Doddaballapura: Fast-unto-death Satyagraha ends on 3rd day

ಸಿಎಂ ಕದ ತಟ್ಟಿದ ದೊಡ್ಡಬಳ್ಳಾಪುರದ ಆಮರಣಾಂತ ಉಪವಾಸ ಸತ್ಯಾಗ್ರಹ.. ದೊರೆತ ಭರವಸೆ ಏನು ಗೊತ್ತೆ..?

ಕೆ.ಎಂ. ಸಂತೋಷ್, ಆರೂಢಿ, (ದೊಡ್ಡಬಳ್ಳಾಪುರ); ನಗರದ ತಾಲೂಕು ಕಚೇರಿ ಮುಂಭಾಗ ನಡೆಯುತ್ತಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹ (Fast-unto-death Satyagraha) ಮೂರನೇ ದಿನ ಶನಿವಾರ ಮಧ್ಯಾಹ್ನ ಅಂತ್ಯಗೊಂಡಿದೆ.

ಒಳಚರಂಡಿ ನೀರನ್ನು ಶುದ್ದೀಕರಿಸಿ ಬಿಡುವ ಸಲುವಾಗಿ ಎಸ್‌ಟಿಪಿ ಘಟಕ ಸ್ಥಾಪಿಸಬೇಕೆಂದು ಒತ್ತಾಯಿಸಿ ಅರ್ಕಾವತಿ ನದಿ ಪಾತ್ರದ ಕೆರೆ ಸಂರಕ್ಷಣಾ ವೇದಿಕೆ ಹಾಗೂ ‘ದೊಡ್ಡತುಮಕೂರು ಮತ್ತು ಮಜರಾ ಹೊಸಹಳ್ಳಿ ಗ್ರಾಮ ಪಂಚಾಯ್ತಿ ಕೆರೆ ಹೋರಾಟ ಸಮಿತಿ ನೇತೃತ್ವದಲ್ಲಿ ಮೂರು ದಿನಗಳಿಂದ ತಾಲೂಕು ಕಚೇರಿ ಮುಂಭಾಗ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಯುತ್ತಿತ್ತು.

ಶುಕ್ರವಾರ ರಾತ್ರಿ ಅಸ್ವಸ್ಥರಾಗಿದ್ದ ಹೋರಾಟಗಾರರಿಗೆ ಆರೋಗ್ಯ ತಪಾಸಣೆ ನಡೆಸಲಾಗಿತ್ತು. ನಮಗೆ ಇಲ್ಲಿನ ಯಾವುದೇ ಅಧಿಕಾರಿಗಳ ಭರವಸೆ ಬೇಡ. ಎಸ್‌ಟಿಪಿ ಘಟಕಕ್ಕೆ 57 ಕೋಟಿ ರೂ ಮಂಜೂರು ಮಾಡುವ ಸರ್ಕಾರದ ಕಾರ್ಯದರ್ಶಿಗಳು ಇಲ್ಲಿಗೆ ಬಂದು ಉತ್ತರ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಉಪವಾಸ ಕೈಬಿಡಿ ಎಂದು ಭರವಸೆ ನೀಡಲು ಬಂದ ಅಧಿಕಾರಿಗಳಿಗೆ ಪ್ರತಿಭಟನಾಕಾರರು ಪ್ರತ್ಯುತ್ತರ ನೀಡಿದ್ದರು.

ಹೋರಾಟಗಾರರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಈ ಬಗ್ಗೆ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ, ಶಾಸಕ ಧೀರಜ್‌ ಮುನಿರಾಜು, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಬೆಳಿಗ್ಗೆ ಭೇಟಿ ಮಾಡಿ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿದ್ದರು.

ತಹಶೀಲ್ದಾರ್ ಮನವಿ

ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಡಾ.ಮಲ್ಲಪ್ಪ ಕೆ.ಯರಗೋಳ ಮಾತನಾಡಿ, ಎಸ್‌ಟಿಪಿ ಕಾಮಗಾರಿಯ ಅಂದಾಜು ಯೋಜನಾ ವೆಚ್ಚದ ಕುರಿತಾಗಿ ವರದಿ ಸಲ್ಲಿಸಿದ್ದು, ಅನುದಾನಕ್ಕೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿಗಳಿಗೆ ಉಸ್ತುವಾರಿ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಅಧಿಕಾರಿಗಳು ಮನವರಿಕೆ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ತುರ್ತಾಗಿ ಹುಬ್ಬಳ್ಳಿಗೆ ಹೋಗಬೇಕಾಗಿರುವುದರಿಂದ ಮಂಗಳವಾರ ಸಭೆ ನಡೆಸುತ್ತೇನೆ. ಉಪವಾಸ ಸತ್ಯಾಗ್ರಹ ಕೈಬಿಡಲು ಹೇಳಿ ಎಂದು ಹೇಳಿ ಕಳುಹಿಸಿದ್ದಾರೆ.

ಮುಂದೆ ನಡೆಯುವ ಮುಖ್ಯಮಂತ್ರಿಗಳ ಸಭೆಯಲ್ಲಿ ಹೋರಾಟಗಾರರು ಅಧಿಕಾರಿಗಳು ಭಾಗವಹಿಸಲಿದ್ದಾರೆ. ಹೀಗಾಗಿ ಹೋರಾಟ ಕೈಬಿಡಿ ಎಂದು ಮನವಿ ಮಾಡಿದರು.

ಪೌರಾಯುಕ್ತ ಆರ್‌.ಕಾರ್ತಿಕೇಶ್ವರ ಮಾತನಾಡಿ, ಎಸ್‌ಟಿಪಿ ಘಟಕ ಸ್ಥಾಪನೆ ಅನುದಾನ ಬಂದರೆ ಎಲ್ಲಾ ಸಮಸ್ಯೆಗೆ ಪರಿಹಾರವಾಗಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಭೇಟಿ ಫಲಪ್ರದವಾಗಿದೆ. ಇಲ್ಲಿನ ವಿದ್ಯಮಾನಗಳನ್ನು, ಸತ್ಯಾಗ್ರಹ ಕುರಿತ ಮಾಧ್ಯಮ ವರದಿಗಳನ್ನು ಮುಖ್ಯಮಂತ್ರಿಗಳಿಗೆ ತಿಳಿಸಿ ಮನವರಿಕೆ ಮಾಡಿಕೊಡಲಾಗಿದೆ. ಮುಖ್ಯಮಂತ್ರಿಗಳು ಮಂಗಳವಾರ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

ಉಪವಾಸ ಅಂತ್ಯ:

ದೊಡ್ಡಬಳ್ಳಾಪುರ ನಗರಸಭೆ ಅನುದಾನವನ್ನು ಜಮೀನಿನ ಖರೀದಿಗೆ ಬಳಸಬೇಕು. ಹೆಚ್ಚುವರಿ ಅನುದಾನ ಎಸ್‌ಟಿಪಿ ಘಟಕ ಸ್ಥಾಪನೆಗೆ ವಿನಿಯೋಗಿಸಬೇಕು. ಮುಖ್ಯಮಂತ್ರಿ ಭರವಸೆ ನೀಡಿರುವ ಹಿನ್ನಲೆಯಲ್ಲಿ ಹೋರಾಟ ಹಿಂಪಡೆಯುತ್ತೇವೆ ಎಂದು ಹೋರಾಟಗರರು ಸತ್ಯಾಗ್ರಹ ಅಂತ್ಯಗೊಳಿಸಿದರು.

ಉಪವಾಸ ಸತ್ಯಾಗ್ರಹ ನಿರತರಿಗೆ ಎಳನೀರು ಕುಡಿಸುವ ಮೂಲಕ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲಾಯಿತು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!