ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ; “ಕೈ” ಹಿಡಿಯಲಿಲ್ಲ ಗ್ಯಾರಂಟಿ ಯೋಜನೆಗಳು..! ಉಪ ಚುನಾವಣೆ ಶೀಘ್ರ..?!

Bashettihalli election results: 8 BJP, 1 Congress, 1 independent candidate wins

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ); ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಿಂದ, ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಬಳಿಕ ನಡೆದ ಮೊದಲ ಚುನಾವಣೆಯಲ್ಲೇ (Bashettihalli election) ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ.

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ 19 ವಾರ್ಡ್ಗಳಲ್ಲಿ ಬಿಜೆಪಿ 14 ರಲ್ಲಿ ಜಯಗಳಿಸಿ ಅಧಿಕಾರ ಪಡೆದಿದೆ. ಕಾಂಗ್ರೆಸ್ ಮೂರು ಸ್ಥಾನ, ಜೆಡಿಎಸ್ ಹಾಗೂ ಸ್ವತಂತ್ರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ.

ನಗರಸಭೆಯ 21ನೇ ವಾರ್ಡ್ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನವೀನ್ ಕುಮಾರ್ ಜಯಗಳಿಸಿದ್ದಾರೆ.

ಡಿ.21 ರಂದು ನಡೆದಿದ್ದ ಪಟ್ಟಣ ಪಂಚಾಯಿತಿ ಚುನಾವಣೆಯ ಮತಗಳ ಎಣಿಕೆ ಬುಧವಾರ ಬೆಳಿಗ್ಗೆ 8 ಗಂಟೆಯಿಂದ ನಗರದ ಕೊಂಗಾಡಿಯಪ್ಪ ಪ್ರೌಢ ಶಾಲೆಯಲ್ಲಿ ನಡೆಯಿತು.

ಮತಗಳ ಎಣಿಕೆ ಕೇಂದ್ರದ ಬಳಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುವ ಮೂಲಕ ಪ್ರತಿ ವಾರ್ಡ್ನ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಪಕ್ಷದ ಬಾವುಟ ಬೀಸುವ ಮೂಲಕ ಜೈಕಾರ ಹಾಕಿ ಸಂಭ್ರಮಿಸಿದರು.

ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಇದುವರೆಗೂ ಜೆಡಿಎಸ್ ಭದ್ರಕೋಟೆಯಾಗಿತ್ತು. 15 ವರ್ಷಗಳ ಕಾಲ ಜೆಡಿಎಸ್ ಅಭ್ಯರ್ಥಿಗಳೆ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದರು. ಆದರೆ ಕ್ಷೇತ್ರದಲ್ಲಿ ಬದಲಾದ ರಾಜಕೀಯ, ತಾಲ್ಲೂಕು ಮುಖಂಡರಲ್ಲಿ ಇಲ್ಲದ ಒಗ್ಗಟ್ಟು ಹಾಗೂ ಸಂಘಟನೆ ಕೋರತೆಯಿಂದಾಗಿ ಅತ್ಯಂತ ಹೀನಾಯ ಸ್ಥಿತಿಯಲ್ಲಿ ಕೇಲವ ಒಬ್ಬ ಅಭ್ಯರ್ಥಿ ಮಾತ್ರ ಜಯಗಳಿಸಲು ಸಾಧ್ಯವಾಗಿದೆ.

ಜಿದ್ದಾಜಿದ್ದಿನ ಹಾಗೂ ‘ಸಕಲ’ವ್ಯವಸ್ಥೆಗಳ ರಾಜಕೀಯ ಹೋರಾಟದ ನಡುವೆಯೂ ಒಬ್ಬ ಅಭ್ಯರ್ಥಿ ಸ್ವತಂತ್ರವಾಗಿ ಆಯ್ಕೆಯಾಗಿರುವುದು ಅಭ್ಯರ್ಥಿಯ ಸ್ವಂತ ವರ್ಚಸ್ಸು ಕಾರಣವಾಗಿದೆ.

ಕಾರ್ಯಕರ್ತರ ಸಂಭ್ರಮ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಅಧಿಕಾರದ ಗದ್ದುಗೆ ಪಡೆಯುವುದು ಖಚಿತವಾಗುತ್ತಿದ್ದಂತೆ ಶಾಸಕ ಹಾಗೂ ಬಿಜೆಪಿ ಯುವ ಮೋರ್ಚಾರ ರಾಜ್ಯ ಘಟಕದ ಅಧ್ಯಕ್ಷ ಧೀರಜ್ ಮುನಿರಾಜು ಮತ ಎಣೀಕೆ ಕೇಂದ್ರದ ಬಳಿ ಬಂದರು.

ಕಾರ್ಯಕರ್ತರು ಶಾಸಕರು ಹಾಗೂ ಅಭ್ಯರ್ಥಿಗಳನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸುವ ಮೂಲಕ ಮೆರವಣಿಗೆ ನಡೆಸಿದರು.

ಕೈ ಹಿಡಿಯಲಿಲ್ಲ ಗ್ಯಾರಂಟಿ ಯೋಜನೆಗಳು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣ ಪ್ರಚಾರ ಸಭೆಗಳಲ್ಲಿ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಅದರಲ್ಲೂ ಗೃಹಲಕ್ಷ್ಮೀ, ಉಚಿತ ವಿದ್ಯುತ್ ನೀಡುತ್ತಿರುವ ಬಗ್ಗೆಯೇ ಹೇಳುತ್ತಿದ್ದರು. ಆದರೆ ಜನತೆ ಗ್ಯಾರಂಟಿ ಮರೆತು, ಚುನಾವಣೆ ಹಿಂದಿನ ದಿನವೇ ಮುಖ್ಯ ಎಂಬಂತಿದ್ದ ಕಾರಣ ಮತಗಳಾಗಿ ಪರಿವರ್ತನೆಯಾಗುವಲ್ಲಿ ವಿಫಲವಾಗಿದ್ದು, ಕಾಂಗ್ರೆಸ್ ಮೂರು ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ ಎಂಬ ಮಾತು ವ್ಯಾಪಕವಾಗಿದೆ.

ಯಶಸ್ಸು ಕಾಣದ ಭಿನ್ನಮತ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಬಿಜೆಪಿ ಪಾಲಿಗೆ ಸಂಘಟನೆಗೆ ಹೊಸ ಉತ್ಸಾಹ ಮೂಡಿಸಿರುವುದು ಒಂದು ಕಡೆಯಾದರೆ, ಇಲ್ಲಿಂದ ಮುಂದೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ನಂತರದ ವಿಧಾನಸಭೆ ಚುನಾವಣೆಗೂ ಭಿನ್ನಮತದ ಮುನ್ನುಡಿ ಬರೆದಿದೆ ಎನ್ನಲಾಗುತ್ತಿದೆ.

ಬಾಶೆಟ್ಟಿಹಳ್ಳಿ ಭಾಗದಲ್ಲಿ ತಮ್ಮ ಪ್ರಭಾವ ಹೊಂದಿರುವ ಬಿಜೆಪಿ ಮುಖಂಡ ಹಾಗೂ ಬಮೂಲ್ ನಿರ್ದೇಶಕ ಬಿ.ಸಿ.ಆನಂದಕುಮಾರ್ ಪಕ್ಷದ ಪರವಾಗಿ ಎಲ್ಲೂ ಶಾಸಕ ಧೀರಜ್ ಅವರೊಂದಿಗೆ ಪ್ರಚಾರದಲ್ಲಿ ಕಾಣಿಸಿಕೊಂಡಿಲ್ಲ.

ಬದಲಿಗೆ ತಮ್ಮ ಹತ್ತಿರದ ಸಂಬಂಧಿ ಎಳ್ಳುಪುರ ವಾರ್ಡ್ನಲ್ಲಿ ಅಂಬರೀಶ್ ಸೇರಿದಂತೆ ಮೂರು ವಾರ್ಡ್ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಕೆಲ ಫೇಸ್‌ಬುಕ್‌ ಮಾಧ್ಯಮಗಳಲ್ಲಿ ಪ್ರಚಾರವನ್ನು ನಡೆಸಿದರು ಎಂದು ವರದಿಯಾಗಿದೆ.

ಇದರಿಂದಾಗಿ ನಿರಾಯಸವಾಗಿ ಜಯಗಳಿಸುವ ಅವಕಾಶ ಇದ್ದ ಬಿಜೆಪಿ ಅಭ್ಯರ್ಥಿಗಳು ಹಾಗೂ ಮುಖಂಡರು ತೀವ್ರ ತರಹನಾದ ಕಸರತ್ತುಗಳನ್ನು ನಡೆಸುವಂತೆ ಹಾಗೂ ಅಭ್ಯರ್ಥಿಗಳಿಗೆ ಚುನಾವಣೆ ದುಬಾರಿಯಾಗುವಂತೆ ಮಾಡಿತ್ತು.

ಅಂತಿಮವಾಗಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗಳಿಸುವ ಮೂಲಕ ಅಧಿಕಾರದ ಚುಕ್ಕಣಿ ಹಿಡಿದಿದೆ. ಆದರೆ ಈ ಭಿನ್ನಮತ ಶಮನವಾಗುತ್ತದ ಕಾದು ನೋಡಬೇಕಿದೆ.

ಉಪ ಚುನಾವಣೆ ಶೀಘ್ರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಎಸ್.ಟಿ ಅಭ್ಯರ್ಥಿಗೆ, ಉಪಾಧ್ಯಕ್ಷ ಸ್ಥಾನ ಬಿಸಿಎಂ ‘ಎ’ ಅಭ್ಯರ್ಥಿಗೆ ಮೀಸಲಾಗಿದೆ. ಹೀಗಾಗಿ ಎಸ್.ಟಿ ಅಭ್ಯರ್ಥಿ ಗೆದ್ದರೆ ಅಧ್ಯಕ್ಷ ಸ್ಥಾನ ಖಚಿತ ಎನ್ನುವ ಕಾರಣದಿಂದಾಗಿ ಎಸ್.ಟಿ.ಸಮುದಾಯದ ಮುಖಂಡ ಪ್ರೇಮ್ ಕುಮಾರ್ ವಾರ್ಡ್ ಸಂಖ್ಯೆ 2 ಹಾಗೂ 14 ಎರಡೂ ಕಡೆಯಲ್ಲೂ ಬಿಜೆಪಿ ವತಿಯಿಂದ ಸ್ಪರ್ಧಿಸಿದ್ದರು. ಈ ಎರಡೂ ವಾರ್ಡ್ಗಳಲ್ಲಿ ಜಯಗಳಿಸಿದ್ದಾರೆ.

ಒಟ್ಟಾರೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಫಲಿತಾಂಶ ಒಂದು ಉಪಚುನಾವಣೆ ಸೇರಿದಂತೆ ಮುಂಬರುವ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಹಲವು ರಾಜಕೀಯ ಬದಲಾವಣೆ ಕಾರಣವಾಗಲಿದೆ ಎಂಬ ಮಾತು ವ್ಯಾಪಕವಾಗಿದೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]