಭಿಮಾನಿಗಳಿಗೆ) ದರ್ಶನ್ ಅವರು ಸಂದೇಶ ನೀಡಿದ್ದಾರೆ.

ದರ್ಶನ್ ಸಂದೇಶ

‘ನನ್ನ ಪ್ರೀತಿಯ ಸೆಲೆಬ್ರಿಟಿಗಳೇ,

ಈ ಸಂದೇಶ ನನ್ನ ಹೃದಯದಿಂದ ಬಂದಿದೆ, ವಿಜಿ ನಿಮ್ಮೆಲ್ಲರಿಗೂ ತಲುಪಿಸುತ್ತಾಳೆ. ಅವರು ನಿಮ್ಮೆಲ್ಲರ ಪ್ರೀತಿ, ಕಾಳಜಿ, ನಿಮ್ಮ ದಣಿವರಿಯದ ಬೆಂಬಲ, ರಾಜ್ಯಾದ್ಯಂತ ನಿಮ್ಮ ಅವಿಶ್ರಾಂತ ಪ್ರಚಾರಗಳ ಬಗ್ಗೆ ಪ್ರತಿ ಬಾರಿಯೂ ನನಗೆ ತಿಳಿಸುತ್ತಿದ್ದಾರೆ. ದೂರದಿಂದ ಕೂಡ, ಪ್ರತಿ ಕ್ಷಣವೂ ನನ್ನೊಂದಿಗೆ ನಿಮ್ಮ ಉಪಸ್ಥಿತಿಯನ್ನು ನಾನು ಅನುಭವಿಸುತ್ತೇನೆ.

ನಾನು ನಿಮಗೆ ಹೇಳಲು ಬಯಸುವುದೇನೆಂದರೆ… ದಯವಿಟ್ಟು ಜನರು ಏನು ಹೇಳಿದರೂ ಚಿಂತಿಸಬೇಡಿ. ಯಾವುದೇ ಶಬ್ದ, ಯಾವುದೇ ವದಂತಿ ಅಥವಾ ಯಾವುದೇ ನಕಾರಾತ್ಮಕತೆಯು ನಿಮ್ಮ ಹೃದಯವನ್ನು ಅಲುಗಾಡಿಸಲು ಬಿಡಬೇಡಿ. ನೀವು ನನ್ನ ಶಕ್ತಿ, ನೀವು ನನ್ನ ಕುಟುಂಬ, ಮತ್ತು ಇಂದು ಎಂದಿಗಿಂತಲೂ ಹೆಚ್ಚಾಗಿ, ನೀವು ನನ್ನ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿ ನಾನು ನಿಂತಿದ್ದೇನೆ.

ನನ್ನ ಜೀವನದ ಈ ಹಂತದಲ್ಲಿ, ನನ್ನ ದೊಡ್ಡ ಶಕ್ತಿ ನೀವೇ. ಮತ್ತು ನಾನು ಬಯಸುವುದು ನೀವು ಕಡಿಮೆ ಚಿಂತಿಸಬೇಕು ಮತ್ತು ಆ ಪ್ರೀತಿ ಮತ್ತು ಶಕ್ತಿಯನ್ನು ನಮ್ಮ ಚಲನಚಿತ್ರ ಡೆವಿಲ್‌ನ ಕಡೆಗೆ ಹರಿಸಬೇಕು.

ನಿಮ್ಮೆಲ್ಲರಿಂದಾಗಿ ನಾನು ನಾನಾಗಿ ಉಳಿದಿದ್ದೇನೆ. ನಂಬುವುದು ಮಾತ್ರವಲ್ಲ, ನೀವು ಯಾವಾಗಲೂ ನನಗೆ ತೋರಿಸಿದ ಅದೇ ಅಪಾರ ಪ್ರೀತಿಯಿಂದ ನೀವು ಡೆವಿಲ್ ಸ್ವೀಕರಿಸುತ್ತೀರಿ ಎಂದು ನನಗೆ ತಿಳಿದಿದೆ.

ನನ್ನ ಅನುಪಸ್ಥಿತಿಯಲ್ಲಿಯೂ ಸಹ, ನೀವು ಪ್ರತಿ ಪ್ರಶ್ನೆಗೆ, ಪ್ರತಿ ಅನುಮಾನಕ್ಕೆ, ಪ್ರತಿ ಧ್ವನಿಗೆ… ಪದಗಳಿಂದಲ್ಲ, ಆದರೆ ಈ ಚಿತ್ರದ ಘರ್ಜಿಸುವ ಯಶಸ್ಸಿನೊಂದಿಗೆ ಉತ್ತರಿಸಬೇಕೆಂದು ನಾನು ಬಯಸುತ್ತೇನೆ. ಅದು ನಿಮ್ಮ ಧ್ವನಿಯಾಗಿರುತ್ತದೆ. ಅದು ನಮ್ಮ ಹೇಳಿಕೆಯಾಗಿರುತ್ತದೆ.

ನಿಮ್ಮ ಪ್ರಚಾರಗಳು, ನಿಮ್ಮ ಸಮರ್ಪಣೆ, ನಿಮ್ಮ ಒಗ್ಗಟ್ಟು… ಬಗ್ಗೆ ಕೇಳಿದಾಗ ನನಗೆ ಹೆಮ್ಮೆ ಮತ್ತು ಭಾವನೆ ಬರುತ್ತದೆ. ನಾನು ನಿಮ್ಮೆಲ್ಲರನ್ನು ಮತ್ತೆ ಭೇಟಿಯಾಗುವ ದಿನಕ್ಕಾಗಿ ಕಾಯಲು ಸಾಧ್ಯವಾಗುತ್ತಿಲ್ಲ, ನಿಮ್ಮ ಕಣ್ಣುಗಳನ್ನು ನೋಡಿ, ನನ್ನ ಸುತ್ತಲೂ ಗೋಡೆಯಂತೆ ನಿಂತಿದ್ದಕ್ಕಾಗಿ ಧನ್ಯವಾದಗಳು.

ನೀವು ನನ್ನನ್ನು ನಂಬುವಂತೆಯೇ, ನಾನು ನಿಮ್ಮಲ್ಲಿ ಪ್ರತಿಯೊಬ್ಬರನ್ನೂ ನಂಬುತ್ತೇನೆ. ಮತ್ತು ಸಮಯವು ಸತ್ಯವನ್ನು ಮಾತನಾಡುವ ತನ್ನದೇ ಆದ ಮಾರ್ಗವನ್ನು ಹೊಂದಿದೆ ಎಂಬುದನ್ನು ನೆನಪಿಡಿ. ಸಮಯವು ಎಲ್ಲದಕ್ಕೂ ಉತ್ತರಿಸುತ್ತದೆ. ಅಲ್ಲಿಯವರೆಗೆ, ನಿಮ್ಮ ತಲೆಗಳನ್ನು ಮೇಲಕ್ಕೆತ್ತಿ, ನಿಮ್ಮ ಹೃದಯಗಳನ್ನು ಬಲವಾಗಿ ಮತ್ತು ನಿಮ್ಮ ಪ್ರೀತಿಯನ್ನು ಅಚಲವಾಗಿ ಇರಿಸಿ.

ನನ್ನೆಲ್ಲ ಪ್ರೀತಿಯಿಂದ,

ನಿಮ್ಮ ದಾಸ ದರ್ಶನ್ ಎಂದು ಜೈಲಿನಿಂದಲೇ ದರ್ಶನ್‌ ಅವರು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!