ದೊಡ್ಡಬಳ್ಳಾಪುರ: ಆರೂಢಿಯಲ್ಲಿ ನೀರಿಗೆ ಪರದಾಟ.. ಟ್ಯಾಂಕರ್‌ಗಳಿಗೆ ಮೊರೆ

Doddaballapura: Water problem in Arudi.. appeal to tankers

ದೊಡ್ಡಬಳ್ಳಾಪುರ: ಬೇಸಿಗೆ ಆರಂಭಕ್ಕೂ ಮುನ್ನವೇ ತಾಲೂಕಿನ ಆರೂಢಿ ಗ್ರಾಮದಲ್ಲಿ ನೀರಿನ ಬವಣೆ (Water problem) ತೀವ್ರವಾಗಿದೆ, ಇದು ಇಂದಿನದ್ದು ಮಾತ್ರ ಎಂದುಕೊಂಡರೆ ತಪ್ಪು, ಹಲವು ತಿಂಗಳಿಂದ ಆರೂಢಿ ಗ್ರಾಮದ ಒಂದು ವಾರ್ಡ್ ಜನತೆ ಇದೇ ಸಮಸ್ಯೆಯಿಂದ ಪರದಾಡುತ್ತಿದ್ದಾರೆ.

ಇನ್ನೂ ಆರೂಢಿಯಲ್ಲಿ ನೀರಿನ ಕೊರತೆ ಇದೆಯಾ ಎಂದರೆ ಅದು ಸುಳ್ಳು, ಏಕೆಂದರೆ ಅಗತ್ಯ ಬೋರ್‌ವೆಲ್ ಗಳಿದ್ದು, ಹೆಚ್ಚುವರಿ ಬೋರ್ವೆಲ್ ಕೂಡ ಇದೆ.

ಮತ್ತೆ ಸಮಸ್ಯೆ ಹೇಗೆ..? ಎಲ್ಲಿ..? ಎಂಬುದು ನೋಡುವುದಾದರೆ, ಆರೂಢಿಯ ಗ್ರಾಮದೇವತೆ ವಡಸಲಮ್ಮ ದೇವಿ ರಸ್ತೆಯಲ್ಲಿನ ಡಾಲರ್ಸ್ ಕಾಲೋನಿ ಜನತೆ ಬಹು ತಿಂಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಈ ವ್ಯಾಪ್ತಿಗೆ ಸುಮಾರು ಮುಕ್ಕಾಲು ಕಿಲೋಮೀಟರ್ ದೂರದಿಂದ ನೀರು ಪೂರೈಸಲಾಗುತ್ತದೆ. ಆದರೆ ಗ್ರಾಮದ ಮೂಲಕ ಹಾದು ಹೋಗಿ, ಈ ವ್ಯಾಪ್ತಿಗೆ ನೀರು ಬರುವುದು ತೀರ ಕಡಿಮೆ ಪ್ರಮಾಣ.

ಇದರಿಂದಾಗಿ ಈ ವ್ಯಾಪ್ತಿಯಲ್ಲಿ ವಾಸವಾಗಿರುವ ಸುಮಾರು 100 ಕ್ಕೂ ಮನೆಗಳ ಜನತೆ ಪರದಾಟ, ನೀರಿಗಾಗಿ ಮಹಿಳೆಯರ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ.

ಈ ಕುರಿತಂತೆ ಹಲವು ಬಾರಿ ಗ್ರಾಮಪಂಚಾಯಿತಿಗೆ ಮನವಿ ಸಲ್ಲಿಸಲಾಗಿದ್ದು, ಗ್ರಾಪಂ ಅಧ್ಯಕ್ಷೆ ಗಂಗರಾಜಮ್ಮ ರಾಮಕೃಷ್ಣಪ್ಪ, ಸದಸ್ಯ ನವೀನ್ ಕುಮಾರ್, ಪಿಡಿಒ ಮಲ್ಲೇಶ್ ಅವರುಗಳು ಈ ವ್ಯಾಪ್ತಿಯಲ್ಲಿ ಶಾಶ್ವತ ಪರಿಹಾರ ದೊರಕಿಸಲು ಶಾಸಕರ ಅನುದಾನದಲ್ಲಿ ನೂತನ ಬೋರ್ ವೆಲ್ ಕೊರೆಸಿದ್ದು, ಕೆಲವೇ ಅಡಿಯಲ್ಲಿ ಭರ್ಜರಿ ನೀರು ಸಿಕ್ಕಿದ್ದು, ಅಂತೆಯೇ ಕೆಲವೇ ದಿನಗಳಲ್ಲಿ ಮೋಟರ್, ಪಂಪಸೆಟ್ ಅಳವಡಿಕೆ ಕೂಡ ನಡೆದಿದೆ. ಆದರೆ ವಿದ್ಯುತ್..?

ಇದೇ ಈಗ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಈ ಬೋರ್ವೆಲ್ಗೆ ವಿದ್ಯುತ್ ಪೂರೈಕೆ ಮಾಡಲು ಟಿಸಿ ಅಗತ್ಯವಾಗಿದೆ. ಆದರೆ ಸಮೀಪದಲ್ಲಿ ಯಾವುದೇ ಟಿಸಿ ಇಲ್ಲದೆ ಇರುವುದು, ಬೋರ್ ವೆಲ್ ಕೊರೆಸಿ ತಿಂಗಳುಗಳು ಕಳೆದರು ಪ್ರಯೋಜನಕ್ಕೆ ಇಲ್ಲವಾದಂತಾಗಿದೆ.

ಇನ್ನೂ ತ್ವರಿತವಾಗಿ ಟಿಸಿ ಅಳವಡಿಸಲು, ತಾತ್ಕಾಲಿಕ ಸಂಪರ್ಕ ಪಡೆದುಕೊಳ್ಳಲು ಬೆಸ್ಕಾಂನಿಂದ ಅನುಮತಿ ದೊಡ್ಡಬಳ್ಳಾಪುರ ತಾಲೂಕು ಪಂಚಾಯತಿ ಇಒ ಅವರಿಗೆ ಗ್ರಾಮಪಂಚಾಯಿತಿ ವತಿಯಿಂದ ಪತ್ರ ಬರೆಯಲಾಗಿದೆ. ಆದರೆ ಅದೂ ಕೂಡ ದಿನ ತಳ್ಳುತ್ತಲೆ ಇದೆ.

ಕಡಿಮೆ ಪ್ರಮಾಣ ನೀರಿನ ಪೂರೈಕೆಯಿಂದಾಗಿ ಈ ವಾರ್ಡ್ ಜನತೆ ನೀರಿಗಾಗಿ ವಿಧಿಯಿಲ್ಲದೆ ಟ್ಯಾಂಕರ್ ನೀರಿಗೆ ಆಶ್ರಯಿಸಬೇಕಾದ ಅನಿರ್ವಾರ್ಯತೆ ಎದುರಾಗಿದೆ. ಈ ಕುರಿತಂತೆ ಕೂಡಲೇ ದೊಡ್ಡಬಳ್ಳಾಪುರ ತಾಪಂ ಇಒ ಅವರು ಬೆಸ್ಕಾಂ ಮೂಲಕ ಅನುಮತಿ ದೊರಕಿಸಿದರೆ ಈ ವ್ಯಾಪ್ತಿಯ ಜನರಿಗೆ ಶಾಶ್ವತ ಪರಿಹಾರ ದೊರಕಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ದೊಡ್ಡಬಳ್ಳಾಪುರ BJPಗೆ ಶಾಕ್: ನಗರಸಭೆ ಸದಸ್ಯ ದಿಢೀರ್ ರಾಜೀನಾಮೆ..?

ಅಚ್ಚರಿಯ ಬೆಳವಣಿಗೆಯಲ್ಲಿ ಎಸ್. ಪದ್ಮನಾಭ (S. Padmanabha) ಅವರು ದೊಡ್ಡಬಳ್ಳಾಪುರ ನಗರಸಭೆ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ದೊಡ್ಡಬಳ್ಳಾಪುರ ಬಿಜೆಪಿಗೆ (Doddaballapur BJP) ಶಾಕ್ ನೀಡಿದ್ದಾರೆ

[ccc_my_favorite_select_button post_id="120682"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ದೊಡ್ಡಬಳ್ಳಾಪುರ: ಪಾಲನಜೋಗಿಹಳ್ಳಿ ಬಳಿ ಮತ್ತೆ ಅಪಘಾತ.. ಇಬ್ಬರಿಗೆ ಗಾಯ..!

ನಿನ್ನೆಯಷ್ಟೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಬೈಕ್ ಸವಾರ ಸಾವನಪ್ಪಿರುವ ಬೆನ್ನಲ್ಲೇ, ರಸ್ತೆ ಬದಿ ನಿಂತಿದ್ದ ಆಟೋಗೆ ದ್ವಿಚಕ್ರ ವಾಹನ ಡಿಕ್ಕಿ (Accident) ಹೊಡೆದ ಪರಿಣಾಮ, ಬೈಕ್ ಸವಾರ ಹಾಗೂ ರಸ್ತೆಯ ಬದಿ ನಿಂತಿದ್ದ ಮಹಿಳೆಗೆ

[ccc_my_favorite_select_button post_id="120677"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]