Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿ

Astrology: ಶನಿವಾರ,ಜನವರಿ 31, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ವ್ಯಾಪಾರಸ್ಥರು ಲಾಭಗಳಿಸುವ ಕೆಲವು ಹೊಸ ಯೋಜನೆಗಳನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಪ್ರಿಯರಿಗೆ ಮತ್ತು ತಮ್ಮ ಆಯ್ಕೆಯ ವ್ಯಕ್ತಿಯೊಂದಿಗೆ ಸಂಬಂಧವನ್ನು ಪ್ರಾರಂಭಿಸಲು ಬಯಸುವವರಿಗೆ ಇದು ಶುಭ ದಿನ.

ವೃಷಭ ರಾಶಿ

ವೃತ್ತಿ ಕ್ಷೇತ್ರದಲ್ಲಿ ಪರಿಸ್ಥಿತಿಗಳು ಸಾಮಾನ್ಯವಾಗಿರುತ್ತವೆ. ಹಿರಿಯರು ಮತ್ತು ಸಹೋದ್ಯೋಗಿಗಳೊಂದಿಗೆ ಸಾಮರಸ್ಯ ಮತ್ತು ಸೌಹಾರ್ದವನ್ನು ಕಾಪಾಡಿಕೊಳ್ಳಲು ಸೂಚಿಸಲಾಗುತ್ತದೆ ಹಾಗೂ ವೃತ್ತಿ ಕ್ಷೇತ್ರದಲ್ಲಿ ಕೆಲವು ಬದಲಾವಣೆಗಳನ್ನು ಗಮನಿಸಬಹುದು.

ಮಿಥುನ ರಾಶಿ

ಇಂದು ಕೆಲವು ಆಸ್ತಿ ವಿಷಯದಲ್ಲಿ ತೆಗೆದುಕೊಂಡ ನಿರ್ಧಾರಗಳು ಮುಖ್ಯವಾಗುತ್ತವೆ. ಹೆಚ್ಚಿನ ಲಾಭವನ್ನು ಸ್ವೀಕರಿಸುವಿರಿ. ಆದಾಯದ ಮೂಲಗಳ ಸಂಖ್ಯೆ ಹೆಚ್ಚಾಗಬಹುದು. ಷೇರು ಮಾರುಕಟ್ಟೆ ಯಲ್ಲಿ ಹೂಡಿಕೆ ಮಾಡಿದರೆ ಉತ್ತಮ ಲಾಭಗಳಿಸುವಿರಿ. ನಿಮ್ಮ ಸ್ವಭಾವವು ಯಾರಿಗಾದರೂ ಉತ್ತಮ ಹಣವನ್ನು ಸಂಗ್ರಹಿಸಲು ಪ್ರಯೋಜನವನ್ನು ನೀಡುತ್ತದೆ.

ಕಟಕ ರಾಶಿ

ನಿಮ್ಮ ಸಂಬಂಧವು ನಿಮ್ಮ ಪೋಷಕರಿಂದ ಅನುಮೋದನೆಯ ಮುದ್ರೆಯನ್ನು ಪಡೆಯಬಹುದು. ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಬೇಕು. ಸರಿ ಯಾದ ಕೋರ್ಸ್ ಆಯ್ಕೆ ಮಾಡಲು ವೃತ್ತಿಪರ ಸಲಹೆ ಸಹಾಯ ಮಾಡುತ್ತದೆ.

ಸಿಂಹ ರಾಶಿ

ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಜಾಣ್ಮೆ ನಿಮ್ಮಲ್ಲಿರುತ್ತದೆ. ನಿಮ್ಮಲ್ಲಿ ಹಲವರು ವೃತ್ತಿಯಲ್ಲಿ ನಿಮ್ಮನ್ನು ನೀವು ಗುರುತಿಸಿಕೊಳ್ಳಲು ಪ್ರಯತ್ನಿಸುತ್ತೀರಿ. ಕಟ್ಟುಪಾಡುಗಳಿಂದ ದೂರವಾಗುತ್ತೀರಿ. ಹಣದ ವಿಚಾರದಲ್ಲಿ ಇಂದು ಜಾಗರೂಕರಾಗಿರುವುದು ಉತ್ತಮ. ಆಸ್ತಿಯನ್ನು ಖರೀದಿಸಲು ಯೋಚಿಸುತ್ತೀರಿ. ಹೊಸ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಪ್ರಯತ್ನಿಸುತ್ತೀರಿ. ಆದರೆ ಏನೇ ಮಾಡಿದರೂ ನಿಮ್ಮ ಸಂಪೂರ್ಣ ಗಮನದ ಅಗತ್ಯವಿದೆ. ಹೊಸದನ್ನು ಪ್ರಾರಂಭಿಸಲು ಇದು ಉತ್ತಮ ದಿನವಾಗಿದೆ.

ಕನ್ಯಾ ರಾಶಿ

ನಿಮ್ಮ ಕೌಶಲ್ಯಗಳು ಪ್ರಮುಖ ವ್ಯಕ್ತಿಗಳ ಗಮನಕ್ಕೆ ಬರುವ ಸಾಧ್ಯತೆಯಿದೆ. ಕೆಲವರು ಅನುಭವಿಸಿದ ವೈದ್ಯಕೀಯ ಸ್ಥಿತಿಯು ಸುಧಾರಿಸುವ ಲಕ್ಷಣಗಳವೆ. ಕುಟುಂಬದ ಬೆಂಬಲ ಸಿಗುತ್ತದೆ ಮತ್ತು ನಿಮ್ಮ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ನಿಮಗೆ ಸಹಾಯ ಮಾಡಬಹುದು. ನೀವು ನಿರೀಕ್ಷಿಸಬಹುದಾದ ದಿನ ಇದು. ಕೆಲಸದಲ್ಲಿ ಶ್ರದ್ಧೆ ಇರಲಿ. ಕಷ್ಟಪಟ್ಟ ಕೆಲಸ ಮಾಡುವುದು ನಿಮಗೆ ಸಹಾಯಕ ವಾಗಿದೆ.

ತುಲಾ ರಾಶಿ

ಆರ್ಥಿಕ ಯೋಗ ಕ್ಷೇಮ ನೋಡಿಕೊಳ್ಳುವುದು ಉತ್ತಮ. ನೀವು ನಿರೀಕ್ಷಿಸುತ್ತಿದ್ದ ಅವಕಾಶ ನಿಮ್ಮ ದಾರಿಗೆ ಬರದೇ ಇರಬಹುದು. ಆರೋಗ್ಯದ ಬಗ್ಗೆ ಅನಗತ್ಯವಾಗಿ ಚಿಂತಿಸಬೇಡಿ. ಇದು ನಿಮ್ಮ ಭಯವನ್ನು ಹೆಚ್ಚಿಸಬಹುದು. ಏಕೆಂದರೆ ಎಲ್ಲವೂ ಸರಿಯಾಗಿರುವುದು ನಿಮಗೆ ಖಚಿತತೆ ಇದ್ದರೆ ಆರೋಗ್ಯದ ಬಗ್ಗೆ ಚಿಂತಿಸಬೇಡಿ. ಕೌಟುಂಬಿಕ ಸಮಸ್ಯೆಯನ್ನು ಸಾಮರಸ್ಯಕ್ಕೆ ಧಕ್ಕೆಯಾಗದಂತೆ ಚರ್ಚಿಸ ಬೇಕಾಗಬಹುದು. ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ.

ವೃಶ್ಚಿಕ ರಾಶಿ

ಉತ್ತಮ ಹಣ ಕಾಸು ನಿರ್ವಹಣೆಯು ನಿಮ್ಮನ್ನು ಸಂಕಷ್ಟಗಳಿಂದ ಆಚೆಗೆ ಮುನ್ನಡೆಸುತ್ತದೆ. ಉಳಿತಾಯಕ್ಕೂ ಕೊಡುಗೆ ನೀಡುತ್ತದೆ. ನೀವು ಹೆಚ್ಚುವರಿ ಕೆಲಸದ ಹೊರೆಯೊಂದಿಗೆ ಕೆಲಸದಲ್ಲಿ ತೊಡಗುವ ಸಾಧ್ಯತೆಯಿದ್ದು, ಕುಟುಂಬಕ್ಕೆ ಯಾವಾಗಲೂ ಲಭ್ಯವಿರುವ ಸಂತೋಷ ಮತ್ತು ಸಂತೃಪ್ತಿ ನೀಡಲು ಭಯಸಿ.ವೃತ್ತಿ ಕ್ಷೇತ್ರದಲ್ಲಿ ಜಾಗರೂಕರಾಗಿರಿ.

ಧನಸ್ಸು ರಾಶಿ

ಹಣಕಾಸಿನ ಭದ್ರತೆಯು ಪ್ರಸ್ತುತ ನಿಮಗೆ ಹೆಚ್ಚು ಆತ್ಮವಿಶ್ವಾಸ ವನ್ನು ನೀಡುತ್ತದೆ. ಕಾಲ್ ಸೆಂಟರ್‌ಗಳು ಅಥವಾ ಹಾಸ್ಪಿಟಾಲಿಟಿ ವಲಯದಲ್ಲಿ ಕೆಲಸ ಮಾಡುವವರು ಆರ್ಥಿಕವಾಗಿ ಸದೃಢರಾಗುವರು. ಉದ್ಯೋಗದಲ್ಲಿ ಕೊಂಚ ಅಡೆತಡೆಗಳು ಉಂಟಾಗ ಬಹುದು. ಧೈರ್ಯಗುಂದದೆ ಕೆಲಸವನ್ನು ಮಾಡಿ. ಆಸ್ತಿ ಸಂಬಂಧಿತ ವಿಷಯಗಳಲ್ಲಿ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಿ.

ಮಕರ ರಾಶಿ

ಹೊಸದನ್ನು ಪ್ರಾರಂಭಿಸಲು ಬಂಡವಾಳವನ್ನು ಸಂಗ್ರಹಿಸಲು ನೀವು ಸಿದ್ಧರಾಗುವಿರಿ. ಇಂದು ನಿಮ್ಮ ಶ್ರಮದ ಸಾಮಾರ್ಥ್ಯ ವನ್ನು ತೀರ್ಮಾನಿಸಲು ನಿಮಗೆ ಸಾಧ್ಯವಾಗುತ್ತದೆ. ಮೋಜು ಮಸ್ತಿಗಳಿಂದ ದೂರವಿರಿ.
ಕೆಲಸದಲ್ಲಿ ನಿಮ್ಮ ಶ್ರಮವನ್ನು ಗುರುತಿಸುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸದೃಢರಾಗಲು ನಿತ್ಯ ನೀವು ಪ್ರಯತ್ನಿಸುತ್ತೀರಿ. ಸಂಬಂಧಗಳನ್ನು ಗಟ್ಟಿಯಾಗಿರಿಸಲು ಸೂಚಿಸಲಾಗುತ್ತದೆ. ಆಸ್ತಿಗೆ ಸಂಬಂಧಿಸಿದ ವಿಷಯಗಳು ಇಂದು ಉತ್ತಮವಾಗಲಿವೆ. ಶಿಕ್ಷಣದಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ.

ಕುಂಭ ರಾಶಿ

ಬೋನಸ್ ಅಥವಾ ಇನ್‌ಕ್ರಿಮೆಂಟ್‌ಗಾಗಿ ಉದ್ಯೋಗದಾತರ ಉತ್ಸಾಹ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಲಾಭಗಳಿಸುವ ಸಾಧ್ಯತೆ ಇದೆ. ಉತ್ತಮ ಜೀವನ ಸೈಲಿಯನ್ನು ರೂಢಿಸಿಕೊಳ್ಳಿ. ಸಣ್ಣ ಕಾಯಿಲೆಗಳ ಬಗ್ಗೆ ಯೋಚಿಸಬೇಡಿ. ದಾನ ಮಾಡುವುದು ನಿಮಗೆ ಎಂದೋ ಸಹಾಯ ಮಾಡುತ್ತದೆ. ಕುಟುಂಬ ನಿಮ್ಮ ಎಲ್ಲಾ ಕೆಲಸಗಳಿಗೆ ಸಹಾಯವನ್ನು ನೀಡುತ್ತದೆ.

ಮೀನ ರಾಶಿ

ಹಣದ ವಿಷಯಗಳಲ್ಲಿ ತುಂಬಾ ಜಾಗರುಕರಾಗಿರಬೇಕಾಗುತ್ತದೆ. ವೃತ್ತಿಯಲ್ಲಿ ಅಥವಾ ಶಿಕ್ಷಣದಲ್ಲಿ ಉತ್ತಮ ಕಾರ್ಯ ನಿರ್ವಹಿಸಬೇಕಾಗುತ್ತದೆ. ಬದಲಿಗೆ, ವ್ಯಾಯಾಮದ ದಿನಚರಿಯು ನಿಮ್ಮ ಆರೋಗ್ಯವನ್ನು ಸುಧಾರಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ. ನಿಮ್ಮಲ್ಲಿ ಹಲವರು ನಿಮ್ಮ ಸಂಪತ್ತನ್ನು ಹೆಚ್ಚಿಸಲು ಸಿದ್ಧರಾಗಿರುತ್ತೀರಿ ಮತ್ತು ಆಸ್ತಿಯನ್ನು ಖರೀದಿಸಲು ಸಹ ನಿರ್ಧರಿಸುತ್ತೀರಿ.

ತಿಥಿ: ತ್ರಯೋದಶಿ/ಚತುರ್ದಶಿ
ನಕ್ಷತ್ರ: ಪುನರ್ವಸು ನಕ್ಷತ್ರ.

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

[ccc_my_favorite_select_button post_id="118997"]
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆ ಜಾರಿಯ ನಂತರ ಅದನ್ನು ಟೀಕೆ ಮಾಡುವ ನೈತಿಕತೆ ಇರುವುದಿಲ್ಲ: ಆರ್. ಅಶೋಕ (R. Ashoka)

[ccc_my_favorite_select_button post_id="118949"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

2025ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 85ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ ಅಪಘಾತ (Accident) ಪ್ರಕರಣಗಳು 2026ರ ಆರಂಭದಲ್ಲಿಯೂ ಮುಂದುವರಿದೆ.

[ccc_my_favorite_select_button post_id="118962"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!