ದರ್ಶನ್-ಸುದೀಪ್ ಅಭಿಮಾನಿಗಳ ನಡುವೆ ತಂದಿಟ್ಟ ಖಾಸಗಿ ಚಾನಲ್‌ಗಳು..?!

Private channels that ignited a fire between Darshan-Sudeep fans..?!

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ (Private channels) ನಟ ದರ್ಶನ್ (Darshan) ಅಭಿಮಾನಿಗಳನ್ನು ಕೆರಳಿಸುವುದು, ಮತ್ತೋರ್ವ ನಟ ಎತ್ತಿಕಟ್ಟುವುದನ್ನೇ ಕಾಯಕ ಮಾಡಿಕೊಂಡಿವೆ ಎಂಬುದು ವೀಕ್ಷಕರ ಆರೋಪವಾಗಿದೆ.

ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಅವರ ನಟನೆಯ “ದಿ ಡೆವಿಲ್” ಸಿನಿಮಾ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ‌.

ದರ್ಶನ್ ಅವರ ದಿ ಡೆವಿಲ್ ಸಿನಿಮಾ ಕುರಿತಂತೆ ನಕಾರಾತ್ಮಕ ವರದಿ ಪ್ರಸಾರ ಮಾಡಿದ್ದ ಕೆಲ ನ್ಯೂಸ್ ಚಾನಲ್‌ಗಳು, ಸಿನಿಮಾಗೆ ಹಿನ್ನಡೆ ಮಾಡಲು ಅನೇಕ ಕುತಂತ್ರ ನಡೆಸಿ ವಿಫಲವಾಗಿವೆ.

ಕಿಚ್ಚ ಸುದೀಪ್ ವಿರುದ್ಧವೂ ಷಡ್ಯಂತ್ರ..?!

ಇದರ ಬೆನ್ನಲ್ಲೇ ನಟ ಕಿಚ್ಚ ಸುದೀಪ್ ಅವರ ಮಾರ್ಕ್ ಸಿನಿಮಾ ಬಿಡುಗಡೆಯಾಗಲಿದ್ದು, ಈ ನಡುವೆ ಪ್ರೀ ರಿಲೀಸ್ ಈವೆಂಟ್ ನಲ್ಲಿ ಸುದೀಪ್ ಆಡಿದ ಮಾತನ್ನು ದರ್ಶನ್ಗೆ ಹೇಳಿದ್ದು ಎಂಬಂತೆ ಇಬ್ಬರು ನಟರ ಅಭಿಮಾನಿಗಳ ನಡುವೆ ಬೆಂಕಿ ಹಚ್ಚುವ ಕಾಯಕ ಮಾಡುತ್ತಿವೆ.

ಇಷ್ಟಕ್ಕೂ ಆಗಿದ್ದೇನು ಎಂದರೆ ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ ರಿಲೀಸ್ ಈವೆಂಟ್ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸುದೀಪ್ ಅವರು ಕೆಲ ಮಾತು ಹುಬ್ಬಳ್ಳಿಯಲ್ಲಿ ಮಾತನಾಡಿದ್ರೆ ಎಲ್ಲಿ ತಟ್ಟಬೇಕೋ ಅಲ್ಲಿ ತಟ್ಟುತ್ತೆ. ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿಯಾಗುತ್ತಿದೆ.

ನಾವು ಯುದ್ಧಕ್ಕೆ ಸಿದ್ಧ, ನಾವು ನಮ್ಮ ಮಾತಿಗೆ ಬದ್ದರಾಗಿದ್ದೇವೆ, ಸೈಲೆಂಟ್ ಆಗಿರೋದು ಒಳ್ಳೆಯದೋ ಕೆಟ್ಟದ್ದೋ ಗೊತ್ತಿಲ್ಲಾ. ಆದರೆ ನೀವು ನನ್ನ ಸ್ನೇಹಿತರು ಚೆನ್ನಾಗಿ ಇರಬೇಕು. ಅಂತ ಬಾಯಿ ಮುಚ್ಚಿಕೊಂಡು ಇದ್ದೆ, ಬಾಯಿ ಇಲ್ಲಾ ಅಂತ ಅಲ್ಲಾ ಎಂದು ಹೇಳಿದ್ದಾರೆ.

ಈ ಮಾತನ್ನು ಸಿನಿಮಾದ ಪೈರೆಸಿ ಕುರಿತಂತೆ ಹೇಳಿದ್ದಾರೆ ಎಂಬುದು ಸುದೀಪ್ ಬೆಂಬಲಿಗರ ಹೇಳಿಕೆಯಾಗಿದೆ. ಆದರೆ ನ್ಯೂಸ್ ಚಾನಲ್‌ಗಳು ಈ ಮಾತನ್ನು ದರ್ಶನ್ ಬೆಂಬಲಿಗರಿಗೇ ಹೇಳಿದ್ದು ಎಂಬಂತೆ ಸರಣಿ ವರದಿ ಮಾಡುವ ಮೂಲಕ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ತಂದಿಟ್ಟು ತಮಾಷೆ ನೋಡುತ್ತಿವೆ‌.

ದರ್ಶನ್-ಸುದೀಪ್ ಅಭಿಮಾನಿಗಳ ನಡುವೆ ತಂದಿಟ್ಟ ಖಾಸಗಿ ಚಾನಲ್‌ಗಳು..?!

ಉರಿಯುವ ಬೆಂಕಿಗೆ ತುಪ್ಪ..?!

ಅಲ್ಲದೆ ದಿ ಡೆವಿಲ್ ಸಿನಿಮಾ ಪ್ರಮೋಷನ್‌ನಲ್ಲಿ ಬ್ಯುಸಿ ಆಗಿರುವ ವಿಜಯಲಕ್ಷ್ಮಿ ದರ್ಶನ್ ಅವರ ಮಾತನ್ನು ಸುದೀಪ್ ಅವರಿಗೆ ಹೇಳಿದ್ದು ಎಂದು ಲಿಂಕ್ ಮಾಡಿ, ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿವೆ.

ಇನ್ನೂ ವಿಜಯಲಕ್ಷ್ಮಿ ದರ್ಶನ್ ಅವರು ದಾವಣಗೆರೆಯಲ್ಲಿ ಸಿನಿಮಾ ಯಶಸ್ಸಿನ ಸಂಭ್ರಮಾಚರಣೆ ವೇಳೆ ದರ್ಶನ್ ಇಲ್ಲದೆ ಇದ್ದಾಗ ಕೆಲ ವ್ಯಕ್ತಿಗಳು, ಅವರ ಬಗ್ಗೆ ಅವರ ಅಭಿಮಾನಿಗಳಾದ ನಿಮ್ಮ ಬಗ್ಗೆ ವೇದಿಕೆ ಮೇಲೆ, ಚಾನಲ್‌ಗಳಲ್ಲಿ ಕೂತು ಮಾತಾಡೋದು, ಹೊರಗಡೆ ಎಲ್ಲ ಮಾತಾಡೋದ್ ಮಾಡ್ತಾರೆ. ಆದರೆ ದರ್ಶನ್ ಹೊರಗಡೆ ಇದ್ದಾಗ ಇವರು ಬೆಂಗಳೂರಿನಲ್ಲಿ ಇರ್ತಾರೋ ಇಲ್ಲೋ, ಎಲ್ಲಿ ಮಾಯ ಆಗ್ತಾರೋ ಗೊತ್ತಾಗಲ್ಲ.

ಅವರು ಏನೆ ಮಾತಾಡುದ್ರು, ದರ್ಶನ್ ಅವರು ಹೇಳುವ ಹಾಗೆ, ಯಾರ್ ಏನೆ ಮಾತಾಡುದ್ರು ನಾವ್ ನೊಂದುಕೊಳ್ಳಲ್ಲ, ಕೋಪ ಮಾಡಿಕೊಳ್ಳಲ್ಲ, ನೀವು ಕೂಡ ಕೋಪ ಮಾಡ್ಕೋಬೇಡಿ, ಬೇಜಾರ್ ಮಾಡ್ಕೋಬೇಡಿ, ತಲೆ ಕೆಡಿಸಿಕೊಳ್ಳಬೇಡಿ.

ನಾವು ನಿಮ್ಮಿಂದ (ಅಭಿಮಾನಿಗಳು) ಬಯಸೋದು ನಿಮ್ಮ ಪ್ರೀತಿ, ಬೆಂಬಲ ಮಾತ್ರ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ. ಆದರೆ ಈ ಮಾತನ್ನು ವಿಜಯಲಕ್ಷ್ಮಿ ದರ್ಶನ್ ಅವರು ಕಿಚ್ಚ ಸುದೀಪ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ ಎಂದು ಕೆಲ ಖಾಸಗಿ ಚಾನಲ್ ಮತ್ತು ಪತ್ರಿಕೆಗಳು ಲಿಂಕ್ ಮಾಡಿವೆ.

ಈ ವಿಚಾರದಲ್ಲಿ ನೆನಪಿಡಬೇಕಾದ್ದು, ದರ್ಶನ್ ಹಾಗೂ ಅವರ ಅಭಿಮಾನಿಗಳ ವಿಚಾರವಾಗಿ ಪ್ರಥಮ್, ರಮ್ಯ ಸೇರಿದಂತೆ ಕೆಲ ನಟರ ಹೇಳಿಕೆ ಎಲ್ಲರಿಗೂ ತಿಳಿದಿರುವುದೇ ಆಗಿದೆ.

ಆದಾಗ್ಯೂ ವಿಜಯಲಕ್ಷ್ಮಿ ದರ್ಶನ್ ಅವರ ಮಾತನ್ನು ಸುದೀಪ್ ಅವರಿಗೆ ಹೇಳಿದ್ದು ಎಂಬಂತೆ (?) ಹಾಕಿ ಬಿಂಬಿಸಿ, ಉರಿಯುವ ಮನೆಯಲ್ಲಿ ಬೀಡಿ ಹಚ್ಚಿಕೊಳ್ಳುವ ಕುಯುಕ್ತಿ ಕೆಲ ಖಾಸಗಿ ಚಾನಲ್‌ಗಳದ್ದಾಗಿದೆ ಎಂಬುದು ಇಬ್ಬರು ನಟರ ಪ್ರಜ್ಞಾವಂತ ಅಭಿಮಾನಿಗಳ ಅಭಿಪ್ರಾಯ.

ಅಲ್ಲದೆ ಇಂದು ಮಾರ್ಕ್ ಸಿನಿಮಾ ಬಿಡುಗಡೆಗೆ ಎಲ್ಲಾ ಸಿದ್ಧತೆ ಪೂರ್ಣ ಎಂಬಂತೆ ಸುದೀಪ್ ಅವರು ಟ್ವಿಟರ್ ಖಾತೆಯಲ್ಲಿ ಆಲ್ ಸೆಟ್..?? ಕೇವಲ 3 ದಿನಗಳಲ್ಲಿ ಮಾರ್ಕ್ ಸಿನಿಮಾ ನಿಮ್ಮೊಂದಿಗೆ – ನಿಮ್ಮ ಸ್ಕ್ರೀನ್ ಅನ್ನು ಆಯ್ಕೆ ಮಾಡಿಕೊಳ್ಳಿ ಎಂದು ಬರೆದರಿದ್ದಾರೆ.

ಇಲ್ಲಿಯೂ ಇದನ್ನೂ ಸುದೀಪ್ ಅವರು ಪರೋಕ್ಷವಾಗಿ ವಿಜಯಲಕ್ಷ್ಮೀ ದರ್ಶನ್‌ಗೆ ಟಾಂಗ್ ನೀಡಿದ್ದಾ ಎಂದು ಬಿಂಬಿಸುವ ಮೂಲಕ ಸಂವಿಧಾನದ ನಾಲ್ಕನೆ ಅಂಗ ನಾವೇ, ನಮ್ಮಿಂದಲೇ ರಕ್ಷಣೆ ಎಂದು ಬಿಂಬಿಸಿಕೊಳ್ಳುವ ಕೆಲ ನ್ಯೂಸ್ ಚಾನಲ್‌ಗಳು ಹಾಗೂ ಪತ್ರಿಕೆಗಳು ವೃತ್ತಿ ಧರ್ಮ ಮರೆತು ವರ್ತಿಸುತ್ತಿವೆ.

ಸುದೀಪ್ ಆತ್ಮೀಯರು ಈವೆಂಟ್ ನಲ್ಲಿ ಸುದೀಪ್ ಅವರು ಮಾತನಾಡಿದ್ದು, ಪೈರೆಸಿ ಪಡೆಯ ವಿಚಾರವಾಗಿ ಎಂದು ಸ್ಪಷ್ಟವಾಗಿ ಹೇಳಿದರು. ಪದೇ ಪದೇ ದರ್ಶನ್ ಹಾಗೂ ಸುದೀಪ್ ಅವರ ನಡುವೆ ತಂದಿಟ್ಟು, ಅವರನ್ನು ಕೆರಳಿಸುವ ತಮ್ಮ ಚಾಳಿ ಮುಂದುವರಿಸುತ್ತಿವೆ. ಆದರೆ ಇದನ್ನು ಅರಿಯದೆ ಇಬ್ಬರ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣದಲ್ಲಿ ಸಮರವೇ ನಡೆಯುತ್ತಿದೆ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]