Protest demanding the implementation of the Protection of Journalists Act and the fulfillment of 12 demands:

ಪತ್ರಕರ್ತರ ಹಿತರಕ್ಷಣಾ ಕಾಯ್ದೆ ಜಾರಿ ಸೇರಿ 12 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ದೊಡ್ಡಬಳ್ಳಾಪುರ: ಪತ್ರಕರ್ತರ (Journalists) ಹಿತರಕ್ಷಣಾ ಕಾಯ್ದೆ ಜಾರಿ ಸೇರಿದಂತೆ ಪ್ರಮುಖ 12 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ನೇತೃತ್ವದಲ್ಲಿ ಡಿ.15 ರಂದು ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯ ಕಾರ್ಯದರ್ಶಿ ಎಂ.ದೇವರಾಜ್, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಜನಪರ ಮಂಜು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯದ 16 ಸಾವಿರ ಪತ್ರಕರ್ತರಿಗೆ ಸರ್ಕಾರ ಉಚಿತವಾಗಿ ಸಂಚರಿಸುವುದಕ್ಕೆ ಬಸ್ ಪಾಸ್ ನೀಡಲು ನಡೆಸಿದ ಹೋರಾಟದ ಫಲವಾಗಿ ವಾರ್ತಾ ಇಲಾಖೆ ಕಠಿಣ ನಿಯಮಗಳನ್ನು ರೂಪಿಸಿದ್ದು, ತಾಲ್ಲೂಕು ಮಟ್ಟದ ಯಾವೊಬ್ಬ ಪತ್ರಕರ್ತರಿಗೂ ಬಸ್ ಪಾಸ್ ದೊರೆಯುವುದು ಗಗನ ಕುಸುಮವಾಗಿದೆ.

ಈ ನಿಟ್ಟಿನಲ್ಲಿ ಬಸ್ ಪಾಸ್‌ಗೆ ವಿಧಿಸಿರುವ ಕಠಿಣ ಷರತ್ತುಗಳನ್ನು ಸಡಿಲಿಸಬೇಕು ಎಂದು ಆಗ್ರಹಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬೇಡಿಕೆಗಳು

ಪಿಆರ್.ಜಿ.ಐ ಹಾಗೂ ಆರ್.ಎನ್.ಐ. ಹೊಂದಿರುವ ಪತ್ರಕರ್ತರಿಗೆ ವಿಕಾಸಸೌಧ, ವಿಧಾನಸೌಧಕ್ಕೆ ಪ್ರವೇಶಿಸಲು ಮುಕ್ತ ಅವಕಾಶ ನೀಡಬೇಕು.

ಜಿಲ್ಲಾ ವ್ಯಾಪ್ತಿಯಲ್ಲಿರುವ ಪತ್ರಿಕಾ ಭವನಗಳನ್ನು ಯಾವೊಂದು ಪತ್ರಿಕಾ ಸಂಘಟನೆಗಳಿಗೆ ನೀಡದೇ ಆಯಾ ಜಿಲ್ಲಾಧಿಕಾರಿಗಳ ಸುಪರ್ದಿಯಲ್ಲಿ ವಾರ್ತಾ ಇಲಾಖೆಯ ಅಧಿಕಾರಿಗಳ ಮೂಲಕ ನಿರ್ವಹಣೆಗೆ ಆದೇಶಿಸಬೇಕು.

ವಾರ್ತಾ ಇಲಾಖೆಯಲ್ಲಿ ಖಾಲಿ ಇರುವ 300ಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಬೇಕು.

ಪತ್ರಕರ್ತರಿಗೆ ಜೀವ ವಿಮೆ ಸೌಲಭ್ಯ ಸರ್ಕಾರ ಒದಗಿಸಬೇಕು.

ಕೆಲವು ಪೊಲೀಸರಿಂದ ಪತ್ರಕರ್ತರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು.

ಪತ್ರಕರ್ತರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು.

ಪತ್ರಕರ್ತರು ಕರ್ತವ್ಯದ ಸಮಯದಲ್ಲಿ ಅಪಘಾತ,ಸಹಜವಾಗಿ ಮೃತಪಟ್ಟರೆ ಅವರ ಅವಲಂಬಿತರಿಗೆ 10ಲಕ್ಷ ರೂ.ಪರಿಹಾರ ನೀಡಬೇಕು.

ವಾರ, ಪಾಕ್ಷಿಕ, ಮಾಸ ಹಾಗೂ ಇನ್ನೀತರ ಪತ್ರಿಕೆಗಳ ಪ್ರತಿನಿಧಿಗಳು ಮಾಶಾಸನ ಪಡೆಯಲು ಅರ್ಹತೆ ಹೊಂದಿರುವುದಿಲ್ಲವೆಂದು ವಾರ್ತಾ ಇಲಾಖೆ ಹೊರಡಿಸಿರುವ ಅವೈಜ್ಞಾನಿಕ ನಿಬಂಧನೆ ಕೈ ಬಿಡಬೇಕು.

ಪತ್ರಕರ್ತರಿಗೆ ಉಚಿತ ಟೋಲ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸಲಿದ್ದಾರೆ ಎಂದು ಮನವಿ ಮಾಡಿದ್ದಾರೆ.

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!