Private channels that ignited a fire between Darshan-Sudeep fans..?!

ದರ್ಶನ್-ಸುದೀಪ್ ಅಭಿಮಾನಿಗಳ ನಡುವೆ ತಂದಿಟ್ಟ ಖಾಸಗಿ ಚಾನಲ್‌ಗಳು..?!

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ (Private channels) ನಟ ದರ್ಶನ್ (Darshan) ಅಭಿಮಾನಿಗಳನ್ನು ಕೆರಳಿಸುವುದು, ಮತ್ತೋರ್ವ ನಟ ಎತ್ತಿಕಟ್ಟುವುದನ್ನೇ ಕಾಯಕ ಮಾಡಿಕೊಂಡಿವೆ ಎಂಬುದು ವೀಕ್ಷಕರ ಆರೋಪವಾಗಿದೆ.

ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಅವರ ನಟನೆಯ “ದಿ ಡೆವಿಲ್” ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ‌.

ದರ್ಶನ್ ಅವರ ದಿ ಡೆವಿಲ್ ಸಿನಿಮಾ ಕುರಿತಂತೆ ನಕಾರಾತ್ಮಕ ವರದಿ ಪ್ರಸಾರ ಮಾಡಿದ್ದ ಕೆಲ ನ್ಯೂಸ್ ಚಾನಲ್‌ಗಳು, ಸಿನಿಮಾಗೆ ಹಿನ್ನಡೆ ಮಾಡಲು ಅನೇಕ ಕುತಂತ್ರ ನಡೆಸಿ ವಿಫಲವಾಗಿವೆ.

ಕಿಚ್ಚ ಸುದೀಪ್ ವಿರುದ್ಧವೂ ಷಡ್ಯಂತ್ರ..?!

ಇದರ ಬೆನ್ನಲ್ಲೇ ನಟ ಕಿಚ್ಚ ಸುದೀಪ್ ಅವರ ಮಾರ್ಕ್ ಸಿನಿಮಾ ಬಿಡುಗಡೆಯಾಗಲಿದ್ದು, ಈ ನಡುವೆ ಪ್ರೀ ರಿಲೀಸ್ ಈವೆಂಟ್ ನಲ್ಲಿ ಸುದೀಪ್ ಆಡಿದ ಮಾತನ್ನು ದರ್ಶನ್ಗೆ ಹೇಳಿದ್ದು ಎಂಬಂತೆ ಇಬ್ಬರು ನಟರ ಅಭಿಮಾನಿಗಳ ನಡುವೆ ಬೆಂಕಿ ಹಚ್ಚುವ ಕಾಯಕ ಮಾಡುತ್ತಿವೆ.

ಇಷ್ಟಕ್ಕೂ ಆಗಿದ್ದೇನು ಎಂದರೆ ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ ರಿಲೀಸ್ ಈವೆಂಟ್ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸುದೀಪ್ ಅವರು ಕೆಲ ಮಾತು ಹುಬ್ಬಳ್ಳಿಯಲ್ಲಿ ಮಾತನಾಡಿದ್ರೆ ಎಲ್ಲಿ ತಟ್ಟಬೇಕೋ ಅಲ್ಲಿ ತಟ್ಟುತ್ತೆ. ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿಯಾಗುತ್ತಿದೆ.

ನಾವು ಯುದ್ಧಕ್ಕೆ ಸಿದ್ಧ, ನಾವು ನಮ್ಮ ಮಾತಿಗೆ ಬದ್ದರಾಗಿದ್ದೇವೆ, ಸೈಲೆಂಟ್ ಆಗಿರೋದು ಒಳ್ಳೆಯದೋ ಕೆಟ್ಟದ್ದೋ ಗೊತ್ತಿಲ್ಲಾ. ಆದರೆ ನೀವು ನನ್ನ ಸ್ನೇಹಿತರು ಚೆನ್ನಾಗಿ ಇರಬೇಕು. ಅಂತ ಬಾಯಿ ಮುಚ್ಚಿಕೊಂಡು ಇದ್ದೆ, ಬಾಯಿ ಇಲ್ಲಾ ಅಂತ ಅಲ್ಲಾ ಎಂದು ಹೇಳಿದ್ದಾರೆ.

ಈ ಮಾತನ್ನು ಸಿನಿಮಾದ ಪೈರೆಸಿ ಕುರಿತಂತೆ ಹೇಳಿದ್ದಾರೆ ಎಂಬುದು ಸುದೀಪ್ ಬೆಂಬಲಿಗರ ಹೇಳಿಕೆಯಾಗಿದೆ. ಆದರೆ ನ್ಯೂಸ್ ಚಾನಲ್‌ಗಳು ಈ ಮಾತನ್ನು ದರ್ಶನ್ ಬೆಂಬಲಿಗರಿಗೇ ಹೇಳಿದ್ದು ಎಂಬಂತೆ ಸರಣಿ ವರದಿ ಮಾಡುವ ಮೂಲಕ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ತಂದಿಟ್ಟು ತಮಾಷೆ ನೋಡುತ್ತಿವೆ‌.

ದರ್ಶನ್-ಸುದೀಪ್ ಅಭಿಮಾನಿಗಳ ನಡುವೆ ತಂದಿಟ್ಟ ಖಾಸಗಿ ಚಾನಲ್‌ಗಳು..?!

ಉರಿಯುವ ಬೆಂಕಿಗೆ ತುಪ್ಪ..?!

ಅಲ್ಲದೆ ದಿ ಡೆವಿಲ್ ಸಿನಿಮಾ ಪ್ರಮೋಷನ್‌ನಲ್ಲಿ ಬ್ಯುಸಿ ಆಗಿರುವ ವಿಜಯಲಕ್ಷ್ಮಿ ದರ್ಶನ್ ಅವರ ಮಾತನ್ನು ಸುದೀಪ್ ಅವರಿಗೆ ಹೇಳಿದ್ದು ಎಂದು ಲಿಂಕ್ ಮಾಡಿ, ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿವೆ.

ಇನ್ನೂ ವಿಜಯಲಕ್ಷ್ಮಿ ದರ್ಶನ್ ಅವರು ದಾವಣಗೆರೆಯಲ್ಲಿ ಸಿನಿಮಾ ಯಶಸ್ಸಿನ ಸಂಭ್ರಮಾಚರಣೆ ವೇಳೆ ದರ್ಶನ್ ಇಲ್ಲದೆ ಇದ್ದಾಗ ಕೆಲ ವ್ಯಕ್ತಿಗಳು, ಅವರ ಬಗ್ಗೆ ಅವರ ಅಭಿಮಾನಿಗಳಾದ ನಿಮ್ಮ ಬಗ್ಗೆ ವೇದಿಕೆ ಮೇಲೆ, ಚಾನಲ್‌ಗಳಲ್ಲಿ ಕೂತು ಮಾತಾಡೋದು, ಹೊರಗಡೆ ಎಲ್ಲ ಮಾತಾಡೋದ್ ಮಾಡ್ತಾರೆ. ಆದರೆ ದರ್ಶನ್ ಹೊರಗಡೆ ಇದ್ದಾಗ ಇವರು ಬೆಂಗಳೂರಿನಲ್ಲಿ ಇರ್ತಾರೋ ಇಲ್ಲೋ, ಎಲ್ಲಿ ಮಾಯ ಆಗ್ತಾರೋ ಗೊತ್ತಾಗಲ್ಲ.

ಅವರು ಏನೆ ಮಾತಾಡುದ್ರು, ದರ್ಶನ್ ಅವರು ಹೇಳುವ ಹಾಗೆ, ಯಾರ್ ಏನೆ ಮಾತಾಡುದ್ರು ನಾವ್ ನೊಂದುಕೊಳ್ಳಲ್ಲ, ಕೋಪ ಮಾಡಿಕೊಳ್ಳಲ್ಲ, ನೀವು ಕೂಡ ಕೋಪ ಮಾಡ್ಕೋಬೇಡಿ, ಬೇಜಾರ್ ಮಾಡ್ಕೋಬೇಡಿ, ತಲೆ ಕೆಡಿಸಿಕೊಳ್ಳಬೇಡಿ.

ನಾವು ನಿಮ್ಮಿಂದ (ಅಭಿಮಾನಿಗಳು) ಬಯಸೋದು ನಿಮ್ಮ ಪ್ರೀತಿ, ಬೆಂಬಲ ಮಾತ್ರ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ. ಆದರೆ ಈ ಮಾತನ್ನು ವಿಜಯಲಕ್ಷ್ಮಿ ದರ್ಶನ್ ಅವರು ಕಿಚ್ಚ ಸುದೀಪ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ ಎಂದು ಕೆಲ ಖಾಸಗಿ ಚಾನಲ್ ಮತ್ತು ಪತ್ರಿಕೆಗಳು ಲಿಂಕ್ ಮಾಡಿವೆ.

ಈ ವಿಚಾರದಲ್ಲಿ ನೆನಪಿಡಬೇಕಾದ್ದು, ದರ್ಶನ್ ಹಾಗೂ ಅವರ ಅಭಿಮಾನಿಗಳ ವಿಚಾರವಾಗಿ ಪ್ರಥಮ್, ರಮ್ಯ ಸೇರಿದಂತೆ ಕೆಲ ನಟರ ಹೇಳಿಕೆ ಎಲ್ಲರಿಗೂ ತಿಳಿದಿರುವುದೇ ಆಗಿದೆ.

ಆದಾಗ್ಯೂ ವಿಜಯಲಕ್ಷ್ಮಿ ದರ್ಶನ್ ಅವರ ಮಾತನ್ನು ಸುದೀಪ್ ಅವರಿಗೆ ಹೇಳಿದ್ದು ಎಂಬಂತೆ (?) ಹಾಕಿ ಬಿಂಬಿಸಿ, ಉರಿಯುವ ಮನೆಯಲ್ಲಿ ಬೀಡಿ ಹಚ್ಚಿಕೊಳ್ಳುವ ಕುಯುಕ್ತಿ ಕೆಲ ಖಾಸಗಿ ಚಾನಲ್‌ಗಳದ್ದಾಗಿದೆ ಎಂಬುದು ಇಬ್ಬರು ನಟರ ಪ್ರಜ್ಞಾವಂತ ಅಭಿಮಾನಿಗಳ ಅಭಿಪ್ರಾಯ.

ಅಲ್ಲದೆ ಇಂದು ಮಾರ್ಕ್ ಸಿನಿಮಾ ಬಿಡುಗಡೆಗೆ ಎಲ್ಲಾ ಸಿದ್ಧತೆ ಪೂರ್ಣ ಎಂಬಂತೆ ಸುದೀಪ್ ಅವರು ಟ್ವಿಟರ್ ಖಾತೆಯಲ್ಲಿ ಆಲ್ ಸೆಟ್..?? ಕೇವಲ 3 ದಿನಗಳಲ್ಲಿ ಮಾರ್ಕ್ ಸಿನಿಮಾ ನಿಮ್ಮೊಂದಿಗೆ – ನಿಮ್ಮ ಸ್ಕ್ರೀನ್ ಅನ್ನು ಆಯ್ಕೆ ಮಾಡಿಕೊಳ್ಳಿ ಎಂದು ಬರೆದರಿದ್ದಾರೆ.

ಇಲ್ಲಿಯೂ ಇದನ್ನೂ ಸುದೀಪ್ ಅವರು ಪರೋಕ್ಷವಾಗಿ ವಿಜಯಲಕ್ಷ್ಮೀ ದರ್ಶನ್‌ಗೆ ಟಾಂಗ್ ನೀಡಿದ್ದಾ ಎಂದು ಬಿಂಬಿಸುವ ಮೂಲಕ ಸಂವಿಧಾನದ ನಾಲ್ಕನೆ ಅಂಗ ನಾವೇ, ನಮ್ಮಿಂದಲೇ ರಕ್ಷಣೆ ಎಂದು ಬಿಂಬಿಸಿಕೊಳ್ಳುವ ಕೆಲ ನ್ಯೂಸ್ ಚಾನಲ್‌ಗಳು ಹಾಗೂ ಪತ್ರಿಕೆಗಳು ವೃತ್ತಿ ಧರ್ಮ ಮರೆತು ವರ್ತಿಸುತ್ತಿವೆ.

ಸುದೀಪ್ ಆತ್ಮೀಯರು ಈವೆಂಟ್ ನಲ್ಲಿ ಸುದೀಪ್ ಅವರು ಮಾತನಾಡಿದ್ದು, ಪೈರೆಸಿ ಪಡೆಯ ವಿಚಾರವಾಗಿ ಎಂದು ಸ್ಪಷ್ಟವಾಗಿ ಹೇಳಿದರು. ಪದೇ ಪದೇ ದರ್ಶನ್ ಹಾಗೂ ಸುದೀಪ್ ಅವರ ನಡುವೆ ತಂದಿಟ್ಟು, ಅವರನ್ನು ಕೆರಳಿಸುವ ತಮ್ಮ ಚಾಳಿ ಮುಂದುವರಿಸುತ್ತಿವೆ. ಆದರೆ ಇದನ್ನು ಅರಿಯದೆ ಇಬ್ಬರ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣದಲ್ಲಿ ಸಮರವೇ ನಡೆಯುತ್ತಿದೆ.

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!