Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರು ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ

Astrology: ಸೋಮವಾರ,ಫೆಬ್ರವರಿ 09, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಈ ರಾಶಿಯವರ ಎಲ್ಲಾ ಕೆಲಸಗಳು ಯಶಸ್ವಿಯಾಗಿ ಪೂರ್ಣ ಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಉದ್ಯೋಗದ ಸಂದರ್ಭದಲ್ಲಿ ಕೆಲಸಗಳ ಮೇಲೆ ಗಮನ ಹೆಚ್ಚಿಸಬೇಕು.ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

ವೃಷಭ ರಾಶಿ

ಕಚೇರಿ ಕೆಲಸವನ್ನು ಸಾಮರಸ್ಯದಿಂದ ಇತ್ಯರ್ಥಪಡಿಸಲು ಪ್ರಯತ್ನಿಸಿ. ಚಿನ್ನ,ಬೆಳ್ಳಿ ಕೆಲಸ ಮಾಡುವ ವ್ಯಾಪಾರಸ್ಥರಿಗೆ ಕೆಲಸ ಸಿಗಬಹುದು ಇಲ್ಲವೇ ಬೆಲೆ ಹೆಚ್ಚಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ವಾಹನ ಚಾಲನೆ ಮಾಡುವಾಗ ಅಥವಾ ನಡೆಯುವಾಗ ನೀವು ಜಾಗರೂಕರಾ ಗಿರಬೇಕು.

ಮಿಥುನ ರಾಶಿ

ಈ ರಾಶಿಯ ಜನರು ಸದಾ ಸೇವಾ ಮನೋಭಾವನೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಇತರರ ಸೇವೆಯಿಂದ ಆಧ್ಯಾತ್ಮಿಕ ಸಂತೋಷವನ್ನು ಪಡೆಯ ಲಾಗುತ್ತದೆ. ವ್ಯಾಪಾರ ಕ್ಷೇತ್ರದಲ್ಲಿ ನೀವು ದೊಡ್ಡ ಯಶಸ್ಸುಗಳಿಸುವಿರಿ.

ಕಟಕ ರಾಶಿ

ಈ ರಾಶಿಯ ಜನರು ಅನಗತ್ಯ ಕೋಪವನ್ನು ತಪ್ಪಿಸಬೇಕು. ಅನಗತ್ಯ ಕೋಪದಿಂದ ನಿಮ್ಮ ಆರೋಗ್ಯವು ಹದಗೆಡುತ್ತದೆ. ವ್ಯಾಪಾರಿಗಳಿಗೆ ಲಾಭದ ಪರಿಸ್ಥಿತಿ ಇರುತ್ತದೆ. ವಿದ್ಯಾರ್ಥಿಗಳು ಕಷ್ಟಕರವಾದ ವಿಷಯಗಳ ಮೇಲೆ ಹೆಚ್ಚು ಗಮನಹರಿಸಬೇಕು.

ಸಿಂಹ ರಾಶಿ

ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಬಟ್ಟೆ ವ್ಯಾಪಾರಿಗಳು ಉತ್ತಮ ಲಾಭಗಳಿಸಬಹುದು. ಸಾಮಾಜಿಕ ವಲಯದಲ್ಲಿ ಗುರು ಅಥವಾ ಶಿಕ್ಷಕರ ಮಾರ್ಗದರ್ಶನ ಸಿಗಲಿದೆ.

ಕನ್ಯಾ ರಾಶಿ

ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವವರು ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುಂದುವರಿಯಿರಿ. ಜಾಗತಿಕ ಸಾಂಕ್ರಾಮಿಕ ರೋಗವು ಮತ್ತೆ ಹೆಚ್ಚಾಗಲಾರಂಭಿಸಿದೆ, ಅದರ ಬಗ್ಗೆ ಎಚ್ಚರದಿಂದಿರಿ ಮತ್ತು ಸಂಪೂರ್ಣ ರಕ್ಷಣೆ ತೆಗೆದುಕೊಳ್ಳಿ.

ತುಲಾ ರಾಶಿ

ಈ ರಾಶಿಯ ಜನರ ಕೆಲಸದ ಸ್ಥಳಾಂತರ ಸಾಧ್ಯತೆಗಳಿವೆ. ವ್ಯಾಪಾರ ಮತ್ತು ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ. ನಿಮ್ಮ ಕುಟುಂಬದಲ್ಲಿ ಕೆಲವು ದುಃಖದ ಸುದ್ದಿಗಳನ್ನು ಸಹ ಕಾಣಬಹುದು.

ವೃಶ್ಚಿಕ ರಾಶಿ

ಕೆಲಸ ಕಾರ್ಯ ಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ.ಗುರು ಹಿರಿಯರಿಂದ ಪ್ರೋತ್ಸಾಹ ಆಶೀರ್ವಾದ. ಉನ್ನತ ಅಧಿಕಾರಿಯೊಂದಿಗೆ ಒಳ್ಳೆಯ ವಿಚಾರದ ಬಗ್ಗೆ ಚರ್ಚೆ ಮಾಡಲಿದ್ದೀರಿ. ನಿಮ್ಮ ಸಲಹೆಯನ್ನು ಅಧಿಕಾರಿಗಳು ಅಳವಡಿಸಿಕೊಳ್ಳುತ್ತಾರೆ.

ಧನಸ್ಸು ರಾಶಿ

ಸೌಮ್ಯತೆಯನ್ನು ತರಲು ಪ್ರಯತ್ನಿಸಿ. ಈ ದಿನ ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯ ವಿರುತ್ತದೆ.

ಮಕರ ರಾಶಿ

ನೀವು ನಿಮ್ಮ ಗುರಿಯತ್ತ ಗಮನ ಹರಿಸಬೇಕು. ಮನೆಯ ದೊಡ್ಡ ಜವಾಬ್ದಾರಿಗಳು ನಿಮ್ಮ ಹೆಗಲ ಮೇಲೆ ಬೀಳಬಹುದು. ಇದಕ್ಕಾಗಿ ನೀವು ಸಿದ್ಧರಾಗಿರಬೇಕು.

ಕುಂಭ ರಾಶಿ

ಈ ರಾಶಿಯ ಜನರು ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ನೀವು ಅಧೀನ ಅಧಿಕಾರಿಗಳ ಬಗ್ಗೆ ಉತ್ತಮ ನಡವಳಿಕೆ ಯನ್ನು ಹೊಂದಿರಬೇಕು. ನೀವು ಆರೋಗ್ಯದ ಬಗ್ಗೆ ಜಾಗೃತರಾಗಿರ ಬೇಕು.

ಮೀನ ರಾಶಿ

ಇತರರಿಗೆ ಸಲಹೆ ನೀಡ ಬೇಕಾದರೆ ಬುದ್ಧಿವಂತಿಕೆಯಿಂದ ಮಾಡಬೇಕು. ಹೋಟೆಲ್ – ರೆಸ್ಟೋರೆಂಟ್ ವ್ಯಾಪಾರಿಗಳು ಉತ್ತಮ ಲಾಭಗಳಿಸಬಹುದು. ಯಾವುದಕ್ಕೂ ಹೆಚ್ಚು ಚಿಂತಿಸುವ ಅಗತ್ಯವಿಲ್ಲ.

ತಿಥಿ: ಅಷ್ಠಮಿ
ನಕ್ಷತ್ರ: ವಿಶಾಖ ನಕ್ಷತ್ರ

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ಶಂಕುಸ್ಥಾಪನೆ ಕಂಡು 2 ವರ್ಷ 10 ತಿಂಗಳು ಕಳೆದರು ಪೂರ್ಣಗೊಳ್ಳದ ರಸ್ತೆ ಕಾಮಗಾರಿಯಿಂದಾಗಿ ವಾಹನ ಸವಾರರು ಪದೇ ಪದೇ ಅಪಘಾತಕ್ಕೆ (Accident) ಒಳಗಾಗುತ್ತಿರುವ ಘಟನೆ ರಾಜಘಟ್ಟ ಕೆರೆ ಏರಿ ಮೇಲೆ ನಡೆಯುತ್ತಿದೆ.

[ccc_my_favorite_select_button post_id="120455"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!