ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಾಳೆ (ಫೆ.08)ರಂದು ದೊಡ್ಡಬಳ್ಳಾಪುರ ತಾಲೂಕು ಮಟ್ಟದ ಹಸುಗಳ ಅಧಿಕ ಹಾಲು ಕರೆಯುವ ಸ್ಪರ್ಧೆ (Milking competition) ಹಾಗೂ ಮಿಶ್ರತಳಿ ಕರುಗಳ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಮೂಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ (B.C. Ananad Kumar) ತಿಳಿಸಿದ್ದಾರೆ.
ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಕೆಎಂಎಫ್ ಮತ್ತು ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಮತ್ತು ಕೊನಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕು ಮಟ್ಟದ ಹಸುಗಳ ಅಧಿಕ ಹಾಲು ಕರೆಯುವ ಸ್ಪರ್ಧೆ ಹಾಗೂ ಮಿಶ್ರತಳಿ ಕರುಗಳ ಪ್ರದರ್ಶನ ಕಾರ್ಯಕ್ರಮ ನಾಳೆ (ಫೆ.8 )ಸಂಜೆ 4 ಗಂಟೆಗೆ ಕೊನಘಟ್ಟ ಗ್ರಾಮದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮ ಉದ್ಘಾಟನೆಯನ್ನು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ನೆರವೇರಿಸಲಿದ್ದಾರೆ. ಮುಖ್ಯಅಥಿತಿಗಳಾಗಿ ಸಂಸದ ಡಾ.ಕೆ ಸುಧಾಕರ್, ಶಾಸಕ ಧೀರಜ್ ಮುನಿರಾಜು ಮತ್ತಿತರರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.