Bashettihalli election results tomorrow:

ನಾಳೆ ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಫಲಿತಾಂಶ: ನಿಷೇಧಾಜ್ಞೆ ಜಾರಿ.. ಮೆರವಣಿಗೆ, ಪಟಾಕಿ ನಿಷೇಧ

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ (Bashettihalli election) ಹಾಗೂ ದೊಡ್ಡಬಳ್ಳಾಪುರ ನಗರಸಭೆಯ ವಾರ್ಡ್ ನಂಬರ್ 21ರ ಹೇಮಾವತಿ ಪೇಟೆಗೆ ಉಪಚುನಾವಣೆ ಸಂಬಂಧ ಡಿಸೆಂಬರ್ 24 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು ಮತದಾನ ನಡೆದಿದೆ.

ಕೈಗಾರಿಕಾ ಪ್ರದೇಶವನ್ನು ಹೊಂದಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್ಗಳಲ್ಲೂ ಸ್ಥಳಿಯರಷ್ಟೇ ರಾಜ್ಯದ ವಿವಿಧ ಜಿಲ್ಲೆಗಳ ಹಾಗೂ ಹೊರ ರಾಜ್ಯದವರು ಇಲ್ಲಿಗೆ ಬಂದು ನೆಲೆಸಿರುವ ಮತದಾರರ ಸಂಖ್ಯೆಯೂ ಸರಿಸಮನಾಗಿಯೇ ಇದೆ.

4 ವರ್ಷಗಳ ಬಳಿಕ ಚುನಾವಣೆ

ಗ್ರಾಮ ಪಂಚಾಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದ ನಾಲ್ಕು ವರ್ಷಗಳ ನಂತರ ಚುನಾವಣೆ ನಡೆದಿದ್ದರಿಂದ ಎಲ್ಲಾ ವಯೋಮಾನದ ಮತದಾರರು ಉತ್ಸಾಹದಿಂದಲೇ ಮತಗಟ್ಟೆಗಳ ಕಡೆಗೆ ಬಂದು ಮತಚಲಾಯಿಸಿದ್ದಾರೆ.

ಬೆಳಗ್ಗೆ 11 ರೊಳಗೆ ಫಲಿತಾಂಶ ಸಾಧ್ಯತೆ

ನಾಳೆ (ಡಿ.24) ಬೆಳಗ್ಗೆ 8 ಗಂಟೆಗೆ ಆರಂಭವಾಗಲಿರುವ ಮತ ಎಣಿಕೆ, ಮೊದಲ ಸುತ್ತಿನಲ್ಲಿ ಒಂದು ವಾರ್ಡ್ಗೆ ಮತ ಎಣಿಕೆಗೆ 15 ನಿಮಿಷಗಳ ಕಾಲ ಪಡೆಯಲಿದ್ದು, ಎರಡನೇ ಸುತ್ತಿನ ಬಳಿಕ ತೀವ್ರಗತಿಯಲ್ಲಿ ನಡೆದು ಸುಮಾರು 10
30 ಅಥವಾ 11 ರ ಒಳಾಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಮತ ಎಣಿಕೆ ಮುಂಜಾಗ್ರತೆ

ಮತ ಎಣಿಕೆ ಕಾರ್ಯವು ಸುಗಮವಾಗಿ, ಶಾಂತಿಯುತವಾಗಿ ನಡೆಯುವ ಸದುದ್ದೇಶದಿಂದ ಮತ್ತು ಮತದಾನದ ಪಾವಿತ್ರ್ಯತೆ ಕಾಪಾಡುವ ಹಿತದೃಷ್ಟಿಯಿಂದ ಮತ ಎಣಿಕೆ ಕೇಂದ್ರವಾದ ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ಮುಖ್ಯ ರಸ್ತೆಯಲ್ಲಿರುವ ಶ್ರೀ ಕೊಂಗಾಡಿಯಪ್ಪ ಪ್ರೌಢಶಾಲೆ ವ್ಯಾಪ್ತಿಯಲ್ಲಿ ಇಂದು ಸಂಜೆ 05.00 ಗಂಟೆಯಿಂದ ಡಿ.24 ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಅವಧಿಯಲ್ಲಿ ಮತ ಎಣಿಕೆ ಕೇಂದ್ರವಾದ ದೊಡ್ಡಬಳ್ಳಾಪುರದ ಇಸ್ಲಾಂಪುರ ಮುಖ್ಯ ರಸ್ತೆಯಲ್ಲಿ ಇರುವ ಶ್ರೀ ಕೊಂಗಾಡಿಯಪ್ಪ ಪ್ರೌಢಶಾಲೆ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದನ್ನು ನಿಷೇಧಿಸಿದೆ.

ಮತ ಎಣಿಕೆ ಕೇಂದ್ರ ವ್ಯಾಪ್ತಿಯಲ್ಲಿ ಡಿಸೆಂಬರ್ 23 ರಂದು ಸಂತೆ, ಜಾತ್ರೆಗಳನ್ನು ನಿಷೇಧಿಸಿದೆ. ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ಹಾಗೂ ಸ್ಫೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ಪ್ರತಿಬಂಧಿಸಿದೆ.

ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಮತ ಎಣಿಕೆ ಕೇಂದ್ರದ ವ್ಯಾಪ್ತಿಯಲ್ಲಿ ಪೂರ್ವ ನಿಯೋಜಿತ ಮದುವೆ, ಧಾರ್ಮಿಕ ಕಾರ್ಯಕ್ರಮ, ಮೆರವಣಿಗೆಗಳನ್ನು ಮತ್ತು ಶವ ಸಂಸ್ಕಾರಗಳನ್ನು ಚುನಾವಣಾ ನೀತಿ ಸಂಹಿತ ಉಲ್ಲಂಘನೆ ಆಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಡೆಸುವುದು.

ಮತ ಎಣಿಕೆ ಕೇಂದ್ರ ವ್ಯಾಪ್ತಿಯಲ್ಲಿ ಎಣಿಕೆ ಕಾರ್ಯ ಆದ ನಂತರ ಪಟಾಕಿ ಹೊಡೆಯುವುದು ನಿಷೇಧಿಸಿದೆ ಮತ್ತು ಚುನಾವಣಾ ಅಭ್ಯರ್ಥಿಗಳ ವಿಜಯೋತ್ಸವವನ್ನು ಆಚರಿಸುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಆದೇಶಿಸಿದ್ದಾರೆ.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!