Police arrest thief involved in 97 house burglaries..!

97 ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಕಳ್ಳನ ಎಡೆಮುರಿ ಕಟ್ಟಿದ ಪೊಲೀಸರು..!

ಚಿಕ್ಕಬಳ್ಳಾಪುರ: ಇವನು ಅಂತಿಂಥ ಕಳ್ಳನಲ್ಲ (Thief), ಪ್ರತಿ ದಿನವೂ ಒಂದಲ್ಲ ಒಂದು ಮನೆಗೆ ಕನ್ನ ಹಾಕೋದು ಇವನ ಕಾಯಕ, ಅವನ ಮೇಲೆ ಆಂಧ್ರ ಹಾಗೂ ತೆಲಂಗಾಣದಲ್ಲಿ ಇರೋದು 97 ಮನೆಗಳ್ಳತನ ಪ್ರಕರಣಗಳು, ಹೀಗೆ ಕನ್ನ ಹಾಕಿದ ಹಣದಲ್ಲಿ ಕುಡಿದು ತೂರಾಡಿ ಮೋಜು ಮಸ್ತಿ ಮಾಡೋದೆ ಅವನಿಗೆ ಚಟ.

ಇನ್ನೂ ಸ್ನೇಹಿತ ನೊಡೋಕೆ ಅಂತ ಕರ್ನಾಟಕಕ್ಕೆ ಬಂದವನು ಕರ್ನಾಟಕದಲ್ಲೂ ಮನೆಗಳ್ಳತನ ಮಾಡಿ ಎಸ್ಕೇಪ್ ಆಗಿದ್ದ. ಇಂತಹ ಖತರ್ನಾಕ್ ಕಳ್ಳನನ್ನ ಕರ್ನಾಟಕ ಪೊಲೀಸರು ಎಡೆಮುರಿ ಕಟ್ಟಿ ಜೈಲಿಗಟ್ಟಿದ್ದಾರೆ..

ಯಾರು ಈ ಕಳ್ಳ..?

ಹೌದು 97 ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಈಗ ಕರ್ನಾಟಕ ಪೊಲೀಸರ ಅತಿಥಿಯಾಗಿ ಜೈಲು ಸೇರಿರೋ ಈ ಖತರ್ನಾಕ್ ಮನೆಗಳ್ಳನ ಹೆಸರು ರಾಹುಲ್ ಕುಮಾರ್ ಶರ್ಮಾ ಅಂತ, ಮೂಲತಃ ರಾಜಸ್ತಾನದವನಾದರೂ ತೆಲಂಗಾಣದಲ್ಲಿ ವಾಸವಾಗಿದ್ದಾನೆ.

15 ವರ್ಷಕ್ಕೆ ಮನೆಯಿಂದ ಹೊರ ಬಂದವನು ಮಾಡ್ತಿರೋ ವೃತ್ತಿಯೇ ಮನೆಗಳ್ಳತನ, ಸರಿಸುಮಾರು 38 ವರ್ಷದ ಈ ರಾಹುಲ್ ಇದುವರೆಗೂ ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ 97 ಕಡೆ ಮನೆಗಳ್ಳತನ ಮಾಡಿ ಖತರ್ನಾಕ್ ಕಳ್ಳನಾಗಿದ್ದಾನೆ.

ಇನ್ನೂ ಇದೇ ರಾಹುಲ್ ಕುಮಾರ್ ಶರ್ಮಾ ತನ್ನ ಸ್ನೇಹಿತ ಸೈಯದ್ ಷರೀಫ್ ಜೊತೆ ಸೇರಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣಕ್ಕೆ ಮತ್ತೋರ್ವ ಸ್ನೇಹಿತ ಅಲ್ಲಾ ಬಕಾಷ್ ನ ನೋಡೋಕೆ ಅಂತ ಬಂದಿದ್ದರು.. ಇನ್ನೂ ತೆಲಂಗಾಣದಿಂದ ಸ್ನೇಹಿತರು ಬಂದ್ರು ಅಂತ ಅಲ್ಲಾ ಬಕಾಷ್ ತಮ್ಮನಾಯಕನಹಳ್ಳಿ ಬಳಿಯ ಬಾರ್ ವೊಂದರಲ್ಲಿ ಪಾರ್ಟಿ ಸಹ ಕೊಡಿಸಿದ್ದ.

ಕುಡಿದು ಇನ್ನೇನು ತೆಲಂಗಾಣಕ್ಕೆ ವಾಪಾಸ್ ಹೋಗಬೇಕು ಅಂತ ಬಂದವರು, ಚಿಕ್ಕಬಳ್ಳಾಪುರದ ಅಣಕನೂರು ಬಳಿಯ ರಸ್ತೆ ಬದಿ ಬೇಕರಿವೊಂದರಲ್ಲಿ ಟೀ ಕುಡಿಯೋಕೆ ಅಂತ ಗಾಡಿ ನಿಲ್ಲಿಸಿದ್ರಂತೆ, ಈ ವೇಳೆ ಖತರ್ನಾಕ್ ಕಳ್ಳ ರಾಹುಲ್ ಕುಮಾರ್ ಶರ್ಮಾ ಮೂತ್ರ ವಿಸರ್ಜನೆಗೆ ಅಂತ ಹೋದವನು ರಸ್ತೆ ಬದಿಯಲ್ಲೇ ಬೀಗ ಹಾಕಿದ್ದ ಮನೆಯೊಂದು ಕಣ್ಣಿಗೆ ಕಂಡಿದ್ದೇ ತಡ, ಮನೆಯ ಬೀಗವನ್ನ ಕ್ಷಣ ಮಾತ್ರದಲ್ಲೇ ಒಡೆದು ಹಾಕಿ ಮನೆಯಲ್ಲಿದ್ದ ಚಿನ್ನಾಭರಣ ನಗದು ದೋಚಿದ್ದಾನೆ.

ಅಂದಹಾಗೆ ಅಣಕನೂರು ಗ್ರಾಮದ ಮುನಿಯಪ್ಪ ಮುನಿನರಸಮ್ಮ ದಂಪತಿ ಮನೆಗೆ ಬೀಗ ಹಾಕಿ ಹೊಲ ಕಟಾವಿಗೆ ಅಂತ ಜಮೀನಿನತ್ತ ತೆರಳಿದ್ರು, ಹೀಗಾಗಿ ಮನೆಯಲ್ಲಿ ಯಾರೂ ಇಲ್ಲ ಮನೆಗೆ ಬೀಗ ಹಾಕಿದೆ ಅಂತ ಖತರ್ನಾಕ್ ರಾಹುಲ್ ಕುಮಾರ್ ಶರ್ಮಾ ಹಿಂದೆ ಮುಂದೆ ಯೋಚನೆ ಮಾಡದೆ ಮನೆಯ ಬೀಗ ಹೊಡೆದು, ಬಿರುವಿನಲ್ಲಿದ್ದ 2 ಲಕ್ಷ 50 ಸಾವಿರ ನಗದು, 35 ಗ್ರಾಂ ತೂಕದ ಚಿನ್ನಾಭರಣಗಳನ್ನ ಕದ್ದಿದ್ದ.

ಇನ್ನು ಮಗಳ ಮದುವೆಗೆ ಅಂತ ಮಾಡಿಸಿದ್ದ ಚಿನ್ನಾಭರಣ ಕಳ್ಳನ ಪಾಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿ, ಫಿಂಗರ್ ಪ್ರಿಂಟ್ ಗಳ ಆಧಾರದ ಮೇಲೆ ಕಿಲಾಡಿ ಕಳ್ಳ ರಾಹುಲ್ ಕುಮಾರ್ ಶರ್ಮಾ, ಹಾಗೂ ಸೈಯದ್ ಷರೀಫ್ ಹಾಗೂ ಅಲ್ಲಾ ಬಕಾಷ್ ನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಇನ್ನೂ ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ 97 ಕಡೆ ಮನೆಗಳವು ಪ್ರಕರಣಗಳಲ್ಲಿ ಭಾಗಿಯಾಗಿರೋ ಈ ಖತರ್ನಾಕ್ ರಾಹುಲ್ ಕುಮಾರ್ ಶರ್ಮಾ ಇದೇ ಮೊದಲನೇ ಬಾರಿಗೆ ಕರ್ನಾಟಕದಲ್ಲಿ ಕಳ್ಳತನ ಮಾಡಿದ್ದ. ಆದ್ರೆ ಕರ್ನಾಟಕ ಪೊಲೀಸರು ಮೊದಲ ಪ್ರಕರಣದಲ್ಲೇ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ಬಂಧಿತನಿಂದ 20 ಗ್ರಾಂ ಚಿನ್ನಾಭರಣ ಹಾಗೂ 25 ಸಾವಿರ ನಗದು ಸೇರಿದಂತೆ ಕೃತ್ಯಕ್ಕೆ ಬಳಸಿದ ಬೈಕ್ ಸಹ ಸೀಝ್ ಮಾಡಿದ್ದಾರೆ.

ರಾಜಕೀಯ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ (Budget) ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್

[ccc_my_favorite_select_button post_id="119957"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!