ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿ: ಬಿಜೆಪಿ ನೋಟಿಸ್‌

BJP MPs issue notice to cancel Rahul Gandhi's membership of Parliament

ನವದೆಹಲಿ: ಕಾಂಗ್ರೆಸ್ (Congress) ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಬಿಜೆಪಿ (BJP) ಸಂಸದರು ನೋಟಿಸ್‌ ಸಲ್ಲಿಸಿದ್ದಾರೆ.

ಭಾರತ- ಅಮೇರಿಕಾ ನಡುವಿನ ಒಪ್ಪಂದದ ಕುರಿತಂತೆ ನಿನ್ನೆ ರಾಹುಲ್ ಗಾಂಧಿ ಅವರ ಬಜೆಟ್ ಮೇಲಿನ ಭಾಷಣದ ವಿರುದ್ಧ ಬಿಜೆಪಿ ಸಂಸದರು ಸಿಡಿದೆದ್ದಿದ್ದು, ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿಯವರ ಸದಸ್ಯತ್ವವನ್ನು ರದ್ದುಗೊಳಿಸಲು ಪ್ರಸ್ತಾವನೆಯನ್ನು ಮಂಡಿಸಲು ನೋಟಿಸ್‌ ಸಲ್ಲಿಸಿದ್ದಾರೆ. ಬುಧವಾರ ಗಾಂಧಿಯವರ ಭಾಷಣವನ್ನು ಉಲ್ಲೇಖಿಸಿ, ಕಾಂಗ್ರೆಸ್ ಸಂಸದರ ಭಾಷಣದಲ್ಲಿ ಯಾವುದೇ ಸತ್ಯಗಳಿಲ್ಲ ಹಾಗೂ ಎಲ್ಲಾ ಆರೋಪಗಳು ಆಧಾರರಹಿತವಾಗಿವೆ ಎಂದಿದ್ದಾರೆ.

ರಾಹುಲ್ ಗಾಂಧಿಯವರು ಜೀವಮಾನವಿಡೀ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಬೇಕೆಂದು ಬಿಜೆಪಿ ತನ್ನ ನೋಟಿಸ್‌ನಲ್ಲಿ ಒತ್ತಾಯಿಸಿದೆ.

ಬುಧವಾರ ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿಯವರು ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ಭಾರತ ಯಾರಿಂದ ತೈಲ ಖರೀದಿಸಬಹುದು ಅಥವಾ ಖರೀದಿಸಬಾರದು ಎಂದು ಆಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಮೂಲಕ ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲ ಎಂದು ಕಿಡಿ ಕಾರಿದರು.

ಅಮೆರಿಕದೊಂದಿಗೆ ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಳ್ಳುವ ಮೂಲಕ ಸರಕಾರ ಸಂಪೂರ್ಣ ಶರಣಾಗಿದೆ. ಈ ಮೊದಲು ಭಾರತದ ಉತ್ಪನ್ನಗಳಿಗೆ ಶೇ.3ರಷ್ಟು ಸುಂಕ ವಿಧಿಸಲಾಗುತ್ತಿತ್ತು. ಇದನ್ನು ಈಗ ಶೇ.18ಕ್ಕೆ ಏರಿಸಲಾಗಿದೆ. ಆದರೂ ಇದನ್ನು ಚಾರಿತ್ರಿಕ ಒಪ್ಪಂದ ಎಂದು ಸಂಭ್ರಮಿಸಲಾಗುತ್ತಿದೆ. ನಾವು ಜವಳಿ ಉತ್ಪನ್ನಗಳ ರಷ್ಟಿಗೆ ಶೇ. 18 ಸುಂಕ ನೀಡಬೇಕಾಗಿದೆ. ಆದರೆ ನೆರೆಯ ಬಾಂಗ್ಲಾದೇಶದ ಟೆಕ್ಸ್‌ ಟೈಲ್ ಉದ್ಯಮಕ್ಕೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಟ್ರಂಪ್ ಬಿಗಿಪಟ್ಟು ಹಾಕಿ ಮೋದಿ ಮೇಲೆ ಹಿಡಿತ ಸಾಧಿಸಿದ್ದಾರೆ ಎಂದು ರಾಹುಲ್ ದೂರಿದರು. ಮೋದಿ ಕಣ್ಣಲ್ಲಿ ಭಯ ಕಾಣುತ್ತಿದೆ. ಈ ಒಪ್ಪಂದದ ಬಳಿಕ ಅಮೆರಿಕದ ಆಮದು 46 ಬಿಲಿಯನ್ ಡಾಲರ್‌ಗಳಿಂದ 146 ಬಿಲಿಯನ್ ಡಾಲರ್‌ಗಳಿಗೆ ಏರಿಕೆಯಾಗಲಿದೆ. ಆದರೆ, ಅಮೆರಿಕಕ್ಕೆ ಭಾರತದ ಬಗ್ಗೆ ಯಾವುದೇ ಬದ್ಧತೆ ಇಲ್ಲ, ಆದರೆ ಭಾರತಕ್ಕೆ ಅಮೆರಿಕದ ಬದ್ರತೆ ಇದೆ. ಈ ಒಪ್ಪಂದ ಯಾವ ಪ್ರಧಾನಿ ಒಪ್ಪುತ್ತಿರಲಿಲ್ಲ. ನಾವು ಮೂರ್ಖರಂತೆ ನಿಂತಿದ್ದೇವೆ ಎಂದು ಆರೋಪಿಸಿದ ರಾಹುಲ್, ನಮ್ಮೊಂದಿಗೆ ಸೇವಕರಂತೆ ಅಲ್ಲ ಸಮಾನರಂತೆ ಮಾತನಾಡಿ ಎಂದು ಅಮೆರಿಕಕ್ಕೆ ಸಂದೇಶ ನೀಡಿದರು.

ಇನ್ನೂ ಬಿಜೆಪಿ ಸಂಸದರ ನೋಟಿಸ್ ಕುರಿತಂತೆ ಕಾಂಗ್ರೆಸ್ ಬೆಂಬಲಿಗರು ಕಿಡಿಕಾರಿದ್ದು, ರಾಹುಲ್ ಗಾಂಧಿ ಅವರ ಪ್ರಶ್ನೆಗೆ ಉತ್ತರಿಸಲಾಗದೆ. ಈ ರೀತಿ ಕಾಲಹರಣ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡುತ್ತಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]