This is a murderous government: R. Ashoka attacks

ಇದು ಕೊಲೆಗಡುಕ ಸರ್ಕಾರ: ಆರ್‌.ಅಶೋಕ ವಾಗ್ದಾಳಿ

ಬೆಂಗಳೂರು: ರಾಜೀವ್‌ ಗಾಂಧಿ ವಸತಿ ನಿಗಮದ ವಸತಿ ಯೋಜನೆಗಳಿಗೆ 65,000 ಜನರು ಅರ್ಜಿ ಹಾಕಿದ್ದಾರೆ. ಕೋಗಿಲು ಕ್ರಾಸ್‌ನ ಬಾಂಗ್ಲಾ ಜನರಿಗೆ ಮನೆ ನೀಡುವುದಾರೆ, ಮೊದಲು ಕನ್ನಡಿಗರಿಗೆ ಆದ್ಯತೆ ಮೇರೆಗೆ ಮನೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಗ್ರಹಿಸಿದರು.

ನಿಗಮಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜೀವ್‌ ಗಾಂಧಿ ವಸತಿ ನಿಗಮಕ್ಕೆ ರಾಜ್ಯದ ಸುಮಾರು 65 ಸಾವಿರ ಜನರು ಮನೆಗಾಗಿ ಅರ್ಜಿ ಹಾಕಿದ್ದಾರೆ. ನಿಗಮದಲ್ಲಿ ವಿವಿಧ ಯೋಜನೆಗಳಲ್ಲಿ ಸುಮಾರು 7,000 ಮನೆಗಳನ್ನು ನಿರ್ಮಿಸಲಾಗಿದೆ. ಇನ್ನೂ 10,000 ಮನೆಗಳು ನಿರ್ಮಾಣ ಹಂತದಲ್ಲಿದೆ. 80 ವರ್ಷದ ಮಹಿಳೆ ಪೂರ್ತಿ ಮೊತ್ತವನ್ನು ಪಾವತಿಸಿದ್ದು, ಅವರಿಗೆ ಇನ್ನೂ ಮನೆ ನೀಡಿಲ್ಲ.

ಕಳೆದ ನಾಲ್ಕು ತಿಂಗಳಿಂದ ಅವರನ್ನು ಅಲೆದಾಡಿಸುತ್ತಿದ್ದು, ಆ ಮನೆಗೆ ಇನ್ನೂ ಕುಡಿಯುವ ನೀರು ಹಾಗೂ ವಿದ್ಯುತ್‌ ಸಂಪರ್ಕ ಸಿಕ್ಕಿಲ್ಲ. ಇವರು ಬಾಡಿಗೆ ಮನೆಯಲ್ಲಿದ್ದು, ಆ ಮನೆಯಿಂದಲೂ ಹೊರಬರುವ ಆತಂಕದಲ್ಲಿದ್ದಾರೆ. ಇದೇ ರೀತಿ ಸಾವಿರಾರು ಕನ್ನಡಿಗರು ಅರ್ಜಿ ಹಾಕಿ ಮನೆಗಾಗಿ ಕಾಯುತ್ತಿದ್ದಾರೆ. ಆದರೆ ಕಾಂಗ್ರೆಸ್‌ ಸರ್ಕಾರ ಬಾಂಗ್ಲಾ ನಿವಾಸಿಗಳಿಗೆ ಕೋಗಿಲು ಕ್ರಾಸ್‌ನಲ್ಲಿ ಮನೆ ನೀಡುತ್ತಿದೆ.

ಇದನ್ನು ವಿರೋಧಿಸಿ ಜನವರಿ 5 ರಂದು ಪ್ರತಿಭಟನೆ ಮಾಡುತ್ತೇವೆ. ಜೊತೆಗೆ ಕಾನೂನು ಹೋರಾಟ ಮಾಡುತ್ತೇವೆ. ಮುಂದಿನ ಸದನದಲ್ಲೂ ಹೋರಾಟ ಮಾಡುತ್ತೇವೆ ಎಂದರು.

ಕೋಗಿಲು ಕ್ರಾಸ್‌ನಲ್ಲಿ ಏಕಾಏಕಿ ಮನೆ ನೀಡಲು ಸಾಧ್ಯವೇ ಇಲ್ಲ. ಜನರು ಅರ್ಜಿ ಸಲ್ಲಿಸಿ, ಶಾಸಕರ ಸಮಿತಿಯಿಂದ ಪರಿಶೀಲನೆಯಾಗಿ ಆಯ್ಕೆಯಾಗಬೇಕು. ಚಿಕ್ಕಬಾಣಾವರದಲ್ಲಿ ಒಂದು ಯೋಜನೆ ಇನ್ನೂ ಐದಾರು ವರ್ಷಗಳಿಂದ ಪ್ರಗತಿಯಲ್ಲಿದೆ. ಆದರೆ ಸರ್ಕಾರ ಕೋಗಿಲು ಕ್ರಾಸ್‌ನಲ್ಲಿ ಮಾತ್ರ ನಿಯಮ ಗಾಳಿಗೆ ತೂರಿ ಮನೆ ನೀಡಲು ಮುಂದಾಗಿದೆ.

ಅಲ್ಲಿ ಇರುವವರು ಇದೇ ದೇಶದವರೇ ಎಂಬುದಕ್ಕೆ ಯಾವುದೇ ಆಧಾರ ಇಲ್ಲ. ಅವರ ಮೂಲಕ ಯಾವುದು, ಅವರ ಅಪ್ಪ ಅಮ್ಮ ಎಲ್ಲಿದ್ದಾರೆ ಎಂಬುದಕ್ಕೆ ಮಾಹಿತಿ ಇಲ್ಲ. ಇದು ಸಿಎಂ ಪಿಣರಾಯಿ ವಿಜಯನ್‌ ಹಾಗೂ ವೇಣುಗೋಪಾಲ್‌ ನಡುವೆ ನಡೆಯುತ್ತಿರುವ ಸಂಘರ್ಷ. ಇದರಿಂದ ಕನ್ನಡಿಗರು ಬಲಿಯಾಗಿದ್ದಾರೆ.

13,000 ಜನರು ಪ್ರವಾಹದಿಂದ ಮನೆ ಕಳೆದುಕೊಂಡಿದ್ದರೂ ಅವರಿಗೆ ಮನೆ ನೀಡಿಲ್ಲ. ಉತ್ತರ ಕರ್ನಾಟಕದ ಭಾಗದ ಶಾಸಕರು ಇಲ್ಲಿಗೆ ಬಂದು ಪ್ರವಾಹ ಸಂತ್ರಸ್ತರ ಪರ ಮನೆ ಕೇಳುತ್ತಿದ್ದಾರೆ. ಅಧಿಕಾರಿಗಳು ನಿಯಮ ಮೀರಿದರೆ ಅವರೇ ಬಲಿಪಶುವಾಗುತ್ತಾರೆ. ಆದ್ದರಿಂದ ಮನೆ ನೀಡುವಾಗ ವಂಶವೃಕ್ಷವನ್ನು ಕಡ್ಡಾಯ ಮಾಡಬೇಕಿದೆ ಎಂದರು.

ಕೋಗಿಲು ಕ್ರಾಸ್‌ಗೆ ಬಿಜೆಪಿ ನಿಯೋಗ ಬರಲಿದೆ ಎಂದಾಕ್ಷಣ ಕನ್ನಡಿಗರನ್ನು ಕರೆತಂದು ಇರಿಸಿದ್ದಾರೆ. 16 ಸಾವಿರ ರೂ. ಗೆ ಆಧಾರ್‌ ಕಾರ್ಡ್‌ ಮಾಡಿಸಿಕೊಡುವ ಗ್ಯಾಂಗ್‌ ಇದೆ. ಮತಕ್ಕಾಗಿ ಇಂತಹವರನ್ನು ಇಲ್ಲಿ ನೆಲೆಸುವಂತೆ ಮಾಡಿದ್ದಾರೆ.

ಬಾಂಗ್ಲಾದೇಶದ 16 ಕೋಟಿ ಜನರಲ್ಲಿ 3 ಕೋಟಿ ಜನರು ಕಾಣೆಯಾಗಿದ್ದು, 20-25 ಲಕ್ಷ ಜನರು ಕರ್ನಾಟಕಕ್ಕೆ ಬಂದಿದ್ದಾರೆ. ಸರ್ಕಾರ 6-8 ಲಕ್ಷ ಬಾಂಗ್ಲಾದವರನ್ನು ಗುರುತಿಸಿದೆ. ಅವರಿಗೆ ಮನೆ ಕೊಡಲೇಬೇಕೆಂಬ ಹಠ ಯಾಕೆ? ಮನೆ ಕೊಡುವುದಾದರೆ ಕನ್ನಡಿಗರಿಗೆ ಆದ್ಯತೆ ನೀಡಬೇಕು. ಕೋಗಿಲು ಕ್ರಾಸ್‌ನಲ್ಲಿ ಪಶ್ಚಿಮ ಬಂಗಾಳದ ಕಾರು ಇರುವುದು ಕಂಡುಬಂದಿದೆ ಎಂದರು.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಬಾಂಗ್ಲಾ ನುಸುಳುಕೋರರನ್ನು ಬಿಡುತ್ತಿದ್ದಾರೆ. ಅದನ್ನು ತಡೆಯಲು ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ. ಆದರೆ ಅದನ್ನು ಕಾಂಗ್ರೆಸ್‌ ವಿರೋಧಿಸುತ್ತಿದೆ ಎಂದರು.

ಪೊಲೀಸರ ಮೇಲೆ ಒತ್ತಡ

ಇದು ಕೊಲೆಗಡುಕ ಸರ್ಕಾರ. ಕಾಂಗ್ರೆಸ್‌ನಿಂದ ಕಾನೂನು ವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸ್‌ ಅಧಿಕಾರಿಗಳಿಗೆ ಮಾನಸಿಕ ಒತ್ತಡ ಹೆಚ್ಚಿದೆ. ಪೊಲೀಸ್‌ ಅಧಿಕಾರಿಗಳು ಹಣ ಕೊಟ್ಟರೆ ಮಾತ್ರ ಪೋಸ್ಟಿಂಗ್‌ ಕೊಡುತ್ತಾರೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿಯವರ ಮೇಲೆ ಗುಂಡಿನ ದಾಳಿಯ ಪ್ರಯತ್ನ ನಡೆದಿದೆ. ಅದಕ್ಕೆ ಬಲಿಪಶುವಾಗಿ ಎಸ್‌ಪಿ ಯನ್ನು ಅಮಾನತು ಮಾಡಲಾಗಿದೆ.

ಶಾಸಕ ಭರತ್‌ ರೆಡ್ಡಿ ಗನ್‌ ಮ್ಯಾನ್‌ ಗುಂಡು ಹಾರಿಸಿದ್ದು ಎಂದಿದ್ದಕ್ಕೆ ಎಸ್‌ಪಿ ಮೇಲೆ ಕ್ರಮ ವಹಿಸಿದ್ದಾರೆ. ಈಗ ಆ ಎಸ್‌ಪಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ. ಗನ್‌ ಮಾತ್ರ ವಶಕ್ಕೆ ಪಡೆದು ಆರೋಪಿಗಳು ರಾಜ್ಯ ಬಿಟ್ಟು ಓಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಓಡಿ ಹೋದ ನಂತರ ಎಫ್‌ಐಆರ್‌ ಮಾಡುತ್ತಾರೆ. ಸರ್ಕಾರದ ಒತ್ತಡದಿಂದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

12 ಪೊಲೀಸ್‌ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಗಂಟೆಯಲ್ಲಿ ಎಸ್‌ಪಿಯನ್ನು ಅಮಾನತು ಮಾಡಿದ್ದಾರೆ ಎಂದರೆ, ಎರಡೂವರೆ ವರ್ಷದಿಂದ ಸಚಿವರಾಗಿರುವ ಗೃಹ ಸಚಿವರು, ಜಮೀರ್‌ ಅಹ್ಮದ್‌ ಅವರನ್ನು ಅಮಾನತು ಮಾಡಬೇಕಿತ್ತು, ಇದು ನೇಣಿನ ಭಾಗ್ಯದ ಸರ್ಕಾರ ಎಂದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!