VB Ji Ram Ji Yojana has put an end to corruption: MP Dr. K. Sudhakar

ಭ್ರಷ್ಟಾಚಾರವನ್ನು ಅಂತ್ಯ ಮಾಡಿದ ವಿಬಿ ಜಿ ರಾಮ್‌ ಜಿ ಯೋಜನೆ: ಸಂಸದ ಡಾ.ಕೆ.ಸುಧಾಕರ್‌

ದೇವನಹಳ್ಳಿ: ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್‌ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್‌ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ (Dr. K. Sudhakar) ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮನರೇಗಾ ಯೋಜನೆಯನ್ನು ಸುಧಾರಣೆ ಮಾಡಿ ವಿಬಿ ಜಿ ರಾಮ್‌ ಜಿ ಯೋಜನೆ ತಂದಿದೆ. ಇದು 2047 ರ ‘ವಿಕಸಿತ ಭಾರತ’ದ ಗುರಿಯನ್ನು ತಲುಪಲು ಪೂರಕವಾಗಿದೆ. 2005 ರ ಮೂಲ ಕಾಯಿದೆಯನ್ನು ಈಗಿನ ಕಾಲಕ್ಕೆ ತಕ್ಕಂತೆ ಸುಧಾರಣೆ ಮಾಡುವುದು ಅನಿವಾರ್ಯವಾಗಿತ್ತು.

ಯುಪಿಎ ಆಡಳಿತದ ಅವಧಿಯಲ್ಲಿ ಈ ಯೋಜನೆಯಡಿ ಭ್ರಷ್ಟಾಚಾರ ಹಾಗೂ ರಾಜಕೀಯ ಹಸ್ತಕ್ಷೇಪ ನಡೆಯುತ್ತಿತ್ತು. ಗ್ರಾಮ ಪಂಚಾಯಿತಿಗಳ ಪಾತ್ರ ಹೆಸರಿಗೆ ಮಾತ್ರವಿದ್ದು, ರಾಜಕೀಯ ತೀರ್ಮಾನಗಳೇ ಹೆಚ್ಚಾಗಿರುತ್ತಿತ್ತು. ಇದನ್ನು ಸ್ಥಳೀಯ ಶಾಸಕರು ಮತ್ತು ಕಾರ್ಯಕರ್ತರು ನಿಯಂತ್ರಣ ಮಾಡುತ್ತಿದ್ದರು.

ಹಾಜರಾತಿಯಲ್ಲಿ ಭ್ರಷ್ಟಾಚಾರ ಸಾಮಾನ್ಯವಾಗಿದ್ದು, 10 ಜನ ಕೆಲಸಕ್ಕೆ ಬಂದರೆ 50 ಜನರ ಹೆಸರು ನೋಂದಾಯಿಸಲಾಗುತ್ತಿತ್ತು. ಯೋಜನೆಯ ಹಣದಲ್ಲಿ ಶೇ.40 ರಿಂದ 50 ರಷ್ಟು ಮೊತ್ತ ದುರುಪಯೋಗವಾಗಿದೆ ಎಂದು ಸಿಎಜಿ ವರದಿ ಕೂಡ ಹೇಳಿತ್ತು ಎಂದರು.

ಗುತ್ತಿಗೆದಾರರಿಗೆ ಕೆಲಸ ನೀಡುವುದು ಹಾಗೂ ಕೂಲಿ ಪಾವತಿಯಲ್ಲಿ 2 ರಿಂದ 4 ತಿಂಗಳ ವಿಳಂಬವಾಗುತ್ತಿತ್ತು. ಇದರಿಂದ ಶ್ರಮ ಪಟ್ಟ ಗ್ರಾಮೀಣ ಜನರಿಗೆ ತೀವ್ರ ಅನ್ಯಾಯವಾಗಿತ್ತು. ಬೋಗಸ್‌ ಬಿಲ್‌ಗಳನ್ನು ತಡೆಹಿಡಿರುವುದಕ್ಕೆ, ಮಹಾತ್ಮ ಗಾಂಧೀಜಿ ಹೆಸರಲ್ಲಿ ನೂರಾರು ಕೋಟಿ ಲೂಟಿ ಮಾಡಿರುವುದನ್ನು ತಡೆದಿರುವುದಕ್ಕೆ ಕಾಂಗ್ರೆಸ್‌ ಈಗ ಹೋರಾಟ ಮಾಡುತ್ತಿದೆ.

ಗಾಂಧೀಜಿಯವರು ಶ್ರೀರಾಮನನ್ನು ಇಷ್ಟಪಡುತ್ತಿದ್ದರು. ಆದರೆ ಕಾಂಗ್ರೆಸ್‌ಗೆ ಶ್ರೀರಾಮನ ಹೆಸರು ಆಗುತ್ತಿಲ್ಲ. ಆ ಹೆಸರನ್ನೇ ಕಾಂಗ್ರೆಸ್‌ ವಿರೋಧಿಸುತ್ತಿದೆ. ಕಾಂಗ್ರೆಸ್‌ ಹೋರಾಟದ ಮೂಲಕ ಭ್ರಷ್ಟಾಚಾರಕ್ಕೆ ಮಣೆ ಹಾಕುತ್ತೇವೆ ಎಂಬ ಸಂದೇಶ ನೀಡುತ್ತಿದೆ ಎಂದರು.

ಹೊಸ ಯೋಜನೆಯಲ್ಲಿ ಪಾರದರ್ಶಕತೆ ತರಲಾಗಿದೆ. ಜಿಯೋ ಟ್ಯಾಗ್‌, ಸ್ಯಾಟಲೈಟ್‌ ಚಿತ್ರ, ಗ್ರಾಮ ಪಂಚಾಯಿತಿಗೆ ಅಧಿಕಾರ, ಗತಿಶಕ್ತಿ ಕಚೇರಿಗೆ ಸಂಪರ್ಕ ಮೊದಲಾದ ಕ್ರಮಗಳ ಮೂಲಕ ಯೋಜನೆಯಲ್ಲಿ ಅಕ್ರಮವನ್ನು ತಡೆಗಟ್ಟಲಾಗಿದೆ.

ಗ್ರಾಮೀಣ ಭಾರತದ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ಯಾವುದೇ ಹಣ ಪೋಲಾಗುವುದನ್ನು ತಡೆಯುವ ಉದ್ದೇಶದಿಂದ ಈ ಯೋಜನೆ ತರಲಾಗಿದೆ. ಹವಾಮಾನ ವೈಪರೀತ್ಯ, ಆಸ್ತಿಯ ಸೃಜನೆ, ಜಲ ಸಂರಕ್ಷಣೆ, ರೈತರ ಕೃಷಿ ಭೂಮಿ ಫಲವತ್ತತೆ ಕಾಪಾಡುವುದು ಮೊದಲಾದ ಅಂಶಗಳನ್ನು ಇದರಲ್ಲಿ ಸೇರಿಸಲಾಗಿದೆ ಎಂದರು.

ಹೋಲಿಕೆ ನೋಡಿ

ಹಿಂದಿನ ಯುಪಿಎ ಅವಧಿಯಲ್ಲಿ ಯೋಜನೆಗೆ 2.13 ಲಕ್ಷ ಕೋಟಿ ರೂ. ಖರ್ಚು ಮಾಡಿದ್ದರೆ, ಎನ್‌ಡಿಎ ಸರ್ಕಾರ 8.53 ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಅಂದರೆ ಅನುದಾನ 4 ಪಟ್ಟು ಅಧಿಕವಾಗಿದೆ. ಹಿಂದೆ 1,660 ಕೋಟಿ ಮಾನವ ದಿನಗಳನ್ನು ಸೃಷ್ಟಿಸಿದ್ದರೆ, ನಮ್ಮ ಸರ್ಕಾರದ ಅವಧಿಯಲ್ಲಿ 3,210 ಕೋಟಿ ದಿನಗಳನ್ನು ಸೃಜಿಸಲಾಗಿದೆ.

ಹಿಂದೆ ವರ್ಷಕ್ಕೆ 153 ಲಕ್ಷ ಕಾಮಗಾರಿ ನಡೆಯುತ್ತಿದ್ದರೆ, ಈಗ 862 ಲಕ್ಷ ಆಗಿದೆ. ಅಂದರೆ 4 ಪಟ್ಟು ಹೆಚ್ಚಾಗಿದೆ. ಹಿಂದೆ ಆಸ್ತಿ ನಿರ್ಮಾಣ 12% ಆಗಿದ್ದರೆ, ಈಗ 62.95% ಆಗಿದೆ. ವರ್ಷದಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 125 ಕ್ಕೆ ಹಾಗೂ ಪರಿಶಿಷ್ಟ ವರ್ಗ ಮತ್ತು ಗುಡ್ಡಗಾಡು ಪ್ರದೇಶಗಳಿಗೆ 150 ದಿನಗಳಿಗೆ ಹೆಚ್ಚಿಸಲಾಗಿದೆ. ಆದ್ದರಿಂದ ಈ ಹೋಲಿಕೆಯನ್ನು ನೋಡಬೇಕು ಎಂದು ಹೇಳಿದರು.

ಈ ಯೋಜನೆಯ ಮೂಲಕ ಮಹಾತ್ಮ ಗಾಂಧೀಜಿಯವರ ಸ್ವರಾಜ್ಯ ಕನಸಿನಂತೆ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಹೆಸರು ಬದಲಾವಣೆಯ ನೆಪದಲ್ಲಿ ರಾಜಕೀಯ ಮಾಡುತ್ತಿದೆ. ಆದರೆ ದೇಶದ 600 ಕ್ಕೂ ಹೆಚ್ಚು ಸರ್ಕಾರಿ ಸಂಸ್ಥೆಗಳು ಒಂದೇ ಕುಟುಂಬದ ಹೆಸರಿನಲ್ಲಿ ಇರುವುದಕ್ಕೆ ಮೊದಲು ಕಾಂಗ್ರೆಸ್ ಉತ್ತರಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ರಾಜಕೀಯ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ನಿನ್ನೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿಗಳಿಂದ ಗೋ ಬ್ಯಾಕ್ ಕೂಗಿಸಿಕೊಂಡು ಮುಜುಗರಕ್ಕೀಡಾಗಿ ಹಿಂತಿರುಗಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು, ಇಂದು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಆರೋಪಗಳ

[ccc_my_favorite_select_button post_id="119746"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!