ಕೊರಟಗೆರೆ: ಋತುಚಕ್ರದ ಹೊಟ್ಟೆ ನೋವು ತಾಳ ಲಾಗದೆ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ (Suicide) ತುಮಕೂರು ತಾಲೂಕಿನ ಬ್ಯಾತ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಕಲಬುರಗಿ ಮೂಲದ ಕೀರ್ತನಾ (19 ವರ್ಷ) ನೇಣಿಗೆ ಶರಣಾದ ಯುವತಿ ಎಂದು ತಿಳಿದುಬಂದಿದೆ.
ಕಲಬುರಗಿ ಜಿಲ್ಲೆಯ ಕಲಗಿ ತಾಲೂಕಿನ ಸಾಲಹಳ್ಳಿಯ ಕೀರ್ತನಾ ಕೆಲಸ ಅರಸಿ ತುಮಕೂರಿನಲ್ಲಿದ್ದ ಚಿಕ್ಕಪ್ಪನ ಮನೆಯಲ್ಲಿ ಬಂದಿದ್ದಳು. ಕೆಲಸ ಸಿಗದ ಕಾರಣ ಮನೆ ಯಲ್ಲೆ ವಾಸವಾಗಿದ್ದಳು.
ಆದರೆ ಚಿಕ್ಕಪ್ಪನ ಮನೆಯಲ್ಲಿ ಯಾರು ಇಲ್ಲದ ವೇಳೆ ಸೀರೆಯಿಂದ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮುಟ್ಟಿನ ಕಾಲದ ಹೊಟ್ಟೆನೋವಿನ ಕಾರಣಕ್ಕೆ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.