ನವದೆಹಲಿ: ಕಾಂಗ್ರೆಸ್ (Congress) ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸಂಸತ್ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಬಿಜೆಪಿ (BJP) ಸಂಸದರು ನೋಟಿಸ್ ಸಲ್ಲಿಸಿದ್ದಾರೆ.
ಭಾರತ- ಅಮೇರಿಕಾ ನಡುವಿನ ಒಪ್ಪಂದದ ಕುರಿತಂತೆ ನಿನ್ನೆ ರಾಹುಲ್ ಗಾಂಧಿ ಅವರ ಬಜೆಟ್ ಮೇಲಿನ ಭಾಷಣದ ವಿರುದ್ಧ ಬಿಜೆಪಿ ಸಂಸದರು ಸಿಡಿದೆದ್ದಿದ್ದು, ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿಯವರ ಸದಸ್ಯತ್ವವನ್ನು ರದ್ದುಗೊಳಿಸಲು ಪ್ರಸ್ತಾವನೆಯನ್ನು ಮಂಡಿಸಲು ನೋಟಿಸ್ ಸಲ್ಲಿಸಿದ್ದಾರೆ. ಬುಧವಾರ ಗಾಂಧಿಯವರ ಭಾಷಣವನ್ನು ಉಲ್ಲೇಖಿಸಿ, ಕಾಂಗ್ರೆಸ್ ಸಂಸದರ ಭಾಷಣದಲ್ಲಿ ಯಾವುದೇ ಸತ್ಯಗಳಿಲ್ಲ ಹಾಗೂ ಎಲ್ಲಾ ಆರೋಪಗಳು ಆಧಾರರಹಿತವಾಗಿವೆ ಎಂದಿದ್ದಾರೆ.
ರಾಹುಲ್ ಗಾಂಧಿಯವರು ಜೀವಮಾನವಿಡೀ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಬೇಕೆಂದು ಬಿಜೆಪಿ ತನ್ನ ನೋಟಿಸ್ನಲ್ಲಿ ಒತ್ತಾಯಿಸಿದೆ.
ಬುಧವಾರ ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿಯವರು ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ಭಾರತ ಯಾರಿಂದ ತೈಲ ಖರೀದಿಸಬಹುದು ಅಥವಾ ಖರೀದಿಸಬಾರದು ಎಂದು ಆಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಮೂಲಕ ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲ ಎಂದು ಕಿಡಿ ಕಾರಿದರು.
India–US Trade Deal ने 140 करोड़ भारतीयों का भविष्य गिरवी रख दिया।
— Rahul Gandhi (@RahulGandhi) February 11, 2026
युवाओं के रोज़गार दांव पर,
किसानों की फसल समझौते की मेज़ पर,
और ऊर्जा सुरक्षा विदेशी शर्तों पर!
कोई PM बिना भारी दबाव के ऐसे घुटने नहीं टेकता। भारत समझता है – यह समझौता बराबरी का नहीं, मजबूरी का है।
Epstein… pic.twitter.com/8wzzQCa6nS
ಅಮೆರಿಕದೊಂದಿಗೆ ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಳ್ಳುವ ಮೂಲಕ ಸರಕಾರ ಸಂಪೂರ್ಣ ಶರಣಾಗಿದೆ. ಈ ಮೊದಲು ಭಾರತದ ಉತ್ಪನ್ನಗಳಿಗೆ ಶೇ.3ರಷ್ಟು ಸುಂಕ ವಿಧಿಸಲಾಗುತ್ತಿತ್ತು. ಇದನ್ನು ಈಗ ಶೇ.18ಕ್ಕೆ ಏರಿಸಲಾಗಿದೆ. ಆದರೂ ಇದನ್ನು ಚಾರಿತ್ರಿಕ ಒಪ್ಪಂದ ಎಂದು ಸಂಭ್ರಮಿಸಲಾಗುತ್ತಿದೆ. ನಾವು ಜವಳಿ ಉತ್ಪನ್ನಗಳ ರಷ್ಟಿಗೆ ಶೇ. 18 ಸುಂಕ ನೀಡಬೇಕಾಗಿದೆ. ಆದರೆ ನೆರೆಯ ಬಾಂಗ್ಲಾದೇಶದ ಟೆಕ್ಸ್ ಟೈಲ್ ಉದ್ಯಮಕ್ಕೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
ಟ್ರಂಪ್ ಬಿಗಿಪಟ್ಟು ಹಾಕಿ ಮೋದಿ ಮೇಲೆ ಹಿಡಿತ ಸಾಧಿಸಿದ್ದಾರೆ ಎಂದು ರಾಹುಲ್ ದೂರಿದರು. ಮೋದಿ ಕಣ್ಣಲ್ಲಿ ಭಯ ಕಾಣುತ್ತಿದೆ. ಈ ಒಪ್ಪಂದದ ಬಳಿಕ ಅಮೆರಿಕದ ಆಮದು 46 ಬಿಲಿಯನ್ ಡಾಲರ್ಗಳಿಂದ 146 ಬಿಲಿಯನ್ ಡಾಲರ್ಗಳಿಗೆ ಏರಿಕೆಯಾಗಲಿದೆ. ಆದರೆ, ಅಮೆರಿಕಕ್ಕೆ ಭಾರತದ ಬಗ್ಗೆ ಯಾವುದೇ ಬದ್ಧತೆ ಇಲ್ಲ, ಆದರೆ ಭಾರತಕ್ಕೆ ಅಮೆರಿಕದ ಬದ್ರತೆ ಇದೆ. ಈ ಒಪ್ಪಂದ ಯಾವ ಪ್ರಧಾನಿ ಒಪ್ಪುತ್ತಿರಲಿಲ್ಲ. ನಾವು ಮೂರ್ಖರಂತೆ ನಿಂತಿದ್ದೇವೆ ಎಂದು ಆರೋಪಿಸಿದ ರಾಹುಲ್, ನಮ್ಮೊಂದಿಗೆ ಸೇವಕರಂತೆ ಅಲ್ಲ ಸಮಾನರಂತೆ ಮಾತನಾಡಿ ಎಂದು ಅಮೆರಿಕಕ್ಕೆ ಸಂದೇಶ ನೀಡಿದರು.
ಇನ್ನೂ ಬಿಜೆಪಿ ಸಂಸದರ ನೋಟಿಸ್ ಕುರಿತಂತೆ ಕಾಂಗ್ರೆಸ್ ಬೆಂಬಲಿಗರು ಕಿಡಿಕಾರಿದ್ದು, ರಾಹುಲ್ ಗಾಂಧಿ ಅವರ ಪ್ರಶ್ನೆಗೆ ಉತ್ತರಿಸಲಾಗದೆ. ಈ ರೀತಿ ಕಾಲಹರಣ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡುತ್ತಿದ್ದಾರೆ.