Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಗೆ ಅತಿಯಾದ ಹಠ ಒಳ್ಳೆಯದಲ್ಲ

Astrology: ಶನಿವಾರ, ಫೆಬ್ರವರಿ 07, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಅತಿಯಾದ ಹಠ ಒಳ್ಳೆಯದಲ್ಲ. ಒತ್ತಡಗಳಿಗೆ ಮಣಿಯುವ ಸನ್ನಿವೇಶಗಳು ಎದುರಾಗಬಹುದು. ಕುಟುಂಬದ ಸಮಸ್ಯೆಗಳು ಉಲ್ಭಣಗೊಳ್ಳ ಬಹುದು. ಪರಿಸ್ಥಿತಿ ಎದುರಿಸಲು ಸಿದ್ಧರಾಗಿ.

ವೃಷಭ ರಾಶಿ

ಹಣದ ಕೊರತೆಯು ಇಂದು ಕುಟುಂಬದಲ್ಲಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಬಹುದು. ಇಂತಹ ಪರಿಸ್ಥಿತಿಯಲ್ಲಿ ಇತರ ಕುಟುಂಬ ಸದಸ್ಯರೊಂದಿಗೆ ಮಾತನಾಡುವ ಮೊದಲು ಚೆನ್ನಾಗಿ ಯೋಚಿಸಿ ಮತ್ತು ಅವರಿಂದ ಸಲಹೆ ಪಡೆಯಿರಿ.

ಮಿಥುನ ರಾಶಿ

ಈ ದಿನ ನಿಮ್ಮ ಜೀವನವನ್ನು ಹೆಚ್ಚು ಉತ್ಕೃಷ್ಟಗೊಳಿಸಿ. ಚಿಂತೆಯನ್ನು ಮಾಡಬೇಡಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳು ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. ಅನಾರೋಗ್ಯ ಕಾಣಿಸಿ ಕೊಳ್ಳಬಹುದು. ಆರೋಗ್ಯದ ಕಡೆ ಗಮನ ನೀಡಿ.ಕೆಟ್ಟ ಅಭ್ಯಾಸಗಳನ್ನು ತೊಡೆದು ಹಾಕುವುದು ಒಳ್ಳೆಯದು.

ಕಟಕ ರಾಶಿ

ಸಮಸ್ಯೆಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಕೊರಗದಿರಿ. ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಮನಸ್ಸು ಹಗರುವಾಗುತ್ತದೆ. ಸಲಹೆಗಳನ್ನು ಸ್ವೀಕರಿಸಿ. ಇದು ಬಿಕ್ಕಟ್ಟಿನಿಂದ ಹೊರಬರಲು ನಿಮಗೆ ಸಹಾಯ ವಾಗುತ್ತದೆ.

ಸಿಂಹ ರಾಶಿ

ಶೀಘ್ರದಲ್ಲಿ ಅನಿರೀಕ್ಷಿತ ಶುಭ ಸಮಾಚಾರಗಳು ಕೇಳಿ ಬರ ಲಿವೆ.ಸಮಸ್ಯೆಗಳೂ ದೂರಾಗಲಿವೆ. ಪ್ರಮುಖ ನಿರ್ಧಾರ ತೆಗೆದುಕೊಳ್ಳಲು ಸೂಕ್ತ ಸಮಯವಿದು. ಆದರೆ ಎಲ್ಲಾ ಆಯಾಮಗಳಲ್ಲೂ ಆಲೋಚಿಸಿ, ಸಮಯ ತೆಗೆದುಕೊಂಡು ನಿರ್ಧಾರ ಕೈಗೊಳ್ಳಿ.

ಕನ್ಯಾ ರಾಶಿ

ಮನಸ್ಸಿ ಗೊಂದಲಗಳಿಂದ ಒತ್ತಡ ಎದುರಾಗಬಹುದು. ದೇಹ ವಿಶ್ರಾಂತಿ ಬಯಸಬಹುದು. ಆರೋಗ್ಯ ಕಡೆ ಹೆಚ್ಚಿನ ಗಮನ ಕೊಡಿ. ಇತರರ ಬಗ್ಗೆ ಅತಿಯಾದ ಆಲೋಚನೆ ಗಳು ಒಳ್ಳೆಯದಲ್ಲ.

ತುಲಾ ರಾಶಿ

ಪತ್ನಿ, ಕುಟುಂಬಸ್ಥ ರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸ ಕೆಲಸ, ಯೋಜನೆಗಳನ್ನು ಮುಂದೂಡಿ. ಹಣಕಾಸು ವಿಚಾರದಲ್ಲಿ ಎಚ್ಚರದಿಂದಿರಿ.

ವೃಶ್ಚಿಕ ರಾಶಿ

ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ.

ಧನಸ್ಸು ರಾಶಿ

ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಆದರೆ ಮೊದಲು ಚರ್ಚೆಗಳು ನಡೆಯಬೇಕು. ನೀವು ಇತರರನ್ನು ಸಂಪರ್ಕಿಸದೆ ಮುಂದಕ್ಕೆ ಧಾವಿಸುತ್ತೀರಿ. ಇದರಿಂದ ಮನಸ್ತಾಪ ಗಳು ಎದುರಾಗಬಹುದು. ಎಚ್ಚರವಿ ರಲಿ.

ಮಕರ ರಾಶಿ

ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ವಿಚಲಿತರಾಗದಿರಿ. ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಬರಬಹುದು ಕೈಚೆಲ್ಲದಿರಿ. ಸಿಕ್ಕ ಉತ್ತಮ ಸಮಯನ್ನು ಸದ್ಬಳಕೆ ಮಾಡಿಕೊಳ್ಳಿ.

ಕುಂಭ ರಾಶಿ

ಉದ್ವೇಗಕ್ಕೊಳಗಾಗದಿರಿ. ಇಂದಿನ ಗ್ರಹಗತಿಗಳು ನಿಮ್ಮ ರಾಶಿಯ ಮೇಲೆ ಧನಾತ್ಮಕ ಪ್ರಭಾವ ಬೀರಲಿದೆ. ಒತ್ತಡಗಳು ಎದುರಾದರೂ ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದೀರಿ.

ಮೀನ ರಾಶಿ

ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲ ಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ.

ತಿಥಿ: ಷಷ್ಠಿ
ನಕ್ಷತ್ರ: ಚಿತ್ತ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಯಾರನ್ನೂ ಓಲೈಕೆ ಮಾಡದೇ ಎಲ್ಲಾ ವರ್ಗದವರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ ಹಾಗೂ

[ccc_my_favorite_select_button post_id="119201"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!