Doddaballapura: Water problem in Arudi.. appeal to tankers

ದೊಡ್ಡಬಳ್ಳಾಪುರ: ಆರೂಢಿಯಲ್ಲಿ ನೀರಿಗೆ ಪರದಾಟ.. ಟ್ಯಾಂಕರ್‌ಗಳಿಗೆ ಮೊರೆ

ದೊಡ್ಡಬಳ್ಳಾಪುರ: ಬೇಸಿಗೆ ಆರಂಭಕ್ಕೂ ಮುನ್ನವೇ ತಾಲೂಕಿನ ಆರೂಢಿ ಗ್ರಾಮದಲ್ಲಿ ನೀರಿನ ಬವಣೆ (Water problem) ತೀವ್ರವಾಗಿದೆ, ಇದು ಇಂದಿನದ್ದು ಮಾತ್ರ ಎಂದುಕೊಂಡರೆ ತಪ್ಪು, ಹಲವು ತಿಂಗಳಿಂದ ಆರೂಢಿ ಗ್ರಾಮದ ಒಂದು ವಾರ್ಡ್ ಜನತೆ ಇದೇ ಸಮಸ್ಯೆಯಿಂದ ಪರದಾಡುತ್ತಿದ್ದಾರೆ.

ಇನ್ನೂ ಆರೂಢಿಯಲ್ಲಿ ನೀರಿನ ಕೊರತೆ ಇದೆಯಾ ಎಂದರೆ ಅದು ಸುಳ್ಳು, ಏಕೆಂದರೆ ಅಗತ್ಯ ಬೋರ್‌ವೆಲ್ ಗಳಿದ್ದು, ಹೆಚ್ಚುವರಿ ಬೋರ್ವೆಲ್ ಕೂಡ ಇದೆ.

ಮತ್ತೆ ಸಮಸ್ಯೆ ಹೇಗೆ..? ಎಲ್ಲಿ..? ಎಂಬುದು ನೋಡುವುದಾದರೆ, ಆರೂಢಿಯ ಗ್ರಾಮದೇವತೆ ವಡಸಲಮ್ಮ ದೇವಿ ರಸ್ತೆಯಲ್ಲಿನ ಡಾಲರ್ಸ್ ಕಾಲೋನಿ ಜನತೆ ಬಹು ತಿಂಗಳಿಂದ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ.

ಈ ವ್ಯಾಪ್ತಿಗೆ ಸುಮಾರು ಮುಕ್ಕಾಲು ಕಿಲೋಮೀಟರ್ ದೂರದಿಂದ ನೀರು ಪೂರೈಸಲಾಗುತ್ತದೆ. ಆದರೆ ಗ್ರಾಮದ ಮೂಲಕ ಹಾದು ಹೋಗಿ, ಈ ವ್ಯಾಪ್ತಿಗೆ ನೀರು ಬರುವುದು ತೀರ ಕಡಿಮೆ ಪ್ರಮಾಣ.

ಇದರಿಂದಾಗಿ ಈ ವ್ಯಾಪ್ತಿಯಲ್ಲಿ ವಾಸವಾಗಿರುವ ಸುಮಾರು 100 ಕ್ಕೂ ಮನೆಗಳ ಜನತೆ ಪರದಾಟ, ನೀರಿಗಾಗಿ ಮಹಿಳೆಯರ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ.

ಈ ಕುರಿತಂತೆ ಹಲವು ಬಾರಿ ಗ್ರಾಮಪಂಚಾಯಿತಿಗೆ ಮನವಿ ಸಲ್ಲಿಸಲಾಗಿದ್ದು, ಗ್ರಾಪಂ ಅಧ್ಯಕ್ಷೆ ಗಂಗರಾಜಮ್ಮ ರಾಮಕೃಷ್ಣಪ್ಪ, ಸದಸ್ಯ ನವೀನ್ ಕುಮಾರ್, ಪಿಡಿಒ ಮಲ್ಲೇಶ್ ಅವರುಗಳು ಈ ವ್ಯಾಪ್ತಿಯಲ್ಲಿ ಶಾಶ್ವತ ಪರಿಹಾರ ದೊರಕಿಸಲು ಶಾಸಕರ ಅನುದಾನದಲ್ಲಿ ನೂತನ ಬೋರ್ ವೆಲ್ ಕೊರೆಸಿದ್ದು, ಕೆಲವೇ ಅಡಿಯಲ್ಲಿ ಭರ್ಜರಿ ನೀರು ಸಿಕ್ಕಿದ್ದು, ಅಂತೆಯೇ ಕೆಲವೇ ದಿನಗಳಲ್ಲಿ ಮೋಟರ್, ಪಂಪಸೆಟ್ ಅಳವಡಿಕೆ ಕೂಡ ನಡೆದಿದೆ. ಆದರೆ ವಿದ್ಯುತ್..?

ಇದೇ ಈಗ ಯಕ್ಷ ಪ್ರಶ್ನೆಯಾಗಿ ಉಳಿದಿದೆ. ಈ ಬೋರ್ವೆಲ್ಗೆ ವಿದ್ಯುತ್ ಪೂರೈಕೆ ಮಾಡಲು ಟಿಸಿ ಅಗತ್ಯವಾಗಿದೆ. ಆದರೆ ಸಮೀಪದಲ್ಲಿ ಯಾವುದೇ ಟಿಸಿ ಇಲ್ಲದೆ ಇರುವುದು, ಬೋರ್ ವೆಲ್ ಕೊರೆಸಿ ತಿಂಗಳುಗಳು ಕಳೆದರು ಪ್ರಯೋಜನಕ್ಕೆ ಇಲ್ಲವಾದಂತಾಗಿದೆ.

ಇನ್ನೂ ತ್ವರಿತವಾಗಿ ಟಿಸಿ ಅಳವಡಿಸಲು, ತಾತ್ಕಾಲಿಕ ಸಂಪರ್ಕ ಪಡೆದುಕೊಳ್ಳಲು ಬೆಸ್ಕಾಂನಿಂದ ಅನುಮತಿ ದೊಡ್ಡಬಳ್ಳಾಪುರ ತಾಲೂಕು ಪಂಚಾಯತಿ ಇಒ ಅವರಿಗೆ ಗ್ರಾಮಪಂಚಾಯಿತಿ ವತಿಯಿಂದ ಪತ್ರ ಬರೆಯಲಾಗಿದೆ. ಆದರೆ ಅದೂ ಕೂಡ ದಿನ ತಳ್ಳುತ್ತಲೆ ಇದೆ.

ಕಡಿಮೆ ಪ್ರಮಾಣ ನೀರಿನ ಪೂರೈಕೆಯಿಂದಾಗಿ ಈ ವಾರ್ಡ್ ಜನತೆ ನೀರಿಗಾಗಿ ವಿಧಿಯಿಲ್ಲದೆ ಟ್ಯಾಂಕರ್ ನೀರಿಗೆ ಆಶ್ರಯಿಸಬೇಕಾದ ಅನಿರ್ವಾರ್ಯತೆ ಎದುರಾಗಿದೆ. ಈ ಕುರಿತಂತೆ ಕೂಡಲೇ ದೊಡ್ಡಬಳ್ಳಾಪುರ ತಾಪಂ ಇಒ ಅವರು ಬೆಸ್ಕಾಂ ಮೂಲಕ ಅನುಮತಿ ದೊರಕಿಸಿದರೆ ಈ ವ್ಯಾಪ್ತಿಯ ಜನರಿಗೆ ಶಾಶ್ವತ ಪರಿಹಾರ ದೊರಕಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂ.ಎಸ್.ಜಿ.ಪಿ‌ (MSGP) ಕಸ ವಿಲೇವಾರಿ ಘಟಕಕ್ಕೆ ಬೃಹತ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಿಂದ ಕಸ ತುಂಬಿಕೊಂಡು‌ ಹೆಚ್ಚುವರಿ ಲಾರಿಗಳು ಬರುತ್ತವೆ ಎಂಬ ಆತಂಕದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ತಾಲೂಕಿನ ದೊಡ್ಡಮಂಕಲಾಳ

[ccc_my_favorite_select_button post_id="119498"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!