Pea Sogadu should become an attraction in the international market: DCM D.K. Shivakumar

ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ರೈತ ಸಂತೆಯಲ್ಲಿ ಮಿಲ್ಕಿ ಮಶ್ರೂಮ್, ಬೇಲದ ಹಣ್ಣು, ತುಪ್ಪ, ಅವರೇಕಾಯಿ ತಿನಿಸು, ಅವರೆಕಾಯಿ ಬಿಡಿಸುವ ಯಂತ್ರ, ನಾಟಿ ಬೆಲ್ಲ, ಸೀಬೆ ಹಣ್ಣುಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಮನಸೋತರು.

ರೈತ ಸಂತೆ ಕಾರ್ಯಕ್ರಮದಲ್ಲಿ ರೈತರ ಉತ್ಪನ್ನಗಳ ಮಾರಾಟ ಮಳಿಗೆಗಳಿಗೆ ಖುದ್ದಾಗಿ ಭೇಟಿ ನೀಡಿದ ಶಿವಕುಮಾರ್ ಅವರು ರೈತರೊಂದಿಗೆ ಮಾತುಕತೆ ನಡೆಸಿದರು. ಅವರ ಉತ್ಪನ್ನಗಳ ಮಾಹಿತಿ ಪಡೆದರು. ನಾಟಿ ಬೆಲ್ಲ ಸೇರಿದಂತೆ ಕೆಲವು ತಿನಿಸುಗಳನ್ನು ಸವಿದರು. ಖರೀದಿ ಮಾಡಿದರು.

ರೈತರೊಬ್ಬರು ಬೇಲ್ದಣ್ಣಿನ ಜ್ಯೂಸ್ ಮಾಡಿ ತಂದು ಕೊಟ್ಟಾಗ, ಸಂತೋಷಗೊಂಡ ಶಿವಕುಮಾರ್ ಅವರು, “ಬೇಲ್ದಣ್ಣು ಎಂದರೆ ನನಗೆ ಪಂಚಪ್ರಾಣ. ಬೇಲದ ಹಣ್ಣುಗಳನ್ನು ನಮ್ಮ ಮನೆಗೂ ಕಳುಹಿಸಿಕೊಡಿ, ಮನೆಯಲ್ಲಿ ಎಲ್ಲರೂ ಸವಿಯುತ್ತೇವೆ” ಎಂದು ಹೇಳಿದರು.

ಇನ್ನು ಕೃಷಿ ವಿವಿ ಅವರು ಕಂಡು ಹಿಡಿದಿರುವ ಅವರೆಕಾಯಿ ಬಿಡಿಸುವ ಯಂತ್ರವನ್ನು ಪರಿಶೀಲಿಸಿದ ಶಿವಕುಮಾರ್ ಅವರು ಅಲ್ಲೇ ನಿಂತು ಅವರೆಕಾಯಿ ಬಿಡಿಸುವ ಯಂತ್ರದ ಚಮತ್ಕಾರ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನು ನಾಗಮಂಗಲ ತಾಲ್ಲೂಕಿನ ರೈತರು ಸೇರಿ ಸಾವಯವ ಪದ್ಧತಿ ಮೂಲಕ ಬೆಳೆದ ವಿವಿಧ ರೀತಿಯ ಅಣಬೆಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವುದನ್ನು ಪರಿಶೀಲಿಸಿದರು. ಮಿಲ್ಕಿ ಮಶ್ರೂಮ್, ಬಟನ್ ಮಶ್ರೂಮ್ ಹಾಗೂ ಆಯಿಸ್ಟರ್ ಮಶ್ರೂಮ್ ಗಳನ್ನು ಖರೀದಿ ಮಾಡಿದರು.

ಮತ್ತೊಬ್ಬರು ತಂದು ಕೊಟ್ಟ ನಾಟಿ ಹಸುವಿನ ತುಪ್ಪವನ್ನು ಬಹಳ ಸಂತೋಷದಿಂದ ಸ್ವೀಕರಿಸಿದರು. ಬೇಕಾದಾಗ ತರಿಸಿಕೊಳ್ಳುವುದಾಗಿ ಹೇಳಿ ಅವರ ಫೋನ್ ನಂಬರ್ ಕೂಡ ಪಡೆದರು.

“ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು. ಅದಕ್ಕೆ ಇಂತಹ ಮೇಳಗಳು ನೆರವಾಗಲಿ. ಇದಕ್ಕೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಾಸವಿ ಸಂಸ್ಥೆಯವರು ಆಯೋಜಿಸಿರುವ ಅವರೆಬೇಳೆ ಮೇಳ ಕಾರ್ಯಕ್ರಮದಲ್ಲಿ ಹಾಗೂ ಅದಕ್ಕೆ ಮೊದಲು ಮಾಧ್ಯಮದವರ ಜತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ರೈತ ಸಂತೆಗೆ ಹೋಗಿ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಅಲ್ಲಿ ರೈತರು ತಮ್ಮ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರು. ಅದನ್ನು ನೋಡಿ ಬಹಳ ಸಂತೋಷವಾಯಿತು. ವಾಸವಿ ಸಂಸ್ಥೆಯವರು ಬಸವನಗುಡಿಯಲ್ಲಿ ಅವರೆಕಾಳು ಮೇಳವನ್ನು ಆಯೋಜಿಸಿ ಅವರೇ ಕಾಳಿನಿಂದ ನೂರಾರು ಪದಾರ್ಥ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ.

ಹಣ್ಣುಗಳ ರಾಜ ಮಾವು, ಕಾಳುಗಳ ರಾಜ ಅವರೆಕಾಯಿ. ಮಾಗಡಿ ಅವರೆಕಾಯಿ ತನ್ನ ಸೊಗಡಿಗೆ ಬಹಳ ಪ್ರಸಿದ್ಧಿ. ನಾನು ಜಿಕೆವಿಕೆಯಲ್ಲಿ ನೋಡಿದೆ. ಅಲ್ಲಿ ಅವರೆಕಾಯಿ ಬಿಡಿಸುವ ಯಂತ್ರವನ್ನು ಕೃಷಿ ವಿವಿಯವರು ಕಂಡು ಹಿಡಿದಿದ್ದಾರೆ ಎಂದು ತಿಳಿಸಿದರು.

ಈ ಮೇಳದಲ್ಲಿ 5-6 ಲಕ್ಷ ಜನ ಭಾಗವಹಿಸುತ್ತಾರೆ. ಐಸ್ ಕ್ರೀಮ್ ನಿಂದ ಹಿಡಿದು ದೋಸೆ, ಚಿತ್ರಾನ್ನಾ, ಹೀಗೆ ಬಗೆಬಗೆಯ ಪದಾರ್ಥ ಮಾಡುತ್ತಿದ್ದಾರೆ. ನಾನು ಇಲ್ಲಿ ಪಾನಿಪುರಿ ರುಚಿ ಸವಿದೆ. ಕಳೆದ ವರ್ಷ ಬಂದಾಗ ದೋಸೆ ಸವಿದಿದ್ದೆ. ನನಗೂ ಅವರೆಕಾಳು ಎಂದರೆ ಬಹಳ ಇಷ್ಟ. ನನಗೆ ಅವರೆಕಾಳು ಬಹಳ ಇಷ್ಟವೆಂದು ನನ್ನ ಸ್ನೇಹಿತ ಸಿಹಿಕಹಿ ಚಂದ್ರು ಕಾರ್ಯಕ್ರಮವೊಂದರಲ್ಲಿ ಅವರೆಕಾಳು ಉಪ್ಪಿಟ್ಟು ಮಾಡಿಕೊಟ್ಟಿದ್ದ.

ಬೆಂಗಳೂರಿನ ನಾಗರೀಕರಿಗೆ, ರೈತರಿಗೆ ಅನುಕೂಲವಾಗಬೇಕು. ಉದ್ಯೋಗ ಸೃಷ್ಟಿಯಾಗಬೇಕು ನಮ್ಮ ಸಂಸ್ಕೃತಿ ಇತಿಹಾಸ, ನಮ್ಮ ರೈತರ ಬೆಳೆಗೆ ಉತ್ತಮ ಬೆಳೆ ಸಿಗಬೇಕು. ಬೆಂಗಳೂರಿನ ಸುತ್ತಮುತ್ತಲ ಭಾಗದಲ್ಲಿ ಮಾತ್ರ ಇದನ್ನು ಬೆಳೆಯಲಾಗುತ್ತದೆ. ಹೀಗಾಗಿ ಇದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಎಂದರು.

ಕರ್ನಾಟಕದ ಈ ಖಾದ್ಯಗಳು, ರುಚಿ ಎಲ್ಲರಿಗೂ ತಲುಪುವಂತಾಗಬೇಕು. ರಾಜ್ಯದ ರೈತರಿಗೆ ಒಳ್ಳೆಯದಾಗಬೇಕು. ವಾಸವಿ ಸಂಸ್ಥೆಯವರು 26 ವರ್ಷಗಳಿಂದ ಈ ಕಾರ್ಯಕ್ರಮ ಮಾಡಿಕೊಂಡು ಬಂದಿದ್ದಾರೆ. ನಾಗರೀಕರು ಬಂದು ಇಲ್ಲಿನ ರುಚಿ ಸವಿಯಲಿ. 2026ರ ಹೊಸ ವರ್ಷ ನಿಮ್ಮ ಬದುಕಿನಲ್ಲಿ ಹೆಚ್ಚಿನ ಶಕ್ತಿ ತುಂಬಲಿ ಎಂದು ಶುಭ ಹಾರೈಸಿದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!